<p><strong>ಛಿಂದ್ವಾಡ</strong>: ಉದ್ಯೋಗ ಕಳೆದುಕೊಳ್ಳುವ ಆತಂಕದಿಂದ ತಮ್ಮ ನಾಲ್ಕನೇ ಮಗುವನ್ನು ಶಿಕ್ಷಕ ದಂಪತಿ ಅರಣ್ಯದಲ್ಲಿ ಬಿಟ್ಟುಹೋದ ಘಟನೆ ಮಧ್ಯಪ್ರದೇಶದ ಛಿಂದ್ವಾಡಾ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಒಂದೇ ಸಮನೆ ಮಗು ಅಳುತ್ತಿದ್ದುದನ್ನು ಕೇಳಿದ ಬೈಕ್ ಸವಾರರೊಬ್ಬರು ಸ್ಥಳಕ್ಕೆ ತೆರಳಿದಾಗ ಕೃತ್ಯ ಬಯಲಿಗೆ ಬಂದಿದೆ. ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಸೆಪ್ಟೆಂಬರ್ 24ರಂದು ಗಂಡು ಮಗು ಜನಿಸಿತ್ತು. ಮಗುವಿನ ಪೋಷಕರು ಅದನ್ನು ಅರಣ್ಯದಲ್ಲಿ ಬಿಟ್ಟುಹೋಗಿದ್ದರು ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಕಲ್ಯಾಣಿ ಬರ್ಕಾಡೆ ತಿಳಿಸಿದರು.</p>.<p>ಮಗುವನ್ನು ರಕ್ಷಣೆ ಮಾಡಲಾಗಿದೆ. ತನಿಖೆ ನಡೆಸಿ, ಮಗುವಿನ ಪೋಷಕರನ್ನು ಪತ್ತೆ ಮಾಡಲಾಯಿತು ಎಂದು ತಿಳಿಸಿದರು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಬಬ್ಲು ದಾಂಡೋಲಿಯಾ (38) ಮತ್ತು ರಾಜಕುಮಾರಿ ದಾಂಡೋಲಿಯಾ (28) ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ ಎಂದು ತಿಳಿಸಿದರು.</p>.<p>ಮಧ್ಯಪ್ರದೇಶದ ನಾಗರಿಕ ಸೇವಾ ನಿಯಮಗಳ ಪ್ರಕಾರ, 2001ರ ಜನವರಿ 26ರ ಬಳಿಕ ಸರ್ಕಾರಿ ಉದ್ಯೋಗಿಯೊಬ್ಬರು ನಾಲ್ಕನೇ ಮಗುವನ್ನು ಪಡೆದಲ್ಲಿ ಅವರು ಹುದ್ದೆಯಲ್ಲಿ ಮುಂದುವರಿಯಲು ಅನರ್ಹರಾಗುತ್ತಾರೆ.</p>.<p>ದಂಪತಿಯ ನೇಮಕಾತಿ ಕುರಿತ ದಾಖಲೆಗಳನ್ನು ಕೇಳಲಾಗಿದೆ. ತನಿಖೆ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಗೋಪಾಲ್ ಸಿಂಗ್ ಬಘೇಲ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಛಿಂದ್ವಾಡ</strong>: ಉದ್ಯೋಗ ಕಳೆದುಕೊಳ್ಳುವ ಆತಂಕದಿಂದ ತಮ್ಮ ನಾಲ್ಕನೇ ಮಗುವನ್ನು ಶಿಕ್ಷಕ ದಂಪತಿ ಅರಣ್ಯದಲ್ಲಿ ಬಿಟ್ಟುಹೋದ ಘಟನೆ ಮಧ್ಯಪ್ರದೇಶದ ಛಿಂದ್ವಾಡಾ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಒಂದೇ ಸಮನೆ ಮಗು ಅಳುತ್ತಿದ್ದುದನ್ನು ಕೇಳಿದ ಬೈಕ್ ಸವಾರರೊಬ್ಬರು ಸ್ಥಳಕ್ಕೆ ತೆರಳಿದಾಗ ಕೃತ್ಯ ಬಯಲಿಗೆ ಬಂದಿದೆ. ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಸೆಪ್ಟೆಂಬರ್ 24ರಂದು ಗಂಡು ಮಗು ಜನಿಸಿತ್ತು. ಮಗುವಿನ ಪೋಷಕರು ಅದನ್ನು ಅರಣ್ಯದಲ್ಲಿ ಬಿಟ್ಟುಹೋಗಿದ್ದರು ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಕಲ್ಯಾಣಿ ಬರ್ಕಾಡೆ ತಿಳಿಸಿದರು.</p>.<p>ಮಗುವನ್ನು ರಕ್ಷಣೆ ಮಾಡಲಾಗಿದೆ. ತನಿಖೆ ನಡೆಸಿ, ಮಗುವಿನ ಪೋಷಕರನ್ನು ಪತ್ತೆ ಮಾಡಲಾಯಿತು ಎಂದು ತಿಳಿಸಿದರು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಬಬ್ಲು ದಾಂಡೋಲಿಯಾ (38) ಮತ್ತು ರಾಜಕುಮಾರಿ ದಾಂಡೋಲಿಯಾ (28) ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ ಎಂದು ತಿಳಿಸಿದರು.</p>.<p>ಮಧ್ಯಪ್ರದೇಶದ ನಾಗರಿಕ ಸೇವಾ ನಿಯಮಗಳ ಪ್ರಕಾರ, 2001ರ ಜನವರಿ 26ರ ಬಳಿಕ ಸರ್ಕಾರಿ ಉದ್ಯೋಗಿಯೊಬ್ಬರು ನಾಲ್ಕನೇ ಮಗುವನ್ನು ಪಡೆದಲ್ಲಿ ಅವರು ಹುದ್ದೆಯಲ್ಲಿ ಮುಂದುವರಿಯಲು ಅನರ್ಹರಾಗುತ್ತಾರೆ.</p>.<p>ದಂಪತಿಯ ನೇಮಕಾತಿ ಕುರಿತ ದಾಖಲೆಗಳನ್ನು ಕೇಳಲಾಗಿದೆ. ತನಿಖೆ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಗೋಪಾಲ್ ಸಿಂಗ್ ಬಘೇಲ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>