ಅಹಮದಾಬಾದ್: ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರು ಜಾಮೀನು ಕೋರಿ ಗುಜರಾತ್ ಹೈಕೋರ್ಟ್ಗೆ ಸೋಮವಾರ ಅರ್ಜಿ ಸಲ್ಲಿಸಿದ್ದಾರೆ. ಎರಡು ದಿನಗಳ ಹಿಂದೆ ಸೆಷೆನ್ಸ್ ನ್ಯಾಯಾಲಯವು ತೀಸ್ತಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.
ಅರ್ಜಿಯ ವಿಚಾರಣೆಯು ಈ ವಾರದ ನಂತರ ನಡೆಯಲಿದೆ. ಮಾಜಿ ಐಪಿಎಸ್ ಅಧಿಕಾರಿ ಶ್ರೀಕುಮಾರ್ ಅವರ ಜಾಮೀನು ಅರ್ಜಿಯನ್ನು ಸೆಷೆನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು.
‘2022ರ ಗೋಧ್ರಾ ಘಟನೆ ನಡೆಯುವ ವೇಳೆ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ಮತ್ತು ಇತರರ ವಿರುದ್ಧ ಗಂಭೀರ ಆರೋಪ ಮಾಡಿದ ಮೇಲೂ ತೀಸ್ತಾ ಅವರಿಗೆ ಜಾಮೀನು ನೀಡುವುದು ಎಂದರೆ, ತಪ್ಪು ಮಾಡುವವರಿಗೆ ಉತ್ತೇಜನ ನೀಡಿದಂತಾಗುತ್ತದೆ’ ಎಂದು ಸೆಷನ್ಸ್ ಕೋರ್ಟ್ ಹೇಳಿತ್ತು.