<p><strong>ಬಹರಾಯಿಚ್:</strong> ಉತ್ತರ ಪ್ರದೇಶದ ನಾನ್ಪಾರಾದ ತಹಶೀಲ್ದಾರ್ ಅವರ ಸರ್ಕಾರಿ ವಾಹನವು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು, ಆತನ ಮೃತ ದೇಹವನ್ನು 30 ಕಿ.ಮೀವರೆಗೂ ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ.</p>.<p>ಮೃತಪಟ್ಟ ವ್ಯಕ್ತಿಯನ್ನು ಪಯಾಗ್ಪುರದ ನಿವಾಸಿ ನರೇಂದ್ರ ಕುಮಾರ್ ಹಲ್ದಾರ್ (35) ಎಂದು ಗುರುತಿಸಲಾಗಿದೆ. ನಾನ್ಪಾರಾ– ಬಹರಾಯಿಚ್ ರಸ್ತೆಯಲ್ಲಿ ಗುರುವಾರ ಸಂಜೆ ಈ ಅಪಘಾತ ಸಂಭವಿಸಿದೆ.</p>.<p>‘ಅಪಘಾತದ ವೇಳೆ ತಹಶೀಲ್ದಾರ್ ವಾಹನಕ್ಕೆ ಹಲ್ದಾರ್ ಅವರ ಮೃತ ದೇಹ ಸಿಲುಕಿಕೊಂಡಿತ್ತು. ವಾಹನವು ಸುಮಾರು 30 ಕಿ.ಮೀವರೆಗೆ ದೇಹವನ್ನು ಎಳೆದುಕೊಂಡು ಹೋಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ವೃಂದಾ ಶುಕ್ಲಾ ತಿಳಿಸಿದ್ದಾರೆ.</p>.<h2>ತಹಶೀಲ್ದಾರ್ ಅಮಾನತಿಗೆ ಶಿಫಾರಸು:</h2>.<p>ಅಪಘಾತ ಸಂಭವಿಸಿದಾಗ ವಾಹನದಲ್ಲಿದ್ದರು ಎಂದು ಹೇಳಲಾಗುವ ತಹಶೀಲ್ದಾರ್ ಶೈಲೇಶ್ ಕುಮಾರ್ ಅವಸ್ತಿ ಅವರನ್ನು ಜಿಲ್ಲಾಧಿಕಾರಿ ಮೋನಿಕಾ ರಾಣಿ ಅಮಾತುಗೊಳಿಸುವಂತೆ ಶಿಫಾರಸು ಮಾಡಿದ್ದಾರೆ. ವಾಹನದ ಚಾಲಕ ಮೆರಾಜ್ ಅಹ್ಮದ್ನನ್ನು ಪೊಲೀಸರು ಬಂಧಿಸಿದ್ದಾರೆ.</p>.<h2>ಸಮಗ್ರ ತನಿಖೆ:</h2>.<p>‘ಅಪಘಾತಕ್ಕೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಯುತ್ತಿದ್ದು, ಹೇಗೆ ಅಪಘಾತ ಸಂಭವಿಸಿರಬಹುದು ಎಂಬುದನ್ನು ಪರಿಶೀಲಿಸಲಾಗುತ್ತಿದೆ. 30 ಕಿ.ಮೀ ರಸ್ತೆ ಮಾರ್ಗದಲ್ಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.</p>.<p>ಅಪಘಾತದಲ್ಲಿ ಮೃತಪಟ್ಟಿರುವ ನರೇಂದ್ರ ಕುಮಾರ್ ಹಲ್ದಾರ್ ಅವರ ಕುಟುಂಬದ ಸಂಬಂಧಿಗಳು ದಾಖಲಿಸಿರುವ ದೂರಿನಲ್ಲಿ, ತಹಶೀಲ್ದಾರ್ ವಾಹನವನ್ನು ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಹರಾಯಿಚ್:</strong> ಉತ್ತರ ಪ್ರದೇಶದ ನಾನ್ಪಾರಾದ ತಹಶೀಲ್ದಾರ್ ಅವರ ಸರ್ಕಾರಿ ವಾಹನವು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು, ಆತನ ಮೃತ ದೇಹವನ್ನು 30 ಕಿ.ಮೀವರೆಗೂ ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ.</p>.<p>ಮೃತಪಟ್ಟ ವ್ಯಕ್ತಿಯನ್ನು ಪಯಾಗ್ಪುರದ ನಿವಾಸಿ ನರೇಂದ್ರ ಕುಮಾರ್ ಹಲ್ದಾರ್ (35) ಎಂದು ಗುರುತಿಸಲಾಗಿದೆ. ನಾನ್ಪಾರಾ– ಬಹರಾಯಿಚ್ ರಸ್ತೆಯಲ್ಲಿ ಗುರುವಾರ ಸಂಜೆ ಈ ಅಪಘಾತ ಸಂಭವಿಸಿದೆ.</p>.<p>‘ಅಪಘಾತದ ವೇಳೆ ತಹಶೀಲ್ದಾರ್ ವಾಹನಕ್ಕೆ ಹಲ್ದಾರ್ ಅವರ ಮೃತ ದೇಹ ಸಿಲುಕಿಕೊಂಡಿತ್ತು. ವಾಹನವು ಸುಮಾರು 30 ಕಿ.ಮೀವರೆಗೆ ದೇಹವನ್ನು ಎಳೆದುಕೊಂಡು ಹೋಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ವೃಂದಾ ಶುಕ್ಲಾ ತಿಳಿಸಿದ್ದಾರೆ.</p>.<h2>ತಹಶೀಲ್ದಾರ್ ಅಮಾನತಿಗೆ ಶಿಫಾರಸು:</h2>.<p>ಅಪಘಾತ ಸಂಭವಿಸಿದಾಗ ವಾಹನದಲ್ಲಿದ್ದರು ಎಂದು ಹೇಳಲಾಗುವ ತಹಶೀಲ್ದಾರ್ ಶೈಲೇಶ್ ಕುಮಾರ್ ಅವಸ್ತಿ ಅವರನ್ನು ಜಿಲ್ಲಾಧಿಕಾರಿ ಮೋನಿಕಾ ರಾಣಿ ಅಮಾತುಗೊಳಿಸುವಂತೆ ಶಿಫಾರಸು ಮಾಡಿದ್ದಾರೆ. ವಾಹನದ ಚಾಲಕ ಮೆರಾಜ್ ಅಹ್ಮದ್ನನ್ನು ಪೊಲೀಸರು ಬಂಧಿಸಿದ್ದಾರೆ.</p>.<h2>ಸಮಗ್ರ ತನಿಖೆ:</h2>.<p>‘ಅಪಘಾತಕ್ಕೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಯುತ್ತಿದ್ದು, ಹೇಗೆ ಅಪಘಾತ ಸಂಭವಿಸಿರಬಹುದು ಎಂಬುದನ್ನು ಪರಿಶೀಲಿಸಲಾಗುತ್ತಿದೆ. 30 ಕಿ.ಮೀ ರಸ್ತೆ ಮಾರ್ಗದಲ್ಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.</p>.<p>ಅಪಘಾತದಲ್ಲಿ ಮೃತಪಟ್ಟಿರುವ ನರೇಂದ್ರ ಕುಮಾರ್ ಹಲ್ದಾರ್ ಅವರ ಕುಟುಂಬದ ಸಂಬಂಧಿಗಳು ದಾಖಲಿಸಿರುವ ದೂರಿನಲ್ಲಿ, ತಹಶೀಲ್ದಾರ್ ವಾಹನವನ್ನು ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>