ಈ ಕುರಿತು ಪ್ರತಿಕ್ರಿಯಿಸಿದ ತೇಜಸ್ವಿ ಯಾದವ್, ‘ಒಂದು ವೇಳೆ ಲಾಲು ಅವರು ಬಿಜೆಪಿ ಜತೆ ಕೈಜೋಡಿಸಿದ್ದರೆ ಅವರನ್ನು ರಾಜ ಹರಿಶ್ಚಂದ್ರ ಎಂದು ಕರೆಯಲಾಗುತ್ತಿತ್ತು. ಆದರೆ ಅವರು ಆರ್ಎಸ್ಎಸ್–ಬಿಜೆಪಿ ವಿರುದ್ಧ ಹೋರಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಜೈಲು ಶಿಕ್ಷೆಯಾಗಿದೆ. ಇದಕ್ಕೆಲ್ಲ ನಾವು ಹೆದರುವುದಿಲ್ಲ’ ಎಂದು ಹೇಳಿದ್ದಾರೆ.