ಕಾಂಗ್ರೆಸ್ ಪಕ್ಷದ ‘ವಿಜಯಭೇರಿ’ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯು ಸಾಮಾನ್ಯ ಜನರ ತೆಲಂಗಾಣ ಹಾಗೂ ಉಳಿಗಮಾನ್ಯ ಸಮಾಜವಿರುವ ತೆಲಂಗಾಣ ನಡುವೆ ನಡೆಯಲಿದೆ. ರಾಜ ಮತ್ತು ಜನರ ಈ ಹೋರಾಟದ ಚುನಾವಣೆಯಲ್ಲಿ ಕೆಸಿಆರ್ ಸೋಲುತ್ತದೆ ಎಂದು ತಿಳಿಸಿದ್ದಾರೆ.
ತೆಲಂಗಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ. ರಾಜ್ಯದಲ್ಲಿ ಎಲ್ಲಾ ನಿಯಂತ್ರಣಗಳು ಒಂದೇ ಕುಟುಂಬದ ಬಳಿ ಇವೆ. ಬಿಆರ್ಎಸ್ ಅಧಿಕಾರಕ್ಕೆ ಬಂದು ಹತ್ತು ವರ್ಷಗಳಾದರೂ ಮುಖ್ಯಮಂತ್ರಿ ಕೆಸಿಆರ್ ಅವರು ಜನರಿಂದ ದೂರವಾಗುತ್ತಲೇ ಇದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.