<p><strong>ಪಟ್ನಾ</strong>: ಆರ್ಜೆಡಿ ಕಾರ್ಯಕಾರಿ ಅಧ್ಯಕ್ಷ ತೇಜಸ್ವಿ ಯಾದವ್ ಅವರು ಗಾಲಿ ಕುರ್ಚಿಯ ಮೇಲೆ ಕುಳಿತು ಬಿಹಾರ ವಿಧಾನಸಭೆಗೆ ಸೋಮವಾರ ಹಾಜರಾದರು.</p>.<p>‘ಕಾಲಿನ ಹೆಬ್ಬೆರಳಿಗೆ ಗಾಯವಾಗಿರುವ ಕಾರಣ ಸರಿಯಾಗಿ ನಡೆಯಲು ಸಾಧ್ಯವಾಗುತ್ತಿಲ್ಲ’ ಎಂದು ಅವರು ತಿಳಿಸಿದರು.</p>.<p>ಬಜೆಟ್ ಅಧಿವೇಶನದ ಅಂಗವಾಗಿ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಇತ್ತೀಚೆಗೆ ಎಡಗಾಲಿನ ಹೆಬ್ಬೆರಳಿಗೆ ಗಾಯವಾಗಿದ್ದು, ಶಸ್ತ್ರಚಿಕಿತ್ಸೆ ಮಾಡಬೇಕಾಯಿತು’ ಎಂದು ತಿಳಿಸಿದರು.</p>.<p>‘ರಾಜ್ಯಪಾಲರ ಭಾಷಣವನ್ನು ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಸಿದ್ಧಪಡಿಸಿದ್ದಾಗಿದೆ. ಇತರೆ ಹಲವು ರಾಜ್ಯಗಳಿಗಿಂತ ಬಿಹಾರ ರಾಜ್ಯವು ಅಭಿವೃದ್ಧಿ ಸೂಚ್ಯಂಕದಲ್ಲಿ ಹಿಂದುಳಿದಿದ್ದರೂ ಭಾಷಣದಲ್ಲಿ ಸರ್ಕಾರವನ್ನು ಶ್ಲಾಘಿಸಲಾಗಿದೆ’ ಎಂದು ವಾಗ್ದಾಳಿ ನಡೆಸಿದರು.</p>.<p>ಕೇಂದ್ರ ಸರ್ಕಾರವು ಭಾನುವಾರ ಮಂಡಿಸಿದ ಬಜೆಟ್ ಅನ್ನು ಚುನಾವಣೆಗೆ ಬಳಸಿಕೊಂಡಂತಿದೆ. ಕಳೆದ ವರ್ಷ ಬಿಹಾರದಲ್ಲಿ ಚುನಾವಣೆ ಇತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧುಬಾನಿ ಸೀರೆ ಧರಿಸಿದ್ದರು. ಈ ವರ್ಷ ತಮಿಳುನಾಡಿನ ಚುನಾವಣೆ ಇದೆ. ಹೀಗಾಗಿ ನಿರ್ಮಲಾ ಸೀತಾರಾಮನ್ ಅವರು ಕಾಂಜೀವರಂ ಸೀರೆ ಧರಿಸಿದ್ದರು’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಆರ್ಜೆಡಿ ಕಾರ್ಯಕಾರಿ ಅಧ್ಯಕ್ಷ ತೇಜಸ್ವಿ ಯಾದವ್ ಅವರು ಗಾಲಿ ಕುರ್ಚಿಯ ಮೇಲೆ ಕುಳಿತು ಬಿಹಾರ ವಿಧಾನಸಭೆಗೆ ಸೋಮವಾರ ಹಾಜರಾದರು.</p>.<p>‘ಕಾಲಿನ ಹೆಬ್ಬೆರಳಿಗೆ ಗಾಯವಾಗಿರುವ ಕಾರಣ ಸರಿಯಾಗಿ ನಡೆಯಲು ಸಾಧ್ಯವಾಗುತ್ತಿಲ್ಲ’ ಎಂದು ಅವರು ತಿಳಿಸಿದರು.</p>.<p>ಬಜೆಟ್ ಅಧಿವೇಶನದ ಅಂಗವಾಗಿ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಇತ್ತೀಚೆಗೆ ಎಡಗಾಲಿನ ಹೆಬ್ಬೆರಳಿಗೆ ಗಾಯವಾಗಿದ್ದು, ಶಸ್ತ್ರಚಿಕಿತ್ಸೆ ಮಾಡಬೇಕಾಯಿತು’ ಎಂದು ತಿಳಿಸಿದರು.</p>.<p>‘ರಾಜ್ಯಪಾಲರ ಭಾಷಣವನ್ನು ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಸಿದ್ಧಪಡಿಸಿದ್ದಾಗಿದೆ. ಇತರೆ ಹಲವು ರಾಜ್ಯಗಳಿಗಿಂತ ಬಿಹಾರ ರಾಜ್ಯವು ಅಭಿವೃದ್ಧಿ ಸೂಚ್ಯಂಕದಲ್ಲಿ ಹಿಂದುಳಿದಿದ್ದರೂ ಭಾಷಣದಲ್ಲಿ ಸರ್ಕಾರವನ್ನು ಶ್ಲಾಘಿಸಲಾಗಿದೆ’ ಎಂದು ವಾಗ್ದಾಳಿ ನಡೆಸಿದರು.</p>.<p>ಕೇಂದ್ರ ಸರ್ಕಾರವು ಭಾನುವಾರ ಮಂಡಿಸಿದ ಬಜೆಟ್ ಅನ್ನು ಚುನಾವಣೆಗೆ ಬಳಸಿಕೊಂಡಂತಿದೆ. ಕಳೆದ ವರ್ಷ ಬಿಹಾರದಲ್ಲಿ ಚುನಾವಣೆ ಇತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧುಬಾನಿ ಸೀರೆ ಧರಿಸಿದ್ದರು. ಈ ವರ್ಷ ತಮಿಳುನಾಡಿನ ಚುನಾವಣೆ ಇದೆ. ಹೀಗಾಗಿ ನಿರ್ಮಲಾ ಸೀತಾರಾಮನ್ ಅವರು ಕಾಂಜೀವರಂ ಸೀರೆ ಧರಿಸಿದ್ದರು’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>