<p>ಸಪ್ತಸಾಗರದಾಚೆಯ ನಾಡಿನಲ್ಲಿ ಟಿ20 ವಿಶ್ವಕಪ್ ಜಯಿಸಿ ಬಂದ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವನ್ನು ‘ಕನಸಿನ ನಗರಿ’ ಮುಂಬೈ ಅದ್ಧೂರಿಯಾಗಿ ಸ್ವಾಗತಿಸಿತು. ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಮಧ್ಯಾಹ್ನದಿಂದಲೇ ಜನ ಸೇರಿದ್ದರು. ಬಾರ್ಬಡೋಸ್ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ತಂಡವು ಗುರುವಾರ ಬೆಳಿಗ್ಗೆ ದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಔತಣ ಸ್ವೀಕರಿಸಿದ ನಂತರದ ಮುಂಬೈಗೆ ತಂಡವು ಬಂದಿತು. ಸುರಿಯುವ ಮಳೆಯನ್ನು ಲೆಕ್ಕಿಸದ ಜನ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>