<p><strong>ನವದೆಹಲಿ</strong>: ತೆಲುಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.</p><p>ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಏಕಕಾಲಕ್ಕೆ ನಡೆಯಲಿದ್ದು, ಈ ಭೇಟಿ ನಾಯ್ಡು ಅವರು ಮತ್ತೆ ಎನ್ಡಿಎಗೆ ಜೊತೆ ಕೈಜೋಡಿಸಲಿದ್ದಾರೆಯೇ ಎಂಬ ಅನುಮಾನಗಳನ್ನು ಹುಟ್ಟುಹಾಕಿದೆ. </p><p>ಒಂದು ವೇಳೆ ಎನ್ಡಿಎ ಜೊತೆ ಟಿಡಿಪಿ ಮೈತ್ರಿಯಾದರೆ ಪ್ರತಿಪಕ್ಷಗಳೊಂದಿಗೆ ಕೈಜೋಡಿಸಿ ಮತ್ತೆ ಎನ್ಡಿಎಗೆ ಮರಳಿದವರ ಸಾಲಿಗೆ ನಾಯ್ಡು ಕೂಡ ಸೇರ್ಪಡೆಯಾಗುತ್ತಾರೆ. ಇತ್ತೀಚೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಎನ್ಡಿಎಗೆ ಮರಳಿದ್ದರು.</p><p>‘ಬಿಜೆಪಿಯೊಂದಿಗೆ ಕೈಜೋಡಿಸಲು ನಾಯ್ಡು ಅವರು ಉತ್ಸುಕರಾಗಿದ್ದಾರೆ’ ಎಂದು ಮೂಲಗಳು ತಿಳಿಸಿವೆ. ನಾಯ್ಡು ಅವರು ಎನ್ಡಿಎ ಜೊತೆ ಕೈಜೋಡಿಸಿದರೆ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂಬ ಲೆಕ್ಕಚಾರವೂ ಇದರ ಹಿಂದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ತೆಲುಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.</p><p>ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಏಕಕಾಲಕ್ಕೆ ನಡೆಯಲಿದ್ದು, ಈ ಭೇಟಿ ನಾಯ್ಡು ಅವರು ಮತ್ತೆ ಎನ್ಡಿಎಗೆ ಜೊತೆ ಕೈಜೋಡಿಸಲಿದ್ದಾರೆಯೇ ಎಂಬ ಅನುಮಾನಗಳನ್ನು ಹುಟ್ಟುಹಾಕಿದೆ. </p><p>ಒಂದು ವೇಳೆ ಎನ್ಡಿಎ ಜೊತೆ ಟಿಡಿಪಿ ಮೈತ್ರಿಯಾದರೆ ಪ್ರತಿಪಕ್ಷಗಳೊಂದಿಗೆ ಕೈಜೋಡಿಸಿ ಮತ್ತೆ ಎನ್ಡಿಎಗೆ ಮರಳಿದವರ ಸಾಲಿಗೆ ನಾಯ್ಡು ಕೂಡ ಸೇರ್ಪಡೆಯಾಗುತ್ತಾರೆ. ಇತ್ತೀಚೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಎನ್ಡಿಎಗೆ ಮರಳಿದ್ದರು.</p><p>‘ಬಿಜೆಪಿಯೊಂದಿಗೆ ಕೈಜೋಡಿಸಲು ನಾಯ್ಡು ಅವರು ಉತ್ಸುಕರಾಗಿದ್ದಾರೆ’ ಎಂದು ಮೂಲಗಳು ತಿಳಿಸಿವೆ. ನಾಯ್ಡು ಅವರು ಎನ್ಡಿಎ ಜೊತೆ ಕೈಜೋಡಿಸಿದರೆ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂಬ ಲೆಕ್ಕಚಾರವೂ ಇದರ ಹಿಂದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>