‘ಟಿಡಿಪಿ ಯಾವಾಗಲೂ ಸಾಮಾಜಿಕ ನ್ಯಾಯದ ಪರ ನಿಲ್ಲುತ್ತದೆ. ಈ ಹಿಂದೆ ಕೆ.ಆರ್.ನಾರಾಯಣನ್ ಮತ್ತು ಎ.ಪಿ.ಜೆ.ಅಬ್ದುಲ್ ಕಲಾಂ ಅವರಿಗೆ ಬೆಂಬಲ ನೀಡಿತ್ತು. ಅದೇ ರೀತಿ ಈ ಬಾರಿ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಸ್ಪರ್ಧಿಸಿರುವ ಆದಿವಾಸಿ ಮಹಿಳೆ, ದ್ರೌಪದಿ ಮುರ್ಮು ಅವರನ್ನುಪಕ್ಷವು ಬೆಂಬಲಿಸಲಿದೆ’ ಎಂದು ಅವರು ತಿಳಿಸಿದ್ದಾರೆ.