<p><strong>ಪಟ್ನಾ:</strong> ರಾಜ್ಯದಲ್ಲಿ ಇಂಡಿಯಾ ಬಣವು ಅಧಿಕಾರಕ್ಕೆ ಬಂದರೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿರುವ ಪ್ರತಿನಿಧಿಗಳ ಭತ್ಯೆಯನ್ನು ದುಪ್ಪಟ್ಟು ಮಾಡಲಾಗುವುದು ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಹೇಳಿದ್ದಾರೆ.</p><p>ಅಲ್ಲದೆ ₹ 50 ಲಕ್ಷ ವಿಮೆ ಹಾಗೂ ಪಿಂಚಣಿ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.</p>.ಬಿಹಾರ | ಗಂಡನ ಸ್ವಭಾವ ಬದಲಾಯಿಸಿದಂತೆ ಕ್ಷೇತ್ರವನ್ನು ಸುಧಾರಿಸುವೆ: RJD ಅಭ್ಯರ್ಥಿ.<p>ಬಿಹಾರದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಜಿಲ್ಲಾ ಪರಿಷತ್, ಪಂಚಾಯತ್ ಸಮಿತಿ ಹಾಗೂ ಗ್ರಾಮ ಪಂಚಾಯತ್ ಎನ್ನುವ ಮೂರು ಸ್ತರಗಳಿವೆ. ಇದರ ಮುಖ್ಯಸ್ಥರನ್ನು ಮುಖ್ಯ (ಗ್ರಾಮ ಪಂಚಾಯತ್), ಪ್ರಮುಖ್ (ಪಂಚಾಯತ್ ಸಮಿತಿ) ಹಾಗೂ ಅಧ್ಯಕ್ಷ (ಜಿಲ್ಲಾ ಪರಿಷತ್) ಎನ್ನಲಾಗುತ್ತದೆ.</p><p>ಅಲ್ಲದೆ ನಾವು ಅಧಿಕಾರಕ್ಕೆ ಬಂದರೆ ನಾಗರಿಕ ಪೂರೈಕೆ ವ್ಯವಸ್ಥೆಯಲ್ಲಿರುವ ವಿತರಕರಿಗೆ ಲಾಭದ ಪ್ರಮಾಣ ಹೆಚ್ಚಿಸುತ್ತೇವೆ ಎಂದು ಅವರು ವರದಿಗಾರರೊಂದಿಗೆ ಹೇಳಿದ್ದಾರೆ.</p>.ಬಿಹಾರ ಚುನಾವಣೆ | ನ.14ರಂದು ನಿಜವಾದ ದೀಪಾವಳಿ ಆಚರಿಸಲಾಗುತ್ತದೆ: ಅಮಿತ್ ಶಾ.<p>ಜೊತೆಗೆ ಕ್ಷೌರ, ಕುಂಬಾರಿಕೆ ಹಾಗೂ ಬಡಗಿ ವೃತ್ತಿ ಮಾಡುವವರಿಗೆ ₹ 5 ಲಕ್ಷದ ವರೆಗೆ ಬಡ್ಡಿ ರಹಿತ ಸಾಲ ನೀಡುವುದಾಗಿಯೂ ತಿಳಿಸಿದ್ದಾರೆ.</p><p>243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಹಾಗೂ 11 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ.</p> .ಸಂಪಾದಕೀಯ | ಬಿಹಾರ: ಹೊಂದಾಣಿಕೆ ಕೊರತೆ ಪ್ರತಿಪಕ್ಷಗಳ ವಿಶ್ವಾಸಾರ್ಹತೆಗೆ ಧಕ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ರಾಜ್ಯದಲ್ಲಿ ಇಂಡಿಯಾ ಬಣವು ಅಧಿಕಾರಕ್ಕೆ ಬಂದರೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿರುವ ಪ್ರತಿನಿಧಿಗಳ ಭತ್ಯೆಯನ್ನು ದುಪ್ಪಟ್ಟು ಮಾಡಲಾಗುವುದು ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಹೇಳಿದ್ದಾರೆ.</p><p>ಅಲ್ಲದೆ ₹ 50 ಲಕ್ಷ ವಿಮೆ ಹಾಗೂ ಪಿಂಚಣಿ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.</p>.ಬಿಹಾರ | ಗಂಡನ ಸ್ವಭಾವ ಬದಲಾಯಿಸಿದಂತೆ ಕ್ಷೇತ್ರವನ್ನು ಸುಧಾರಿಸುವೆ: RJD ಅಭ್ಯರ್ಥಿ.<p>ಬಿಹಾರದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಜಿಲ್ಲಾ ಪರಿಷತ್, ಪಂಚಾಯತ್ ಸಮಿತಿ ಹಾಗೂ ಗ್ರಾಮ ಪಂಚಾಯತ್ ಎನ್ನುವ ಮೂರು ಸ್ತರಗಳಿವೆ. ಇದರ ಮುಖ್ಯಸ್ಥರನ್ನು ಮುಖ್ಯ (ಗ್ರಾಮ ಪಂಚಾಯತ್), ಪ್ರಮುಖ್ (ಪಂಚಾಯತ್ ಸಮಿತಿ) ಹಾಗೂ ಅಧ್ಯಕ್ಷ (ಜಿಲ್ಲಾ ಪರಿಷತ್) ಎನ್ನಲಾಗುತ್ತದೆ.</p><p>ಅಲ್ಲದೆ ನಾವು ಅಧಿಕಾರಕ್ಕೆ ಬಂದರೆ ನಾಗರಿಕ ಪೂರೈಕೆ ವ್ಯವಸ್ಥೆಯಲ್ಲಿರುವ ವಿತರಕರಿಗೆ ಲಾಭದ ಪ್ರಮಾಣ ಹೆಚ್ಚಿಸುತ್ತೇವೆ ಎಂದು ಅವರು ವರದಿಗಾರರೊಂದಿಗೆ ಹೇಳಿದ್ದಾರೆ.</p>.ಬಿಹಾರ ಚುನಾವಣೆ | ನ.14ರಂದು ನಿಜವಾದ ದೀಪಾವಳಿ ಆಚರಿಸಲಾಗುತ್ತದೆ: ಅಮಿತ್ ಶಾ.<p>ಜೊತೆಗೆ ಕ್ಷೌರ, ಕುಂಬಾರಿಕೆ ಹಾಗೂ ಬಡಗಿ ವೃತ್ತಿ ಮಾಡುವವರಿಗೆ ₹ 5 ಲಕ್ಷದ ವರೆಗೆ ಬಡ್ಡಿ ರಹಿತ ಸಾಲ ನೀಡುವುದಾಗಿಯೂ ತಿಳಿಸಿದ್ದಾರೆ.</p><p>243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಹಾಗೂ 11 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ.</p> .ಸಂಪಾದಕೀಯ | ಬಿಹಾರ: ಹೊಂದಾಣಿಕೆ ಕೊರತೆ ಪ್ರತಿಪಕ್ಷಗಳ ವಿಶ್ವಾಸಾರ್ಹತೆಗೆ ಧಕ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>