<p><strong>ಕಟಕ್ (ಒಡಿಶಾ):</strong> ‘ತಂತ್ರಜ್ಞಾನವು ಮಾನವ ನ್ಯಾಯ ನಿರ್ಣಯದ ವೇಗ ಹೆಚ್ಚಿಸಲು ಮತ್ತು ದೋಷಗಳನ್ನು ಸರಿಪಡಿಸಲು ಬಳಕೆ ಆಗಬೇಕು. ಅದಕ್ಕೆ ಪರ್ಯಾಯವಾಗಿ ಬಳಕೆ ಆಗಲು ಸಾಧ್ಯವಿಲ್ಲ’ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದರು.</p>.<p>‘ಜನ ಸಾಮಾನ್ಯರಿಗೆ ನ್ಯಾಯವನ್ನು ಖಚಿತಪಡಿಸುವುದು: ಕಾನೂನು ಹೋರಾಟದ ವೆಚ್ಚ ಮತ್ತು ವಿಳಂಬವನ್ನು ಕಡಿಮೆ ಮಾಡುವ ತಂತ್ರಗಳು’ ವಿಷಯದಲ್ಲಿ ಏರ್ಪಡಿಸಿದ್ದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಅವರು ಭಾನುವಾರ ಮಾತನಾಡಿದರು.</p>.<p>‘ವಿಚಾರಣಾ ನ್ಯಾಯಾಲಯದಿಂದ ಸಾಂವಿಧಾನಿಕ ನ್ಯಾಯಾಲಯದವರೆಗೆ ನ್ಯಾಯಾಂಗ ವ್ಯವಸ್ಥೆಯ ಪ್ರತಿಯೊಂದು ಹಂತದಲ್ಲೂ ಹಲವು ವರ್ಷಗಳಿಂದ ಅನೇಕ ಪ್ರಕರಣಗಳು ಬಾಕಿ ಉಳಿದಿವೆ. ಮೇಲಿನ ನ್ಯಾಯಾಲಯಗಳಲ್ಲಿ ಬಾಕಿ ಪ್ರಕರಣಗಳ ಸಂಖ್ಯೆ ಹೆಚ್ಚಿದಷ್ಟು, ಕೆಳ ಹಂತದ ನ್ಯಾಯಾಲಯಗಳ ಮೇಲಿನ ಒತ್ತಡ ಅಧಿಕವಾಗುತ್ತದೆ’ ಎಂದು ಹೇಳಿದರು. </p>.<p>ಬಾಕಿ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಲು ನ್ಯಾಯಾಂಗ ಮೂಲಸೌಕರ್ಯವನ್ನು ಬಲಪಡಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.</p>.<p>‘ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಸಾಕಷ್ಟು ನ್ಯಾಯಾಲಯಗಳಿಲ್ಲದಿದ್ದರೆ, ಅತ್ಯಂತ ಪ್ರಾಮಾಣಿಕ ನ್ಯಾಯಾಂಗ ವ್ಯವಸ್ಥೆ ಕೂಡಾ ಒತ್ತಡಕ್ಕೆ ಸಿಲುಕಿ ಕುಸಿಯುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಟಕ್ (ಒಡಿಶಾ):</strong> ‘ತಂತ್ರಜ್ಞಾನವು ಮಾನವ ನ್ಯಾಯ ನಿರ್ಣಯದ ವೇಗ ಹೆಚ್ಚಿಸಲು ಮತ್ತು ದೋಷಗಳನ್ನು ಸರಿಪಡಿಸಲು ಬಳಕೆ ಆಗಬೇಕು. ಅದಕ್ಕೆ ಪರ್ಯಾಯವಾಗಿ ಬಳಕೆ ಆಗಲು ಸಾಧ್ಯವಿಲ್ಲ’ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದರು.</p>.<p>‘ಜನ ಸಾಮಾನ್ಯರಿಗೆ ನ್ಯಾಯವನ್ನು ಖಚಿತಪಡಿಸುವುದು: ಕಾನೂನು ಹೋರಾಟದ ವೆಚ್ಚ ಮತ್ತು ವಿಳಂಬವನ್ನು ಕಡಿಮೆ ಮಾಡುವ ತಂತ್ರಗಳು’ ವಿಷಯದಲ್ಲಿ ಏರ್ಪಡಿಸಿದ್ದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಅವರು ಭಾನುವಾರ ಮಾತನಾಡಿದರು.</p>.<p>‘ವಿಚಾರಣಾ ನ್ಯಾಯಾಲಯದಿಂದ ಸಾಂವಿಧಾನಿಕ ನ್ಯಾಯಾಲಯದವರೆಗೆ ನ್ಯಾಯಾಂಗ ವ್ಯವಸ್ಥೆಯ ಪ್ರತಿಯೊಂದು ಹಂತದಲ್ಲೂ ಹಲವು ವರ್ಷಗಳಿಂದ ಅನೇಕ ಪ್ರಕರಣಗಳು ಬಾಕಿ ಉಳಿದಿವೆ. ಮೇಲಿನ ನ್ಯಾಯಾಲಯಗಳಲ್ಲಿ ಬಾಕಿ ಪ್ರಕರಣಗಳ ಸಂಖ್ಯೆ ಹೆಚ್ಚಿದಷ್ಟು, ಕೆಳ ಹಂತದ ನ್ಯಾಯಾಲಯಗಳ ಮೇಲಿನ ಒತ್ತಡ ಅಧಿಕವಾಗುತ್ತದೆ’ ಎಂದು ಹೇಳಿದರು. </p>.<p>ಬಾಕಿ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಲು ನ್ಯಾಯಾಂಗ ಮೂಲಸೌಕರ್ಯವನ್ನು ಬಲಪಡಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.</p>.<p>‘ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಸಾಕಷ್ಟು ನ್ಯಾಯಾಲಯಗಳಿಲ್ಲದಿದ್ದರೆ, ಅತ್ಯಂತ ಪ್ರಾಮಾಣಿಕ ನ್ಯಾಯಾಂಗ ವ್ಯವಸ್ಥೆ ಕೂಡಾ ಒತ್ತಡಕ್ಕೆ ಸಿಲುಕಿ ಕುಸಿಯುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>