ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎನ್ನುವ ಆರೋಪವನ್ನು ನಿರಾಕರಿಸಿರುವ ನಿರ್ಮಲ್, ದೂರು ಬಂದ ಬಳಿಕ ಅವರಿಂದ ಮುಚ್ಚಳಿಕೆ ಬರೆಯಿಸಿ ಕಳುಹಿಸಿದ್ದೆವು ಎಂದು ಹೇಳಿದ್ದಾರೆ.
ಈ ಹಿಂದೆ ದೂರು ನೀಡಿದಾಗ ಪೊಲೀಸರು ಬಾಲಕಿಯ ತಂದೆಯನ್ನು ಬಂಧಿಸಿದ್ದರು. ಈಗ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಖಾರ್ಗೋನ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮರಾಜ್ ಮೀನಾ ತಿಳಿಸಿದ್ದಾರೆ.