<p><strong>ಖಾರ್ಗೋನ್:</strong> ಮದ್ಯಪಾನ ಮಾಡಿ ತಾಯಿಗೆ ಥಳಿಸುತ್ತಿದ್ದ ತಂದೆಯ ವರ್ತನೆಯಿಂದ ನೊಂದು 17 ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಹಲ್ಲೆ: ಮತಗಟ್ಟೆ ಬಳಿ ನೀರಗಂಟಿ ಆತ್ಮಹತ್ಯೆ .<p>ರಾವತ್ ಪಲಾಸಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದಾಗಿ ಬರ್ವಾ ಪೊಲೀಸ್ ಠಾಣೆಯ ಉಸ್ತುವಾರಿ ನಿರ್ಮಲ್ ಶ್ರೀನಿವಾಸ್ ತಿಳಿಸಿದ್ದಾರೆ.</p><p>ಪತ್ರ ಬರೆದಿಟ್ಟು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ‘ನನ್ನ ತಂದೆ ನಿತ್ಯ ಕುಡಿದು ಬಂದು ತಾಯಿಯ ಮೇಲೆ ದೌರ್ಜನ್ಯ ಎಸಗುತ್ತಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ’ ಎಂದು ಹೇಳಿದ್ದಾಳೆ.</p>.ಹಗರಿಬೊಮ್ಮನಹಳ್ಳಿ: ಸಾಲ ಬಾಧೆ, ವಿಷ ಸೇವಿಸಿ ರೈತ ಆತ್ಮಹತ್ಯೆ.<p>ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎನ್ನುವ ಆರೋಪವನ್ನು ನಿರಾಕರಿಸಿರುವ ನಿರ್ಮಲ್, ದೂರು ಬಂದ ಬಳಿಕ ಅವರಿಂದ ಮುಚ್ಚಳಿಕೆ ಬರೆಯಿಸಿ ಕಳುಹಿಸಿದ್ದೆವು ಎಂದು ಹೇಳಿದ್ದಾರೆ.</p><p>ಈ ಹಿಂದೆ ದೂರು ನೀಡಿದಾಗ ಪೊಲೀಸರು ಬಾಲಕಿಯ ತಂದೆಯನ್ನು ಬಂಧಿಸಿದ್ದರು. ಈಗ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಖಾರ್ಗೋನ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮರಾಜ್ ಮೀನಾ ತಿಳಿಸಿದ್ದಾರೆ.</p>.ಬೆಂಕಿ ಹಚ್ಚಿಕೊಂಡು ಉಪನ್ಯಾಸಕ ಆತ್ಮಹತ್ಯೆ.<p>ಮೃತ ಬಾಲಕಿಯ ಕಿರಿಯ ಸಹೋದರಿ ಕೂಡ ತಂದೆ ಕುಡಿದು ಬಂದು ತಾಯಿಗೆ ಹೊಡೆಯುತ್ತಿದ್ದರೆಂದೂ, ಹಲವು ಬಾರಿ ದೂರು ನೀಡಿದರೂ ಪೊಲೀಸರು ಕ್ರಮ ತೆಗೆದುಕೊಂಡಿಲ್ಲವೆಂದೂ ದೂರಿದ್ದಾರೆ.</p><p>ತಂದೆಯ ಈ ನಡವಳಿಕೆಯಿಂದ ಬೇಸತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ಹೇಳಿದ್ದಾರೆ.</p> .ಮಾನಸಿಕ ಖಿನ್ನತೆ ಶಂಕೆ: ನೇಣು ಹಾಕಿಕೊಂಡು ಆತ್ಮಹತ್ಯೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಾರ್ಗೋನ್:</strong> ಮದ್ಯಪಾನ ಮಾಡಿ ತಾಯಿಗೆ ಥಳಿಸುತ್ತಿದ್ದ ತಂದೆಯ ವರ್ತನೆಯಿಂದ ನೊಂದು 17 ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಹಲ್ಲೆ: ಮತಗಟ್ಟೆ ಬಳಿ ನೀರಗಂಟಿ ಆತ್ಮಹತ್ಯೆ .<p>ರಾವತ್ ಪಲಾಸಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದಾಗಿ ಬರ್ವಾ ಪೊಲೀಸ್ ಠಾಣೆಯ ಉಸ್ತುವಾರಿ ನಿರ್ಮಲ್ ಶ್ರೀನಿವಾಸ್ ತಿಳಿಸಿದ್ದಾರೆ.</p><p>ಪತ್ರ ಬರೆದಿಟ್ಟು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ‘ನನ್ನ ತಂದೆ ನಿತ್ಯ ಕುಡಿದು ಬಂದು ತಾಯಿಯ ಮೇಲೆ ದೌರ್ಜನ್ಯ ಎಸಗುತ್ತಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ’ ಎಂದು ಹೇಳಿದ್ದಾಳೆ.</p>.ಹಗರಿಬೊಮ್ಮನಹಳ್ಳಿ: ಸಾಲ ಬಾಧೆ, ವಿಷ ಸೇವಿಸಿ ರೈತ ಆತ್ಮಹತ್ಯೆ.<p>ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎನ್ನುವ ಆರೋಪವನ್ನು ನಿರಾಕರಿಸಿರುವ ನಿರ್ಮಲ್, ದೂರು ಬಂದ ಬಳಿಕ ಅವರಿಂದ ಮುಚ್ಚಳಿಕೆ ಬರೆಯಿಸಿ ಕಳುಹಿಸಿದ್ದೆವು ಎಂದು ಹೇಳಿದ್ದಾರೆ.</p><p>ಈ ಹಿಂದೆ ದೂರು ನೀಡಿದಾಗ ಪೊಲೀಸರು ಬಾಲಕಿಯ ತಂದೆಯನ್ನು ಬಂಧಿಸಿದ್ದರು. ಈಗ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಖಾರ್ಗೋನ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮರಾಜ್ ಮೀನಾ ತಿಳಿಸಿದ್ದಾರೆ.</p>.ಬೆಂಕಿ ಹಚ್ಚಿಕೊಂಡು ಉಪನ್ಯಾಸಕ ಆತ್ಮಹತ್ಯೆ.<p>ಮೃತ ಬಾಲಕಿಯ ಕಿರಿಯ ಸಹೋದರಿ ಕೂಡ ತಂದೆ ಕುಡಿದು ಬಂದು ತಾಯಿಗೆ ಹೊಡೆಯುತ್ತಿದ್ದರೆಂದೂ, ಹಲವು ಬಾರಿ ದೂರು ನೀಡಿದರೂ ಪೊಲೀಸರು ಕ್ರಮ ತೆಗೆದುಕೊಂಡಿಲ್ಲವೆಂದೂ ದೂರಿದ್ದಾರೆ.</p><p>ತಂದೆಯ ಈ ನಡವಳಿಕೆಯಿಂದ ಬೇಸತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ಹೇಳಿದ್ದಾರೆ.</p> .ಮಾನಸಿಕ ಖಿನ್ನತೆ ಶಂಕೆ: ನೇಣು ಹಾಕಿಕೊಂಡು ಆತ್ಮಹತ್ಯೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>