<p><strong>ಹೈದರಾಬಾದ್:</strong> ರಸ್ತೆಗಳು ಉತ್ತಮವಾಗಿದ್ದರೆ ವಾಹನಗಳು ವೇಗವಾಗಿ ಸಂಚರಿಸುತ್ತವೆ, ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಸ್ತೆಗಳು ಹಾಳಾಗಿದ್ದರೆ, ಕಡಿಮೆ ಅಪಘಾತಗಳಾಗುತ್ತವೆ ಎಂದು ಬಿಜೆಪಿ ಸಂಸದ ವಿಶ್ವೇಶ್ವರ್ ರೆಡ್ಡಿ ಅವರು ಮಂಗಳವಾರ ಹೇಳಿದ್ದಾರೆ.</p><p>ಸೋಮವಾರ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ ಜಲ್ಲಿಕಲ್ಲು ತುಂಬಿದ ಲಾರಿಯೊಂದು ತೆಲಂಗಾಣ ಸಾರಿಗೆ ಸಂಸ್ಥೆಯ ಬಸ್ಗೆ ಡಿಕ್ಕಿ ಹೊಡೆದು 19 ಜನರು ಮೃತಪಟ್ಟಿದ್ದರು. 30ಕ್ಕೂ ಅಧಿಕ ಜನ ಗಾಯಗೊಂಡಿದ್ದರು. ಅದೇ ಕ್ಷೇತ್ರದ ಸಂಸದರಾಗಿರುವ ವಿಶ್ವೇಶ್ವರ್ ರೆಡ್ಡಿ ಅವರು ಆ ಕುರಿತು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. </p><p>ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಸಂಸದರು, ಘಟನೆಗೆ ಹಿಂದಿನ ಬಿಆರ್ಎಸ್ ಸರ್ಕಾರವನ್ನು ಹೊಣೆಯಾಗಿಸಿದರು. ಹೈದರಾಬಾದ್ – ಬಿಜಾಪುರ ಹೆದ್ದಾರಿ ನಿರ್ಮಾಣಕ್ಕಾಗಿ ಭೂಮಿಯನ್ನು ವಶಪಡಿಸಿಕೊಳ್ಳಲು ಹಿಂದಿನ ಸರ್ಕಾರವು ವಿಳಂಬ ಮಾಡಿದ್ದೆ, ಈ ದುರಂತಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ. </p><p>ಚೆವೆಲ್ಲಾ ಬಳಿ ನಿಜಾಮರ ಕಾಲದಲ್ಲಿ ಅನಂತಗಿರಿ ಬೆಟ್ಟಗಳಿಗೆ ಸಂಚರಿಸಲು ಮಾಡಿದ ರಸ್ತೆಗಳಲ್ಲೇ ಈಗಲೂ ಸಂಚರಿಸಲಾಗುತ್ತಿದೆ. ನಾನು ಸಂಸದನಾದ ನಂತರ ರಸ್ತೆ ದುರಸ್ತಿಗಾಗಿ ಬಿಆರ್ಎಸ್ ಸರ್ಕಾರಕ್ಕೆ ಮನವಿ ಮಾಡಿದ್ದೆ, ಆದರೆ ಅದು ಸಾಧ್ಯವಾಗಲಿಲ್ಲ. 2016ರಲ್ಲಿ ಈ ರಸ್ತೆಯನ್ನು ಹೈದರಾಬಾದ್ – ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇರಿಸುವಂತೆ ನಿತಿನ್ ಗಡ್ಕರಿಯವರಿಗೆ ಮನವಿ ಸಲ್ಲಿಸಿದ್ದೆ. ಆ ಪ್ರಸ್ತಾವಕ್ಕೆ ಒಪ್ಪಿಗೆ ಕೂಡ ಸಿಕ್ಕಿತ್ತು. ಅದರ ಜೊತೆಗೆ ಒಪ್ಪಿಗೆ ದೊರೆತ 8 ಹೆದ್ದಾರಿಗಳ ಕಾಮಗಾರಿ ಪೂರ್ಣಗೊಂಡಿದೆ. ಆದರೆ, ಬಿಆರ್ಎಸ್ ಸರ್ಕಾರವು ಭೂಮಿಯನ್ನು ವಶಪಡಿಸಿಕೊಳ್ಳಲು ವಿಳಂಬ ಮಾಡಿದ್ದರಿಂದ, ಈ ಹೆದ್ದಾರಿ ಪೂರ್ಣಗೊಂಡಿಲ್ಲ ಎಂದು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ರಸ್ತೆಗಳು ಉತ್ತಮವಾಗಿದ್ದರೆ ವಾಹನಗಳು ವೇಗವಾಗಿ ಸಂಚರಿಸುತ್ತವೆ, ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಸ್ತೆಗಳು ಹಾಳಾಗಿದ್ದರೆ, ಕಡಿಮೆ ಅಪಘಾತಗಳಾಗುತ್ತವೆ ಎಂದು ಬಿಜೆಪಿ ಸಂಸದ ವಿಶ್ವೇಶ್ವರ್ ರೆಡ್ಡಿ ಅವರು ಮಂಗಳವಾರ ಹೇಳಿದ್ದಾರೆ.</p><p>ಸೋಮವಾರ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ ಜಲ್ಲಿಕಲ್ಲು ತುಂಬಿದ ಲಾರಿಯೊಂದು ತೆಲಂಗಾಣ ಸಾರಿಗೆ ಸಂಸ್ಥೆಯ ಬಸ್ಗೆ ಡಿಕ್ಕಿ ಹೊಡೆದು 19 ಜನರು ಮೃತಪಟ್ಟಿದ್ದರು. 30ಕ್ಕೂ ಅಧಿಕ ಜನ ಗಾಯಗೊಂಡಿದ್ದರು. ಅದೇ ಕ್ಷೇತ್ರದ ಸಂಸದರಾಗಿರುವ ವಿಶ್ವೇಶ್ವರ್ ರೆಡ್ಡಿ ಅವರು ಆ ಕುರಿತು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. </p><p>ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಸಂಸದರು, ಘಟನೆಗೆ ಹಿಂದಿನ ಬಿಆರ್ಎಸ್ ಸರ್ಕಾರವನ್ನು ಹೊಣೆಯಾಗಿಸಿದರು. ಹೈದರಾಬಾದ್ – ಬಿಜಾಪುರ ಹೆದ್ದಾರಿ ನಿರ್ಮಾಣಕ್ಕಾಗಿ ಭೂಮಿಯನ್ನು ವಶಪಡಿಸಿಕೊಳ್ಳಲು ಹಿಂದಿನ ಸರ್ಕಾರವು ವಿಳಂಬ ಮಾಡಿದ್ದೆ, ಈ ದುರಂತಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ. </p><p>ಚೆವೆಲ್ಲಾ ಬಳಿ ನಿಜಾಮರ ಕಾಲದಲ್ಲಿ ಅನಂತಗಿರಿ ಬೆಟ್ಟಗಳಿಗೆ ಸಂಚರಿಸಲು ಮಾಡಿದ ರಸ್ತೆಗಳಲ್ಲೇ ಈಗಲೂ ಸಂಚರಿಸಲಾಗುತ್ತಿದೆ. ನಾನು ಸಂಸದನಾದ ನಂತರ ರಸ್ತೆ ದುರಸ್ತಿಗಾಗಿ ಬಿಆರ್ಎಸ್ ಸರ್ಕಾರಕ್ಕೆ ಮನವಿ ಮಾಡಿದ್ದೆ, ಆದರೆ ಅದು ಸಾಧ್ಯವಾಗಲಿಲ್ಲ. 2016ರಲ್ಲಿ ಈ ರಸ್ತೆಯನ್ನು ಹೈದರಾಬಾದ್ – ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇರಿಸುವಂತೆ ನಿತಿನ್ ಗಡ್ಕರಿಯವರಿಗೆ ಮನವಿ ಸಲ್ಲಿಸಿದ್ದೆ. ಆ ಪ್ರಸ್ತಾವಕ್ಕೆ ಒಪ್ಪಿಗೆ ಕೂಡ ಸಿಕ್ಕಿತ್ತು. ಅದರ ಜೊತೆಗೆ ಒಪ್ಪಿಗೆ ದೊರೆತ 8 ಹೆದ್ದಾರಿಗಳ ಕಾಮಗಾರಿ ಪೂರ್ಣಗೊಂಡಿದೆ. ಆದರೆ, ಬಿಆರ್ಎಸ್ ಸರ್ಕಾರವು ಭೂಮಿಯನ್ನು ವಶಪಡಿಸಿಕೊಳ್ಳಲು ವಿಳಂಬ ಮಾಡಿದ್ದರಿಂದ, ಈ ಹೆದ್ದಾರಿ ಪೂರ್ಣಗೊಂಡಿಲ್ಲ ಎಂದು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>