<p><strong>ಭೋಪಾಲ್:</strong> ‘ಬಿಯರ್’ ಕುಡಿಯುವಂತೆ ಶಿಕ್ಷಕರೊಬ್ಬರ ಕಿರುಕುಳ ತಾಳಲಾರದೆ 12ನೇ ತರಗತಿಯ ವಿದ್ಯಾರ್ಥಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದೆ. </p><p>ಘಟನೆಗೂ ಮುನ್ನ ವಿಡಿಯೊ ಮಾಡಿರುವ ವಿಧ್ಯಾರ್ಥಿ, ‘ಈ ಶಿಕ್ಷಕನ ಕಿರುಕುಳದಿಂದ ಇನ್ನಷ್ಟು ಮಕ್ಕಳು ಪ್ರಾಣ ಕಳೆದುಕೊಳ್ಳಲಿದ್ದಾರೆ’ ಎಂದು ಅಳಲು ತೊಡಿಕೊಂಡಿದ್ದಾನೆ. </p><p>ಜನವರಿ 22ರಂದು ಭೋಪಾಲ್ನಿಂದ 280 ಕಿಲೋಮೀಟರ್ ದೂರದಲ್ಲಿರುವ ಕೋಲಾರಸ್ ರೈಲು ನಿಲ್ದಾಣದ ಬಳಿ ವಿದ್ಯಾರ್ಥಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈಲು ಚಾಲಕ ತುರ್ತು ಬ್ರೇಕ್ ಹಾಕಿದರೂ ವಿದ್ಯಾರ್ಥಿಯನ್ನು ಪ್ರಾಣಾಪಾಯದಿಂದ ಪಾರುಮಾಡಲು ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ. </p><p>ಕನಿಷ್ಠ ಒಂದು ಬಾರಿಯಾದರೂ ಸಹವರ್ತಿ ವಿದ್ಯಾರ್ಥಿಗಳೊಂದಿಗೆ ಸೇರಿ ‘ಬಿಯರ್’ ಕುಡಿಯಬೇಕು. ಇಲ್ಲದಿದ್ದರೆ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ನೀಡುವುದಾಗಿ ವಿದ್ಯಾರ್ಥಿಗೆ ಶಿಕ್ಷಕ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. </p><p>ಘಟನೆ ಸಂಬಂಧ ವಿದ್ಯಾರ್ಥಿಯ ವಿಡಿಯೊ ಆಧರಿಸಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ‘ಬಿಯರ್’ ಕುಡಿಯುವಂತೆ ಶಿಕ್ಷಕರೊಬ್ಬರ ಕಿರುಕುಳ ತಾಳಲಾರದೆ 12ನೇ ತರಗತಿಯ ವಿದ್ಯಾರ್ಥಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದೆ. </p><p>ಘಟನೆಗೂ ಮುನ್ನ ವಿಡಿಯೊ ಮಾಡಿರುವ ವಿಧ್ಯಾರ್ಥಿ, ‘ಈ ಶಿಕ್ಷಕನ ಕಿರುಕುಳದಿಂದ ಇನ್ನಷ್ಟು ಮಕ್ಕಳು ಪ್ರಾಣ ಕಳೆದುಕೊಳ್ಳಲಿದ್ದಾರೆ’ ಎಂದು ಅಳಲು ತೊಡಿಕೊಂಡಿದ್ದಾನೆ. </p><p>ಜನವರಿ 22ರಂದು ಭೋಪಾಲ್ನಿಂದ 280 ಕಿಲೋಮೀಟರ್ ದೂರದಲ್ಲಿರುವ ಕೋಲಾರಸ್ ರೈಲು ನಿಲ್ದಾಣದ ಬಳಿ ವಿದ್ಯಾರ್ಥಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈಲು ಚಾಲಕ ತುರ್ತು ಬ್ರೇಕ್ ಹಾಕಿದರೂ ವಿದ್ಯಾರ್ಥಿಯನ್ನು ಪ್ರಾಣಾಪಾಯದಿಂದ ಪಾರುಮಾಡಲು ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ. </p><p>ಕನಿಷ್ಠ ಒಂದು ಬಾರಿಯಾದರೂ ಸಹವರ್ತಿ ವಿದ್ಯಾರ್ಥಿಗಳೊಂದಿಗೆ ಸೇರಿ ‘ಬಿಯರ್’ ಕುಡಿಯಬೇಕು. ಇಲ್ಲದಿದ್ದರೆ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ನೀಡುವುದಾಗಿ ವಿದ್ಯಾರ್ಥಿಗೆ ಶಿಕ್ಷಕ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. </p><p>ಘಟನೆ ಸಂಬಂಧ ವಿದ್ಯಾರ್ಥಿಯ ವಿಡಿಯೊ ಆಧರಿಸಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>