<p>‘ಜೆಡಿಯು ನೇತೃತ್ವದ ಎನ್ಡಿಎ 20 ವರ್ಷಗಳ ಕಾಲ ಆಡಳಿತ ನಡೆಸಿದ್ದರೂ ಬಿಹಾರ ಇನ್ನೂ ಬಡ ರಾಜ್ಯವಾಗಿಯೇ ಉಳಿದಿದೆಯಲ್ಲ’ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಶ್ನಿಸಿದರು.</p>.<p>ಸಹರ್ಸಾ ಜಿಲ್ಲೆಯ ಸಿಮ್ರಿ ಭಕ್ತಿಯಾರ್ಪುರದಲ್ಲಿ ಶುಕ್ರವಾರ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಎನ್ಡಿಎ ಮರಳಿ ಅಧಿಕಾರಕ್ಕೆ ಬಂದರೆ ನಿತೀಶ್ ಕುಮಾರ್ ಅವರನ್ನು ಅದು ಪುನಃ ಮುಖ್ಯಮಂತ್ರಿ ಮಾಡುವುದಿಲ್ಲ’ ಎಂದು ಹೇಳಿದರು.</p>.<p>‘ಬಿಹಾರದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದನ್ನು ಚುನಾಯಿತ ಶಾಸಕರು ನಿರ್ಧರಿಸುತ್ತಾರೆ ಎಂದು ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅವರು, ಎನ್ಡಿಎ ಅಧಿಕಾರಕ್ಕೆ ಮರಳಿದರೆ ನಿತೀಶ್ ಅವರು ಮುಖ್ಯಮಂತ್ರಿ ಆಗುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ’ ಎಂದು ತಿಳಿಸಿದರು. </p>.<p>‘ಕೇಂದ್ರ ಸರ್ಕಾರವು ರಾಜ್ಯದಲ್ಲಿನ ಭ್ರಷ್ಟರು ಮತ್ತು ಅಪರಾಧಿಗಳನ್ನು ರಕ್ಷಿಸುತ್ತಿದೆ’ ಎಂದು ‘ಇಂಡಿಯಾ’ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯೂ ಆಗಿರುವ ತೇಜಸ್ವಿ ದೂರಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಜೆಡಿಯು ನೇತೃತ್ವದ ಎನ್ಡಿಎ 20 ವರ್ಷಗಳ ಕಾಲ ಆಡಳಿತ ನಡೆಸಿದ್ದರೂ ಬಿಹಾರ ಇನ್ನೂ ಬಡ ರಾಜ್ಯವಾಗಿಯೇ ಉಳಿದಿದೆಯಲ್ಲ’ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಶ್ನಿಸಿದರು.</p>.<p>ಸಹರ್ಸಾ ಜಿಲ್ಲೆಯ ಸಿಮ್ರಿ ಭಕ್ತಿಯಾರ್ಪುರದಲ್ಲಿ ಶುಕ್ರವಾರ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಎನ್ಡಿಎ ಮರಳಿ ಅಧಿಕಾರಕ್ಕೆ ಬಂದರೆ ನಿತೀಶ್ ಕುಮಾರ್ ಅವರನ್ನು ಅದು ಪುನಃ ಮುಖ್ಯಮಂತ್ರಿ ಮಾಡುವುದಿಲ್ಲ’ ಎಂದು ಹೇಳಿದರು.</p>.<p>‘ಬಿಹಾರದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದನ್ನು ಚುನಾಯಿತ ಶಾಸಕರು ನಿರ್ಧರಿಸುತ್ತಾರೆ ಎಂದು ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅವರು, ಎನ್ಡಿಎ ಅಧಿಕಾರಕ್ಕೆ ಮರಳಿದರೆ ನಿತೀಶ್ ಅವರು ಮುಖ್ಯಮಂತ್ರಿ ಆಗುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ’ ಎಂದು ತಿಳಿಸಿದರು. </p>.<p>‘ಕೇಂದ್ರ ಸರ್ಕಾರವು ರಾಜ್ಯದಲ್ಲಿನ ಭ್ರಷ್ಟರು ಮತ್ತು ಅಪರಾಧಿಗಳನ್ನು ರಕ್ಷಿಸುತ್ತಿದೆ’ ಎಂದು ‘ಇಂಡಿಯಾ’ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯೂ ಆಗಿರುವ ತೇಜಸ್ವಿ ದೂರಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>