<p><strong>ಪಟ್ನಾ:</strong> ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನನ್ನ ವಿರುದ್ಧ ಬಳಸುವ ಪದಗಳನ್ನು ಆಶೀರ್ವಾದ ಎಂದುಕೊಳ್ಳುವೆ ಎಂದು ಆರ್ಜೆಡಿ ನಾಯಕ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿರಿಯರಾದ ನಿತೀಶ್ ಕುಮಾರ್ ಅವರು ಮಾನಸಿಕವಾಗಿ ಮತ್ತು ದೈಹಿಕವಾಗಿ ದಣಿದಿದ್ದಾರೆ. ಅವರು ನನ್ನ ವಿರುದ್ಧ ಏನೇ ಪದಗಳನ್ನು ಬಳಸಿದರೂ ಕೂಡ ನಾನು ಆಶೀರ್ವಾದದಂತೆ ಸ್ವೀಕರಿಸುತ್ತೇನೆ’ ಎಂದು ತಿಳಿಸಿದ್ದಾರೆ.</p>.<p>‘ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಉದ್ಯೋಗ ಮತ್ತು ಅಭಿವೃದ್ಧಿ ವಿಚಾರಗಳು ಪ್ರಮುಖ ಪಾತ್ರವಹಿಸಿವೆ. ಮತದಾರರು ಸೂಕ್ತವಾದದ್ದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/separate-pm-modi-nitish-kumar-ads-for-bihar-polls-draw-opposition-jibes-774125.html" target="_blank">ಪ್ರತಿಪಕ್ಷಗಳ ಲೇವಡಿಗೆ ಗುರಿಯಾದಮೋದಿ, ನಿತೀಶ್ ಕುಮಾರ್ ಪ್ರತ್ಯೇಕ ಜಾಹೀರಾತು</a></strong></p>.<p>ಕೆಲವು ವ್ಯಕ್ತಿಗಳ ಕೇವಲ ಸ್ವಪ್ರತಿಷ್ಠೆಗಾಗಿ ರಾಜಕೀಯ ಮಾಡುತ್ತಿದ್ದಾರೆ. ಆದನ್ನು ಕೆಲಸದಲ್ಲಿ ತೋರಿಸುವುದಿಲ್ಲ ಎಂದು ಪರೋಕ್ಷವಾಗಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಬಿಹಾರ ವಿಧಾನಸಭೆ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದೆ. ಅಕ್ಟೋಬರ್ 28, ನವೆಂಬರ್ 3, ನವೆಂಬರ್ 7 ರಂದು ಚುನಾವಣೆ ನಡೆಯಲಿದ್ದು, ನ.10ರಂದು ಫಲಿತಾಂಶ ಪ್ರಕಟವಾಗಲಿದೆ.</p>.<p><strong>ಇದನ್ನೂ ಓದಿ...<a href="https://www.prajavani.net/india-news/inc-needs-helping-hand-of-tejasvi-yadav-774079.html" target="_blank"> ಪ್ರಜಾಮತ: ‘ಕೈ’ ದಡ ಮುಟ್ಟಲು ತೇಜಸ್ವಿ ಅನಿವಾರ್ಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನನ್ನ ವಿರುದ್ಧ ಬಳಸುವ ಪದಗಳನ್ನು ಆಶೀರ್ವಾದ ಎಂದುಕೊಳ್ಳುವೆ ಎಂದು ಆರ್ಜೆಡಿ ನಾಯಕ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿರಿಯರಾದ ನಿತೀಶ್ ಕುಮಾರ್ ಅವರು ಮಾನಸಿಕವಾಗಿ ಮತ್ತು ದೈಹಿಕವಾಗಿ ದಣಿದಿದ್ದಾರೆ. ಅವರು ನನ್ನ ವಿರುದ್ಧ ಏನೇ ಪದಗಳನ್ನು ಬಳಸಿದರೂ ಕೂಡ ನಾನು ಆಶೀರ್ವಾದದಂತೆ ಸ್ವೀಕರಿಸುತ್ತೇನೆ’ ಎಂದು ತಿಳಿಸಿದ್ದಾರೆ.</p>.<p>‘ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಉದ್ಯೋಗ ಮತ್ತು ಅಭಿವೃದ್ಧಿ ವಿಚಾರಗಳು ಪ್ರಮುಖ ಪಾತ್ರವಹಿಸಿವೆ. ಮತದಾರರು ಸೂಕ್ತವಾದದ್ದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/separate-pm-modi-nitish-kumar-ads-for-bihar-polls-draw-opposition-jibes-774125.html" target="_blank">ಪ್ರತಿಪಕ್ಷಗಳ ಲೇವಡಿಗೆ ಗುರಿಯಾದಮೋದಿ, ನಿತೀಶ್ ಕುಮಾರ್ ಪ್ರತ್ಯೇಕ ಜಾಹೀರಾತು</a></strong></p>.<p>ಕೆಲವು ವ್ಯಕ್ತಿಗಳ ಕೇವಲ ಸ್ವಪ್ರತಿಷ್ಠೆಗಾಗಿ ರಾಜಕೀಯ ಮಾಡುತ್ತಿದ್ದಾರೆ. ಆದನ್ನು ಕೆಲಸದಲ್ಲಿ ತೋರಿಸುವುದಿಲ್ಲ ಎಂದು ಪರೋಕ್ಷವಾಗಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಬಿಹಾರ ವಿಧಾನಸಭೆ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದೆ. ಅಕ್ಟೋಬರ್ 28, ನವೆಂಬರ್ 3, ನವೆಂಬರ್ 7 ರಂದು ಚುನಾವಣೆ ನಡೆಯಲಿದ್ದು, ನ.10ರಂದು ಫಲಿತಾಂಶ ಪ್ರಕಟವಾಗಲಿದೆ.</p>.<p><strong>ಇದನ್ನೂ ಓದಿ...<a href="https://www.prajavani.net/india-news/inc-needs-helping-hand-of-tejasvi-yadav-774079.html" target="_blank"> ಪ್ರಜಾಮತ: ‘ಕೈ’ ದಡ ಮುಟ್ಟಲು ತೇಜಸ್ವಿ ಅನಿವಾರ್ಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>