<p><strong>ಹೈದರಾಬಾದ್:</strong> ಟಿಆರ್ಎಸ್ ಪಕ್ಷದ ಶಾಸಕ ಕೋನೇರು ಕೋನಪ್ಪ ಅವರ ಸಹೋದರನಿಂದ ಹಲ್ಲೆಗೆ ಒಳಗಾಗಿರುವ ವಲಯ ಅರಣ್ಯಾಧಿಕಾರಿ ಸಿ. ಅನಿತಾ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ‘ಶಾಸಕರ ಕಡೆಯವರು ನನ್ನ ಹತ್ಯೆ ಮಾಡಬಹುದು’ ಎಂಬ ಭೀತಿಯನ್ನು ವ್ಯಕ್ತಪಡಿಸಿದ್ದಾರೆ.</p>.<p>ಅರಣ್ಯ ಇಲಾಖೆಗೆ ಸೇರಿದ್ದ ಜಾಗದಲ್ಲಿ ಗಿಡನೆಡಲು ಬಂದಿದ್ದ ಸಿ. ಅನಿತಾ ಅವರ ಮೇಲೆ ಶಾಸಕ ಕೋನೇರು ಕೋನಪ್ಪ ಅವರ ಸಹೋದರ ಕೋನೇರು ಕೃಷ್ಣ ಹಾಗೂ ಸಂಗಡಿಗರು ಭಾನುವಾರ ಹಲ್ಲೆ ನಡೆಸಿದ್ದರು.</p>.<p>ಇಲ್ಲಿನ ‘ಕಿಮ್ಸ್’ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅನಿತಾ, ಮಾಧ್ಯಮ ಪ್ರತಿನಿಧಿಗಳ ಜೊತೆ ಸೋಮವಾರ ಮಾತನಾಡುತ್ತಾ, ‘ಶಾಸಕ ಕೋನಪ್ಪ ಅವರು ಹಿಂದಿನಿಂದಲೂ ಬುಡಕಟ್ಟು ಜನರನ್ನು ಅರಣ್ಯ ಇಲಾಖೆಯ ವಿರುದ್ಧ ಎತ್ತಿಕಟ್ಟಿ ಗಲಭೆ ನಡೆಸುತ್ತಾ ಬಂದಿದ್ದಾರೆ. ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ನಾನು ಬಡ ಕುಟುಂಬದಲ್ಲಿ ಜನಿಸಿದವಳು. ತುಂಬಾ ಶ್ರಮಪಟ್ಟು ಅರಣ್ಯ ಇಲಾಖೆಯಲ್ಲಿ ಅಧಿಕಾರಿಯಾಗಿದ್ದೇನೆ. ಇಂಥ ಹಲ್ಲೆ ನಡೆದಾಗ ರಾಜಕೀಯ ನಾಯಕರು, ಸಹೋದ್ಯೋಗಿಗಳು ಅಸಹಾಯಕರಾಗಿ ನಿಂತುಬಿಟ್ಟರೆ ಕೆಲವು ಗುರಿಗಳನ್ನಿಟ್ಟುಕೊಂಡು ಕೆಲಸಮಾಡಲು ಬರುವ ನನ್ನಂಥ ಮಹಿಳೆಯರು ನಿರುತ್ಸಾಹಗೊಳ್ಳುತ್ತಾರೆ’ ಎಂದರು.</p>.<p>ಭಾನುವಾರದ ಘಟನೆಯನ್ನು ಸ್ಮರಿಸಿಕೊಂಡ ಅನಿತಾ, ‘ಅರಣ್ಯ ಇಲಾಖೆಗೆ ಸೇರಿದ ಜಾಗವನ್ನು ಸ್ವಚ್ಛಗೊಳಿಸಲು ಮುಂದಾದ ಇಲಾಖೆಯ ಸಿಬ್ಬಂದಿ ಹಾಗೂ ಪೊಲೀಸರನ್ನು ಕೃಷ್ಣ ಅವರು ಮೊದಲು ದೂರಕ್ಕೆ ತಳ್ಳಿದರು. ಆ ಸಂದರ್ಭದಲ್ಲಿ ನಾನು ಟ್ರ್ಯಾಕ್ಟರ್ ಏರಿ ನಿಂತು ಗಲಭೆಯನ್ನು ನಿಲ್ಲಿಸುವಂತೆ ಮನವಿ ಮಾಡುತ್ತಿದ್ದೆ. ಆದರೆ ಅವರು ನನ್ನನ್ನೆ ಗುರಿಯಾಗಿಸಿ ಹಲ್ಲೆ ನಡೆಸಿದರು’ ಎಂದರು. ಚಿಕಿತ್ಸೆಯ ಬಳಿಕ ಕೆಲಸವನ್ನು ಮುಂದುವರಿಸಲು ಇಚ್ಛಿಸುವುದಾಗಿಯೂ ಅವರು ತಿಳಿಸಿದರು.</p>.<p>ಹಲ್ಲೆಯ ಘಟನೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರೂ, ಅಸಿಫಾಬಾದ್ ಎಸ್ಪಿ ಮಲ್ಲರೆಡ್ಡಿ ಅವರನ್ನು ಬಿಟ್ಟರೆ ಜನಪ್ರತಿನಿಧಿಗಳು ಯಾರೂ ಅನಿತಾ ಅವರನ್ನು ಭೇಟಿಮಾಡಿಲ್ಲ. ಅರಣ್ಯ ಸಚಿವ ಪಿ. ಇಂದ್ರಕರಣ್ ರೆಡ್ಡಿ ಅವರು ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಆಡಳಿತಾ<br />ರೂಢ ಟಿಆರ್ಎಸ್ನ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಅವರು ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದಾರೆ. ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದ ಕೃಷ್ಣ ಹಾಗೂ ಇತರ ಕೆಲವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.</p>.<p>ಅನಿತಾಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಕೋನಪ್ಪ ಹಾಗೂ ಅವರ ಸಹೋದರನಿಗೆ ಶಿಕ್ಷೆ ನೀಡಬೇಕುಎಂದು ಕಾಂಗ್ರೆಸ್ ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಟಿಆರ್ಎಸ್ ಪಕ್ಷದ ಶಾಸಕ ಕೋನೇರು ಕೋನಪ್ಪ ಅವರ ಸಹೋದರನಿಂದ ಹಲ್ಲೆಗೆ ಒಳಗಾಗಿರುವ ವಲಯ ಅರಣ್ಯಾಧಿಕಾರಿ ಸಿ. ಅನಿತಾ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ‘ಶಾಸಕರ ಕಡೆಯವರು ನನ್ನ ಹತ್ಯೆ ಮಾಡಬಹುದು’ ಎಂಬ ಭೀತಿಯನ್ನು ವ್ಯಕ್ತಪಡಿಸಿದ್ದಾರೆ.</p>.<p>ಅರಣ್ಯ ಇಲಾಖೆಗೆ ಸೇರಿದ್ದ ಜಾಗದಲ್ಲಿ ಗಿಡನೆಡಲು ಬಂದಿದ್ದ ಸಿ. ಅನಿತಾ ಅವರ ಮೇಲೆ ಶಾಸಕ ಕೋನೇರು ಕೋನಪ್ಪ ಅವರ ಸಹೋದರ ಕೋನೇರು ಕೃಷ್ಣ ಹಾಗೂ ಸಂಗಡಿಗರು ಭಾನುವಾರ ಹಲ್ಲೆ ನಡೆಸಿದ್ದರು.</p>.<p>ಇಲ್ಲಿನ ‘ಕಿಮ್ಸ್’ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅನಿತಾ, ಮಾಧ್ಯಮ ಪ್ರತಿನಿಧಿಗಳ ಜೊತೆ ಸೋಮವಾರ ಮಾತನಾಡುತ್ತಾ, ‘ಶಾಸಕ ಕೋನಪ್ಪ ಅವರು ಹಿಂದಿನಿಂದಲೂ ಬುಡಕಟ್ಟು ಜನರನ್ನು ಅರಣ್ಯ ಇಲಾಖೆಯ ವಿರುದ್ಧ ಎತ್ತಿಕಟ್ಟಿ ಗಲಭೆ ನಡೆಸುತ್ತಾ ಬಂದಿದ್ದಾರೆ. ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ನಾನು ಬಡ ಕುಟುಂಬದಲ್ಲಿ ಜನಿಸಿದವಳು. ತುಂಬಾ ಶ್ರಮಪಟ್ಟು ಅರಣ್ಯ ಇಲಾಖೆಯಲ್ಲಿ ಅಧಿಕಾರಿಯಾಗಿದ್ದೇನೆ. ಇಂಥ ಹಲ್ಲೆ ನಡೆದಾಗ ರಾಜಕೀಯ ನಾಯಕರು, ಸಹೋದ್ಯೋಗಿಗಳು ಅಸಹಾಯಕರಾಗಿ ನಿಂತುಬಿಟ್ಟರೆ ಕೆಲವು ಗುರಿಗಳನ್ನಿಟ್ಟುಕೊಂಡು ಕೆಲಸಮಾಡಲು ಬರುವ ನನ್ನಂಥ ಮಹಿಳೆಯರು ನಿರುತ್ಸಾಹಗೊಳ್ಳುತ್ತಾರೆ’ ಎಂದರು.</p>.<p>ಭಾನುವಾರದ ಘಟನೆಯನ್ನು ಸ್ಮರಿಸಿಕೊಂಡ ಅನಿತಾ, ‘ಅರಣ್ಯ ಇಲಾಖೆಗೆ ಸೇರಿದ ಜಾಗವನ್ನು ಸ್ವಚ್ಛಗೊಳಿಸಲು ಮುಂದಾದ ಇಲಾಖೆಯ ಸಿಬ್ಬಂದಿ ಹಾಗೂ ಪೊಲೀಸರನ್ನು ಕೃಷ್ಣ ಅವರು ಮೊದಲು ದೂರಕ್ಕೆ ತಳ್ಳಿದರು. ಆ ಸಂದರ್ಭದಲ್ಲಿ ನಾನು ಟ್ರ್ಯಾಕ್ಟರ್ ಏರಿ ನಿಂತು ಗಲಭೆಯನ್ನು ನಿಲ್ಲಿಸುವಂತೆ ಮನವಿ ಮಾಡುತ್ತಿದ್ದೆ. ಆದರೆ ಅವರು ನನ್ನನ್ನೆ ಗುರಿಯಾಗಿಸಿ ಹಲ್ಲೆ ನಡೆಸಿದರು’ ಎಂದರು. ಚಿಕಿತ್ಸೆಯ ಬಳಿಕ ಕೆಲಸವನ್ನು ಮುಂದುವರಿಸಲು ಇಚ್ಛಿಸುವುದಾಗಿಯೂ ಅವರು ತಿಳಿಸಿದರು.</p>.<p>ಹಲ್ಲೆಯ ಘಟನೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರೂ, ಅಸಿಫಾಬಾದ್ ಎಸ್ಪಿ ಮಲ್ಲರೆಡ್ಡಿ ಅವರನ್ನು ಬಿಟ್ಟರೆ ಜನಪ್ರತಿನಿಧಿಗಳು ಯಾರೂ ಅನಿತಾ ಅವರನ್ನು ಭೇಟಿಮಾಡಿಲ್ಲ. ಅರಣ್ಯ ಸಚಿವ ಪಿ. ಇಂದ್ರಕರಣ್ ರೆಡ್ಡಿ ಅವರು ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಆಡಳಿತಾ<br />ರೂಢ ಟಿಆರ್ಎಸ್ನ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಅವರು ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದಾರೆ. ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದ ಕೃಷ್ಣ ಹಾಗೂ ಇತರ ಕೆಲವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.</p>.<p>ಅನಿತಾಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಕೋನಪ್ಪ ಹಾಗೂ ಅವರ ಸಹೋದರನಿಗೆ ಶಿಕ್ಷೆ ನೀಡಬೇಕುಎಂದು ಕಾಂಗ್ರೆಸ್ ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>