<p><strong>ಹೈದರಾಬಾದ್:</strong> ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರಿಗೆ ಭಾರತ ರತ್ನ ನೀಡಬೇಕು ಎನ್ನುವ ನಿರ್ಣಯವನ್ನು ತೆಲಂಗಾಣ ವಿಧಾಸಭೆ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಿದೆ.</p>.ಮನಮೋಹನ ಸಿಂಗ್ ಅಸ್ಥಿ ವಿಸರ್ಜನೆ ವೇಳೆ ಗೈರು: ಕಾಂಗ್ರೆಸ್ ಹೇಳಿದ್ದೇನು?.<p>ಕಲಾಪ ಆರಂಭವಾಗುತ್ತಿದ್ದಂತೆಯೇ, ಡಾ. ಸಿಂಗ್ ಅವರಿಗೆ ಸಂತಾಪ ಸೂಚಿಸುವ ಹಾಗೂ 2014 ರಲ್ಲಿ ತೆಲಂಗಾಣ ರಾಜ್ಯ ರಚನೆಯಲ್ಲಿ ಸಿಂಗ್ ಅವರು ವಹಿಸಿದ ಪಾತ್ರಕ್ಕೆ ಕೃತಜ್ಞತೆ ಅರ್ಪಿಸುವ ನಿಲುವಳಿಯನ್ನು ಮುಖ್ಯಮಂತ್ರಿ ರೇವಂತ ರೆಡ್ಡಿ ಮಂಡಿಸಿದರು.</p><p>ಚರ್ಚೆಯ ಬಳಿಕ, ಮನಮೋಹನ ಸಿಂಗ್ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ನಿರ್ಣಯಕ್ಕೆ ಪಕ್ಷಭೇದ ಇಲ್ಲದೆ ಸರ್ವಾನುಮತದ ಅಂಗೀಕಾರ ದೊರಕಿತು.</p>.ಮನಮೋಹನ ಸಿಂಗ್ ಅವರ ಸ್ಮಾರಕ ವಿಚಾರ; ಕೀಳುಮಟ್ಟದ ರಾಜಕೀಯ: ನಡ್ಡಾ. <p>ಅಲ್ಲದೆ ಎರಡು ನಿಮಿಷಗಳ ಮೌನಾಚರಣೆಯೂ ನಡೆಯಿತು. ವಿರೋಧ ಪಕ್ಷದ ನಾಯಕ ಕೆ. ಚಂದ್ರಶೇಖರ ರಾವ್ ಸದನಕ್ಕೆ ಗೈರಾಗಿದ್ದರು.</p>.ಮನಮೋಹನ ಸಿಂಗ್ ಅಗಲಿಕೆಗೆ ಜೋ ಬೈಡನ್ ಸಂತಾಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರಿಗೆ ಭಾರತ ರತ್ನ ನೀಡಬೇಕು ಎನ್ನುವ ನಿರ್ಣಯವನ್ನು ತೆಲಂಗಾಣ ವಿಧಾಸಭೆ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಿದೆ.</p>.ಮನಮೋಹನ ಸಿಂಗ್ ಅಸ್ಥಿ ವಿಸರ್ಜನೆ ವೇಳೆ ಗೈರು: ಕಾಂಗ್ರೆಸ್ ಹೇಳಿದ್ದೇನು?.<p>ಕಲಾಪ ಆರಂಭವಾಗುತ್ತಿದ್ದಂತೆಯೇ, ಡಾ. ಸಿಂಗ್ ಅವರಿಗೆ ಸಂತಾಪ ಸೂಚಿಸುವ ಹಾಗೂ 2014 ರಲ್ಲಿ ತೆಲಂಗಾಣ ರಾಜ್ಯ ರಚನೆಯಲ್ಲಿ ಸಿಂಗ್ ಅವರು ವಹಿಸಿದ ಪಾತ್ರಕ್ಕೆ ಕೃತಜ್ಞತೆ ಅರ್ಪಿಸುವ ನಿಲುವಳಿಯನ್ನು ಮುಖ್ಯಮಂತ್ರಿ ರೇವಂತ ರೆಡ್ಡಿ ಮಂಡಿಸಿದರು.</p><p>ಚರ್ಚೆಯ ಬಳಿಕ, ಮನಮೋಹನ ಸಿಂಗ್ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ ನಿರ್ಣಯಕ್ಕೆ ಪಕ್ಷಭೇದ ಇಲ್ಲದೆ ಸರ್ವಾನುಮತದ ಅಂಗೀಕಾರ ದೊರಕಿತು.</p>.ಮನಮೋಹನ ಸಿಂಗ್ ಅವರ ಸ್ಮಾರಕ ವಿಚಾರ; ಕೀಳುಮಟ್ಟದ ರಾಜಕೀಯ: ನಡ್ಡಾ. <p>ಅಲ್ಲದೆ ಎರಡು ನಿಮಿಷಗಳ ಮೌನಾಚರಣೆಯೂ ನಡೆಯಿತು. ವಿರೋಧ ಪಕ್ಷದ ನಾಯಕ ಕೆ. ಚಂದ್ರಶೇಖರ ರಾವ್ ಸದನಕ್ಕೆ ಗೈರಾಗಿದ್ದರು.</p>.ಮನಮೋಹನ ಸಿಂಗ್ ಅಗಲಿಕೆಗೆ ಜೋ ಬೈಡನ್ ಸಂತಾಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>