<p><strong>ಪಟ್ನಾ:</strong> 'ಪ್ರಧಾನಿ ನರೇಂದ್ರ ಮೋದಿ 'ರಾಮ-ಲಕ್ಷ್ಮಣ'ರ ಆದರ್ಶಗಳ ಪ್ರತಿಪಾದಕರಾಗಿದ್ದಾರೆ. ಆದರೆ 'ಇಂಡಿಯಾ' ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಮತ್ತು ಆರ್ಜೆಡಿಯ ವರಿಷ್ಠ ಲಾಲೂ ಪ್ರಸಾದ್ ಅವರು 'ಬಾಬರ್-ಔರಂಗಜೇಬ್' ಅವರನ್ನು ಪ್ರತಿನಿಧಿಸುತ್ತಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇಂದು (ಬುಧವಾರ) ಆರೋಪಿಸಿದ್ದಾರೆ. </p><p>ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, 'ಮುಸ್ಲಿಂ ವ್ಯಕ್ತಿ ಸಿಎಂ ಆಗಬೇಕೆಂದು ಹೇಳಿದ್ದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>'ರಾಮನನ್ನು ಪೂಜಿಸುವ ಮತ್ತು ಲಕ್ಷ್ಮಣನಂತೆ ಭಕ್ತಿಯುಳ್ಳವನು ಮಾತ್ರ ಬಿಹಾರದ ಮುಖ್ಯಮಂತ್ರಿಯಾಗಲು ಅರ್ಹರು. ಅವರಿಗೆ ಓವೈಸಿ ಸಲಹೆ ಅಗತ್ಯವಿಲ್ಲ. ಬೇಕಿದ್ದಲ್ಲಿ ಅವರಿಗೆ ನಾನು ಪಾಕಿಸ್ತಾನದಲ್ಲಿ ಟಿಕೆಟ್ ಕೊಡಿಸುತ್ತೇನೆ. ಅವರು ಬಯಸಿದ ಜನರು ಆಯ್ಕೆ ಮಾಡಲಿದ್ದಾರೆ' ಎಂದು ತಿರುಗೇಟು ನೀಡಿದ್ದಾರೆ. </p><p>'ಪ್ರಧಾನಿ ಮೋದಿ ರಾಮ-ಲಕ್ಷ್ಮಣರ ಆದರ್ಶಗಳ ಪ್ರತಿಪಾದಕರಾಗಿದ್ದಾರೆ. ಮತ್ತೊಂದೆಡೆ ತೇಜಸ್ವಿ ಹಾಗೂ ಲಾಲೂ ಬಾಬರ್-ಔರಂಗಜೇಬ್ ಅವರನ್ನು ಪ್ರತಿನಿಧಿಸುತ್ತಾರೆ. ವಿಧಾನಸಭೆ ಚುನಾವಣೆಯು ಈ ದೃಷ್ಟಿಕೋನಗಳ ನಡುವಣ ಹೋರಾಟವಾಗಿದೆ' ಎಂದು ಹೇಳಿದ್ದಾರೆ. </p><p>'ಬಹಳ ದಿನಗಳ ಬಳಿಕ ದೇಶದಲ್ಲಿ ಹಿಂದೂಗಳಿಗೆ ಮುಕ್ತವಾಗಿ ಬದುಕಲು ಸಾಧ್ಯವಾಗುತ್ತಿದೆ. ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಬೆಂಬಲಿಸುತ್ತಿರುವ ಮೋದಿ ಅವರಿಂದ ಇದು ಸಾಧ್ಯವಾಗಿದೆ. ಇಲ್ಲಿನ ಜನರು ಎನ್ಡಿಎಗೆ ಮತ ಹಾಕುತ್ತಾರೆ ಎಂಬ ನಂಬಿಕೆಯಿದೆ' ಎಂದು ಹೇಳಿದ್ದಾರೆ. </p>.ಹರಿಯಾಣದಲ್ಲಿ ಮತ ಕಳ್ಳತನ | ರಾಹುಲ್ ಗಾಂಧಿ ಆರೋಪ ಆಧಾರರಹಿತ: ಚುನಾವಣಾ ಆಯೋಗ.ಭವಿಷ್ಯದಲ್ಲಿ ಚುನಾವಣೆ ನಡೆಯಬಹುದೇ ಎಂಬುದು ಅನುಮಾನ: ಪ್ರಿಯಾಂಕಾ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> 'ಪ್ರಧಾನಿ ನರೇಂದ್ರ ಮೋದಿ 'ರಾಮ-ಲಕ್ಷ್ಮಣ'ರ ಆದರ್ಶಗಳ ಪ್ರತಿಪಾದಕರಾಗಿದ್ದಾರೆ. ಆದರೆ 'ಇಂಡಿಯಾ' ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಮತ್ತು ಆರ್ಜೆಡಿಯ ವರಿಷ್ಠ ಲಾಲೂ ಪ್ರಸಾದ್ ಅವರು 'ಬಾಬರ್-ಔರಂಗಜೇಬ್' ಅವರನ್ನು ಪ್ರತಿನಿಧಿಸುತ್ತಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇಂದು (ಬುಧವಾರ) ಆರೋಪಿಸಿದ್ದಾರೆ. </p><p>ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, 'ಮುಸ್ಲಿಂ ವ್ಯಕ್ತಿ ಸಿಎಂ ಆಗಬೇಕೆಂದು ಹೇಳಿದ್ದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>'ರಾಮನನ್ನು ಪೂಜಿಸುವ ಮತ್ತು ಲಕ್ಷ್ಮಣನಂತೆ ಭಕ್ತಿಯುಳ್ಳವನು ಮಾತ್ರ ಬಿಹಾರದ ಮುಖ್ಯಮಂತ್ರಿಯಾಗಲು ಅರ್ಹರು. ಅವರಿಗೆ ಓವೈಸಿ ಸಲಹೆ ಅಗತ್ಯವಿಲ್ಲ. ಬೇಕಿದ್ದಲ್ಲಿ ಅವರಿಗೆ ನಾನು ಪಾಕಿಸ್ತಾನದಲ್ಲಿ ಟಿಕೆಟ್ ಕೊಡಿಸುತ್ತೇನೆ. ಅವರು ಬಯಸಿದ ಜನರು ಆಯ್ಕೆ ಮಾಡಲಿದ್ದಾರೆ' ಎಂದು ತಿರುಗೇಟು ನೀಡಿದ್ದಾರೆ. </p><p>'ಪ್ರಧಾನಿ ಮೋದಿ ರಾಮ-ಲಕ್ಷ್ಮಣರ ಆದರ್ಶಗಳ ಪ್ರತಿಪಾದಕರಾಗಿದ್ದಾರೆ. ಮತ್ತೊಂದೆಡೆ ತೇಜಸ್ವಿ ಹಾಗೂ ಲಾಲೂ ಬಾಬರ್-ಔರಂಗಜೇಬ್ ಅವರನ್ನು ಪ್ರತಿನಿಧಿಸುತ್ತಾರೆ. ವಿಧಾನಸಭೆ ಚುನಾವಣೆಯು ಈ ದೃಷ್ಟಿಕೋನಗಳ ನಡುವಣ ಹೋರಾಟವಾಗಿದೆ' ಎಂದು ಹೇಳಿದ್ದಾರೆ. </p><p>'ಬಹಳ ದಿನಗಳ ಬಳಿಕ ದೇಶದಲ್ಲಿ ಹಿಂದೂಗಳಿಗೆ ಮುಕ್ತವಾಗಿ ಬದುಕಲು ಸಾಧ್ಯವಾಗುತ್ತಿದೆ. ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಬೆಂಬಲಿಸುತ್ತಿರುವ ಮೋದಿ ಅವರಿಂದ ಇದು ಸಾಧ್ಯವಾಗಿದೆ. ಇಲ್ಲಿನ ಜನರು ಎನ್ಡಿಎಗೆ ಮತ ಹಾಕುತ್ತಾರೆ ಎಂಬ ನಂಬಿಕೆಯಿದೆ' ಎಂದು ಹೇಳಿದ್ದಾರೆ. </p>.ಹರಿಯಾಣದಲ್ಲಿ ಮತ ಕಳ್ಳತನ | ರಾಹುಲ್ ಗಾಂಧಿ ಆರೋಪ ಆಧಾರರಹಿತ: ಚುನಾವಣಾ ಆಯೋಗ.ಭವಿಷ್ಯದಲ್ಲಿ ಚುನಾವಣೆ ನಡೆಯಬಹುದೇ ಎಂಬುದು ಅನುಮಾನ: ಪ್ರಿಯಾಂಕಾ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>