<p><strong>ಬಹರಾಯಿಚ್:</strong> ಸರ್ಕಾರಿ ಶಾಲೆಯಲ್ಲಿ ಆಯೋಜನೆಗೊಂಡಿದ್ದ ಓಟದ ಸ್ಪರ್ಧೆಯ ಪೂರ್ವಭಾವಿ ಸಿದ್ಧತೆಯ ಸಂದರ್ಭದಲ್ಲಿ ಮೂರನೆಯವಳಾಗಿ ಹೊರಹೊಮ್ಮಿದ 15 ವರ್ಷದ ಬಾಲಕಿ ಸಂಭ್ರಮಿಸುವ ಮುನ್ನವೇ ಆಕೆಯನ್ನು ಸಾವು ಬರಸೆಳೆದ ಘಟನೆ ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ ನಾನ್ಪುರದಲ್ಲಿ ಗುರುವಾರ ನಡೆದಿದೆ.</p><p>ಮೃತ ಬಾಲಕಿ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಭಾಗಾಪೂರ್ವದ ನಿವಾಸಿ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 12 ಜನ ಸಹಪಾಠಿಗಳೊಂದಿಗೆ 100 ಮೀ ಓಟದಲ್ಲಿ ಪಾಲ್ಗೊಂಡಿದ್ದ ಈಕೆ ಮೂರನೆಯವಳಾಗಿ ಹೊರಹೊಮ್ಮಿದ್ದಳು ಎಂದು ಶಾಲೆಯ ಮೂಲಗಳು ತಿಳಿಸಿವೆ. </p><p>ಓಟ ಪೂರ್ಣಗೊಂಡ ಕೆಲವೇ ಕ್ಷಣಗಳಲ್ಲಿ ಪ್ರಜ್ಞೆ ತಪ್ಪಿ ಕುಸಿದುಬಿದ್ದಳು. ತಕ್ಷಣ ಆಂಬುಲೆನ್ಸ್ ಮೂಲಕ ಈಕೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತು. ಆದರೆ ಅದಾಗಾಗಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯ ಡಾ. ಸುರೇಶ್ ವರ್ಮಾ ಘೋಷಿಸಿದರು</p><p>ಪ್ರಾಥಮಿಕ ಪರೀಕ್ಷೆಯಲ್ಲಿ ಬಾಲಕಿಯು ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಸಾವಿಗೆ ನೈಜ ಕಾರಣ ತಿಳಿಯಲಿದೆ. ಕ್ರೀಡೆ ಹಾಗೂ ದೈಹಿಕ ವ್ಯಾಯಾಮದ ಸಮಯದಲ್ಲಿ ಹದಿಹರೆಯದವರು ಹೃದಯ ಸ್ತಂಭನಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ ಎಂದು ವೈದ್ಯರು ಹೇಳಿದ್ದಾರೆ.</p><p>ಮೃತ ಬಾಲಕಿಯು ಯಾವುದೇ ಆನಾರೋಗ್ಯದಿಂದ ಬಳಲುತ್ತಿರಲಿಲ್ಲ, ಕಾಲೇಜಿನಲ್ಲಿ ಸುಡು ಬಿಸಿಲಿನಲ್ಲಿ ಓಟದ ಸ್ಪರ್ಧೆಯನ್ನು ನಡೆಸಲಾಗಿದೆ. ಸಕಾಲದಲ್ಲಿ ವೈದ್ಯಕೀಯ ಸೌಲಭ್ಯ ದೊರೆತಿದ್ದರೆ ಜೀವ ಉಳಿಯುತಿತ್ತು. ಶಾಲೆಯ ಉದಾಸೀನವೇ ಸಾವಿಗೆ ಕಾರಣ ಎಂದು ಬಾಲಕಿಯ ಅಣ್ಣ ಶಿವಂ ಆರೋಪಿಸಿದ್ದಾರೆ. </p><p>ಶಾಲೆಯ ಪ್ರಾಂಶುಪಾಲ ಅರವಿಂದ ಮಿಶ್ರಾ ಬಾಲಕಿಯ ಸಾವಿಗೆ ಆಘಾತ ವ್ಯಕ್ತಪಡಿಸಿದ್ದಾರೆ</p><p>ಬಾಲಕಿಯ ಕುಟುಂಬದವರು ಘಟನೆಗೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಿಲ್ಲವಾದರು ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಠಾಣಾಧಿಕಾರಿ ರಾಮಜ್ಞ ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಹರಾಯಿಚ್:</strong> ಸರ್ಕಾರಿ ಶಾಲೆಯಲ್ಲಿ ಆಯೋಜನೆಗೊಂಡಿದ್ದ ಓಟದ ಸ್ಪರ್ಧೆಯ ಪೂರ್ವಭಾವಿ ಸಿದ್ಧತೆಯ ಸಂದರ್ಭದಲ್ಲಿ ಮೂರನೆಯವಳಾಗಿ ಹೊರಹೊಮ್ಮಿದ 15 ವರ್ಷದ ಬಾಲಕಿ ಸಂಭ್ರಮಿಸುವ ಮುನ್ನವೇ ಆಕೆಯನ್ನು ಸಾವು ಬರಸೆಳೆದ ಘಟನೆ ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ ನಾನ್ಪುರದಲ್ಲಿ ಗುರುವಾರ ನಡೆದಿದೆ.</p><p>ಮೃತ ಬಾಲಕಿ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಭಾಗಾಪೂರ್ವದ ನಿವಾಸಿ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 12 ಜನ ಸಹಪಾಠಿಗಳೊಂದಿಗೆ 100 ಮೀ ಓಟದಲ್ಲಿ ಪಾಲ್ಗೊಂಡಿದ್ದ ಈಕೆ ಮೂರನೆಯವಳಾಗಿ ಹೊರಹೊಮ್ಮಿದ್ದಳು ಎಂದು ಶಾಲೆಯ ಮೂಲಗಳು ತಿಳಿಸಿವೆ. </p><p>ಓಟ ಪೂರ್ಣಗೊಂಡ ಕೆಲವೇ ಕ್ಷಣಗಳಲ್ಲಿ ಪ್ರಜ್ಞೆ ತಪ್ಪಿ ಕುಸಿದುಬಿದ್ದಳು. ತಕ್ಷಣ ಆಂಬುಲೆನ್ಸ್ ಮೂಲಕ ಈಕೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತು. ಆದರೆ ಅದಾಗಾಗಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯ ಡಾ. ಸುರೇಶ್ ವರ್ಮಾ ಘೋಷಿಸಿದರು</p><p>ಪ್ರಾಥಮಿಕ ಪರೀಕ್ಷೆಯಲ್ಲಿ ಬಾಲಕಿಯು ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಸಾವಿಗೆ ನೈಜ ಕಾರಣ ತಿಳಿಯಲಿದೆ. ಕ್ರೀಡೆ ಹಾಗೂ ದೈಹಿಕ ವ್ಯಾಯಾಮದ ಸಮಯದಲ್ಲಿ ಹದಿಹರೆಯದವರು ಹೃದಯ ಸ್ತಂಭನಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ ಎಂದು ವೈದ್ಯರು ಹೇಳಿದ್ದಾರೆ.</p><p>ಮೃತ ಬಾಲಕಿಯು ಯಾವುದೇ ಆನಾರೋಗ್ಯದಿಂದ ಬಳಲುತ್ತಿರಲಿಲ್ಲ, ಕಾಲೇಜಿನಲ್ಲಿ ಸುಡು ಬಿಸಿಲಿನಲ್ಲಿ ಓಟದ ಸ್ಪರ್ಧೆಯನ್ನು ನಡೆಸಲಾಗಿದೆ. ಸಕಾಲದಲ್ಲಿ ವೈದ್ಯಕೀಯ ಸೌಲಭ್ಯ ದೊರೆತಿದ್ದರೆ ಜೀವ ಉಳಿಯುತಿತ್ತು. ಶಾಲೆಯ ಉದಾಸೀನವೇ ಸಾವಿಗೆ ಕಾರಣ ಎಂದು ಬಾಲಕಿಯ ಅಣ್ಣ ಶಿವಂ ಆರೋಪಿಸಿದ್ದಾರೆ. </p><p>ಶಾಲೆಯ ಪ್ರಾಂಶುಪಾಲ ಅರವಿಂದ ಮಿಶ್ರಾ ಬಾಲಕಿಯ ಸಾವಿಗೆ ಆಘಾತ ವ್ಯಕ್ತಪಡಿಸಿದ್ದಾರೆ</p><p>ಬಾಲಕಿಯ ಕುಟುಂಬದವರು ಘಟನೆಗೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಿಲ್ಲವಾದರು ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಠಾಣಾಧಿಕಾರಿ ರಾಮಜ್ಞ ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>