<p><strong>ಪಟ್ನಾ</strong>: 'ನಾನು ಜೀವಂತವಾಗಿರುವವರೆಗೂ ಬಿಜೆಪಿ ವಿರುದ್ಧ ಹೋರಾಡುತ್ತಲೇ ಇರುತ್ತೇನೆ ಎಂದು ಹೇಳಿರುವ ಆರ್ಜೆಡಿ ನಾಯಕ ತೇಜಸ್ವಿ ಯಾದವ್, ನಿಜವಾದ ಬಿಹಾರಿ ಎಂದಿಗೂ ಹೊರಗಿನವರಿಗೆ ಹೆದರುವುದಿಲ್ಲ' ಎಂದು ಅಮಿತ್ ಶಾ ವಿರುದ್ಧ ಕಿಡಿಕಾರಿದ್ದಾರೆ.</p><p>ಐಆರ್ಸಿಟಿಸಿಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಆರ್ಜೆಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್, ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಹಾಗೂ ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ವಿರುದ್ಧ ದೆಹಲಿ ನ್ಯಾಯಾಲಯವೊಂದು ಸೋಮವಾರ ದೋಷಾರೋಪ ನಿಗದಿ ಮಾಡಿದೆ.</p>.IND vs WI| ಎರಡನೇ ಇನಿಂಗ್ಸ್ ವಿಂಡೀಸ್ 390ಕ್ಕೆ ಆಲೌಟ್: ಭಾರತಕ್ಕೆ 121 ರನ್ ಗುರಿ.ದೀಪಾವಳಿ ರಜೆಯಲ್ಲಿ ಪ್ರವಾಸದ ಯೋಜನೆ ಮಾಡಿದ್ದೀರಾ? ಇಲ್ಲಿವೆ ಉತ್ತಮ ಸ್ಥಳಗಳು. <p>ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಯಾದವ್, ಒಂದು ತಿಂಗಳ ಹಿಂದೆ ಬಿಹಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಮ್ಮನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ನಾವು ನಿಜವಾದ ಬಿಹಾರಿಗಳು..ನಾವು ಹೊರಗಿನವರಿಗೆ ಹೆದರುವುದಿಲ್ಲ. ನಾನು ಬಿಜೆಪಿ ವಿರುದ್ಧ ಹೋರಾಡುತ್ತೇನೆ ಮತ್ತು ಗೆಲ್ಲುತ್ತೇನೆ ಎಂದಿದ್ದಾರೆ.</p><p>ನ್ಯಾಯಾಲಯವು ರಾಬ್ಡಿ ದೇವಿ ಹಾಗೂ ತೇಜಸ್ವಿ ವಿರುದ್ಧ ಕ್ರಿಮಿನಲ್ ಸಂಚು ಹಾಗೂ ಮೋಸದ ಆರೋಪ ಹೊರಿಸಿದೆ. ಐಆರ್ಸಿಟಿಸಿಯ ಎರಡು ಹೋಟೆಲ್ಗಳ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ವಹಿಸುವ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ.</p>.ಚಂದ್ರಪ್ರಭ ಗ್ಲಾಸ್ ಒಡೆದು ಹಾಕಿದ್ದೇಲ್ಲಾ ಡ್ರಾಮಾನಾ? ಸತ್ಯ ಹೇಳಿದ ಸತೀಶ್.ರಾಯಚೂರು: ಬೆಳೆ ನಷ್ಟ ಪರಿಹಾರ ಕೊಡಲು ಒತ್ತಾಯ– ರೈತ ಸಂಘದ ಕಾರ್ಯಕರ್ತರ ಪ್ರತಿಭಟನೆ. <p>ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರತಿಕ್ರಿಯಿಸಿರುವ ಆರ್ಜೆಡಿ ರಾಜ್ಯಸಭಾ ಸಂಸದ ಮನೋಜ್ ಕುಮಾರ್ ಝಾ, ರಾಜಕೀಯ ಪೈಪೋಟಿಯಿಂದ ಕಾನೂನಿನ ನಿಯಮವನ್ನು ದುರ್ಬಲಗೊಳಿಸಲಾಗುತ್ತಿದೆ. ಇದರಿಂದ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕುಗ್ಗಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಸಿಎಂ ಆಗಲು ಹೈಕಮಾಂಡ್ ಆಶೀರ್ವಾದದ ಜೊತೆಗೆ ಶಾಸಕರ ಬೆಂಬಲವೂ ಮುಖ್ಯ: ಸಿದ್ದರಾಮಯ್ಯ.ಕಲಬುರಗಿ: ಉದ್ಯೋಗಕ್ಕಾಗಿ ಬೀದಿಗಿಳಿದ 'ಆಕಾಂಕ್ಷಿಗಳು'.ಆಸೀಸ್ ವಿರುದ್ಧ ಸೋಲಿನ ನಡುವೆ ದಾಖಲೆ ಬರೆದ ಸ್ಮೃತಿ ಮಂದಾನ.ಆ್ಯಸಿಡಿಟಿ ತೊಂದರೆ ನಿವಾರಣೆಗೆ ತಜ್ಞರು ಶಿಫಾರಸು ಮಾಡಿದ ಮನೆಮದ್ದುಗಳಿವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: 'ನಾನು ಜೀವಂತವಾಗಿರುವವರೆಗೂ ಬಿಜೆಪಿ ವಿರುದ್ಧ ಹೋರಾಡುತ್ತಲೇ ಇರುತ್ತೇನೆ ಎಂದು ಹೇಳಿರುವ ಆರ್ಜೆಡಿ ನಾಯಕ ತೇಜಸ್ವಿ ಯಾದವ್, ನಿಜವಾದ ಬಿಹಾರಿ ಎಂದಿಗೂ ಹೊರಗಿನವರಿಗೆ ಹೆದರುವುದಿಲ್ಲ' ಎಂದು ಅಮಿತ್ ಶಾ ವಿರುದ್ಧ ಕಿಡಿಕಾರಿದ್ದಾರೆ.</p><p>ಐಆರ್ಸಿಟಿಸಿಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಆರ್ಜೆಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್, ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಹಾಗೂ ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ವಿರುದ್ಧ ದೆಹಲಿ ನ್ಯಾಯಾಲಯವೊಂದು ಸೋಮವಾರ ದೋಷಾರೋಪ ನಿಗದಿ ಮಾಡಿದೆ.</p>.IND vs WI| ಎರಡನೇ ಇನಿಂಗ್ಸ್ ವಿಂಡೀಸ್ 390ಕ್ಕೆ ಆಲೌಟ್: ಭಾರತಕ್ಕೆ 121 ರನ್ ಗುರಿ.ದೀಪಾವಳಿ ರಜೆಯಲ್ಲಿ ಪ್ರವಾಸದ ಯೋಜನೆ ಮಾಡಿದ್ದೀರಾ? ಇಲ್ಲಿವೆ ಉತ್ತಮ ಸ್ಥಳಗಳು. <p>ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಯಾದವ್, ಒಂದು ತಿಂಗಳ ಹಿಂದೆ ಬಿಹಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಮ್ಮನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ನಾವು ನಿಜವಾದ ಬಿಹಾರಿಗಳು..ನಾವು ಹೊರಗಿನವರಿಗೆ ಹೆದರುವುದಿಲ್ಲ. ನಾನು ಬಿಜೆಪಿ ವಿರುದ್ಧ ಹೋರಾಡುತ್ತೇನೆ ಮತ್ತು ಗೆಲ್ಲುತ್ತೇನೆ ಎಂದಿದ್ದಾರೆ.</p><p>ನ್ಯಾಯಾಲಯವು ರಾಬ್ಡಿ ದೇವಿ ಹಾಗೂ ತೇಜಸ್ವಿ ವಿರುದ್ಧ ಕ್ರಿಮಿನಲ್ ಸಂಚು ಹಾಗೂ ಮೋಸದ ಆರೋಪ ಹೊರಿಸಿದೆ. ಐಆರ್ಸಿಟಿಸಿಯ ಎರಡು ಹೋಟೆಲ್ಗಳ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ವಹಿಸುವ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ.</p>.ಚಂದ್ರಪ್ರಭ ಗ್ಲಾಸ್ ಒಡೆದು ಹಾಕಿದ್ದೇಲ್ಲಾ ಡ್ರಾಮಾನಾ? ಸತ್ಯ ಹೇಳಿದ ಸತೀಶ್.ರಾಯಚೂರು: ಬೆಳೆ ನಷ್ಟ ಪರಿಹಾರ ಕೊಡಲು ಒತ್ತಾಯ– ರೈತ ಸಂಘದ ಕಾರ್ಯಕರ್ತರ ಪ್ರತಿಭಟನೆ. <p>ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರತಿಕ್ರಿಯಿಸಿರುವ ಆರ್ಜೆಡಿ ರಾಜ್ಯಸಭಾ ಸಂಸದ ಮನೋಜ್ ಕುಮಾರ್ ಝಾ, ರಾಜಕೀಯ ಪೈಪೋಟಿಯಿಂದ ಕಾನೂನಿನ ನಿಯಮವನ್ನು ದುರ್ಬಲಗೊಳಿಸಲಾಗುತ್ತಿದೆ. ಇದರಿಂದ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕುಗ್ಗಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಸಿಎಂ ಆಗಲು ಹೈಕಮಾಂಡ್ ಆಶೀರ್ವಾದದ ಜೊತೆಗೆ ಶಾಸಕರ ಬೆಂಬಲವೂ ಮುಖ್ಯ: ಸಿದ್ದರಾಮಯ್ಯ.ಕಲಬುರಗಿ: ಉದ್ಯೋಗಕ್ಕಾಗಿ ಬೀದಿಗಿಳಿದ 'ಆಕಾಂಕ್ಷಿಗಳು'.ಆಸೀಸ್ ವಿರುದ್ಧ ಸೋಲಿನ ನಡುವೆ ದಾಖಲೆ ಬರೆದ ಸ್ಮೃತಿ ಮಂದಾನ.ಆ್ಯಸಿಡಿಟಿ ತೊಂದರೆ ನಿವಾರಣೆಗೆ ತಜ್ಞರು ಶಿಫಾರಸು ಮಾಡಿದ ಮನೆಮದ್ದುಗಳಿವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>