ನವದೆಹಲಿ: ‘ಕೋವಿಡ್–19 ಸಾಂಕ್ರಾಮಿಕದ ಸಮಯದಲ್ಲಿ ವಿದ್ಯಾರ್ಥಿಗಳ ಶಿಕ್ಷಣ ಪಯಣಕ್ಕೆ ಯಾವುದೇ ತೊಂದರೆಯಾಗದಂತೆ ಶಿಕ್ಷಕರು ನೋಡಿಕೊಂಡಿದ್ದಾರೆ. ಅದರಲ್ಲಿ ಅವರು ಆವಿಷ್ಕಾರಗಳನ್ನು ಕೈಗೊಂಡಿರುವ ರೀತಿ ನಿಜಕ್ಕೂ ಶ್ಲಾಘನೀಯ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಶಿಕ್ಷಕರ ದಿನಾಚರಣೆಯ ಅಂಗವಾಗಿ ದೇಶದ ಭೋದನಾ ಸಮೂಹಕ್ಕೆ ಶುಭಕೋರಿರುವ ಅವರು, ‘ಯುವ ಮನಸ್ಸುಗಳನ್ನು ಪೋಷಿಸುವಲ್ಲಿಶಿಕ್ಷಕರು ಸದಾ ಪ್ರಮುಖ ಪಾತ್ರವಹಿಸಿದ್ದಾರೆ’ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಸೆಪ್ಟೆಂಬರ್ 5ರಂದು ಮಾಜಿ ರಾಷ್ಟ್ರಪತಿ ಡಾ.ಎಸ್. ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.
‘ರಾಧಾಕೃಷ್ಣನ್ ಅವರ ಜಯಂತಿಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ದೇಶಕ್ಕಾಗಿ ಅವರು ನೀಡಿದ ಕೊಡುಗೆಗಳನ್ನು ನಾವು ಸದಾ ಸ್ಮರಿಸುತ್ತೇವೆ’ ಎಂದು ಪ್ರಧಾನಿ ಮತ್ತೊಂದು ಟ್ವೀಟ್ನಲ್ಲಿ ಹೇಳಿದ್ದಾರೆ.
On Teachers' Day, greetings to the entire teaching fraternity, which has always played a pivotal role in nurturing young minds. It is commendable how teachers have innovated and ensured the education journey of students continues in the COVID-19 times.