<p><strong>ಹೈದರಾಬಾದ್:</strong> ಕೆ.ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ಸರ್ಕಾರವು ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯನ್ನು ತಲಾ ₹5 ಕೋಟಿಗೆ ಹೆಚ್ಚಿಸಿದ್ದು, ಇದಕ್ಕಾಗಿ 2021-22ರ ಬಜೆಟ್ನಲ್ಲಿ ₹800 ಕೋಟಿ ಮೀಸಲಿಟ್ಟಿದೆ.</p>.<p>ಸಂಸದರ ಕ್ಷೇತ್ರಾಭಿವೃದ್ಧಿಗೆ ಕೇಂದ್ರವು ₹5 ಕೋಟಿ ಅನುದಾನ ನೀಡುತ್ತಿರುವಂತೆ ಈ ಯೋಜನೆಯಡಿ ಪ್ರತಿ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರಿಗೆ ಅವರ ಕ್ಷೇತ್ರದ ಅಭಿವೃದ್ಧಿಗೆ ತಲಾ ₹5 ಕೋಟಿ ಅನುದಾನವನ್ನು ಚಂದ್ರಶೇಖರ್ ರಾವ್ ಸರ್ಕಾರ ತೆಗೆದಿರಿಸಿದೆ.</p>.<p>ವಿವಿಧ ಅಭಿವೃದ್ಧಿ ಕೆಲಸ ಮತ್ತು ಸಾರ್ವಜನಿಕ ಹಿತಾಸಕ್ತಿಯ ಚಟುವಟಿಕೆಗಳಿಗೆ ಈ ನಿಧಿಯನ್ನು ಖರ್ಚು ಮಾಡಬೇಕಿದೆ.</p>.<p>ಕಳೆದ ವರ್ಷದ ಬಜೆಟ್ನಲ್ಲಿ ಕ್ಷೇತ್ರಾಭಿವೃದ್ಧಿ ನಿಧಿಗೆ ₹480 ಕೋಟಿ ಮೀಸಲಿಟ್ಟಿದ್ದ ಸರ್ಕಾರ, ಪ್ರತಿ ಶಾಸಕ ಮತ್ತು ವಿಧಾನಪರಿಷತ್ ಸದಸ್ಯರಿಗೆ ತಲಾ ₹3 ಕೋಟಿ ಅನುದಾನ ಹಂಚಿಕೆ ಮಾಡಿತ್ತು.</p>.<p><strong>₹2.3 ಲಕ್ಷ ಕೋಟಿಯ ಬಜೆಟ್</strong></p>.<p>ತೆಲಂಗಾಣ ರಾಜ್ಯ ಸರ್ಕಾರ 2021-22ರ ಸಾಲಿಗೆ ₹2.3 ಲಕ್ಷ ಕೋಟಿಯ ಬಜೆಟ್ ಅನ್ನು ಗುರುವಾರ ಮಂಡಿಸಿದೆ.</p>.<p>ಹೊಸದಾಗಿ ಜಾರಿಗೆ ತಂದಿರುವ ಮುಖ್ಯಮಂತ್ರಿ ದಲಿತ ಸಬಲೀಕರಣ ಯೋಜನೆಗೆ ₹1 ಸಾವಿರ ಕೋಟಿ, ರೈತ ಬಂಧು ಯೋಜನೆಗೆ ₹14,800 ಕೋಟಿ ಹಾಗೂ ಎರಡು ಬೆಳೆಯ ಅವಧಿಗೆ ರೈತರಿಗೆ ಪ್ರೋತ್ಸಾಹ ಧನ ನೀಡಲು ₹10 ಸಾವಿರ ಕೋಟಿ ಅನುದಾನವನ್ನು ಬಜೆಟ್ನಲ್ಲಿ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಕೆ.ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ಸರ್ಕಾರವು ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯನ್ನು ತಲಾ ₹5 ಕೋಟಿಗೆ ಹೆಚ್ಚಿಸಿದ್ದು, ಇದಕ್ಕಾಗಿ 2021-22ರ ಬಜೆಟ್ನಲ್ಲಿ ₹800 ಕೋಟಿ ಮೀಸಲಿಟ್ಟಿದೆ.</p>.<p>ಸಂಸದರ ಕ್ಷೇತ್ರಾಭಿವೃದ್ಧಿಗೆ ಕೇಂದ್ರವು ₹5 ಕೋಟಿ ಅನುದಾನ ನೀಡುತ್ತಿರುವಂತೆ ಈ ಯೋಜನೆಯಡಿ ಪ್ರತಿ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರಿಗೆ ಅವರ ಕ್ಷೇತ್ರದ ಅಭಿವೃದ್ಧಿಗೆ ತಲಾ ₹5 ಕೋಟಿ ಅನುದಾನವನ್ನು ಚಂದ್ರಶೇಖರ್ ರಾವ್ ಸರ್ಕಾರ ತೆಗೆದಿರಿಸಿದೆ.</p>.<p>ವಿವಿಧ ಅಭಿವೃದ್ಧಿ ಕೆಲಸ ಮತ್ತು ಸಾರ್ವಜನಿಕ ಹಿತಾಸಕ್ತಿಯ ಚಟುವಟಿಕೆಗಳಿಗೆ ಈ ನಿಧಿಯನ್ನು ಖರ್ಚು ಮಾಡಬೇಕಿದೆ.</p>.<p>ಕಳೆದ ವರ್ಷದ ಬಜೆಟ್ನಲ್ಲಿ ಕ್ಷೇತ್ರಾಭಿವೃದ್ಧಿ ನಿಧಿಗೆ ₹480 ಕೋಟಿ ಮೀಸಲಿಟ್ಟಿದ್ದ ಸರ್ಕಾರ, ಪ್ರತಿ ಶಾಸಕ ಮತ್ತು ವಿಧಾನಪರಿಷತ್ ಸದಸ್ಯರಿಗೆ ತಲಾ ₹3 ಕೋಟಿ ಅನುದಾನ ಹಂಚಿಕೆ ಮಾಡಿತ್ತು.</p>.<p><strong>₹2.3 ಲಕ್ಷ ಕೋಟಿಯ ಬಜೆಟ್</strong></p>.<p>ತೆಲಂಗಾಣ ರಾಜ್ಯ ಸರ್ಕಾರ 2021-22ರ ಸಾಲಿಗೆ ₹2.3 ಲಕ್ಷ ಕೋಟಿಯ ಬಜೆಟ್ ಅನ್ನು ಗುರುವಾರ ಮಂಡಿಸಿದೆ.</p>.<p>ಹೊಸದಾಗಿ ಜಾರಿಗೆ ತಂದಿರುವ ಮುಖ್ಯಮಂತ್ರಿ ದಲಿತ ಸಬಲೀಕರಣ ಯೋಜನೆಗೆ ₹1 ಸಾವಿರ ಕೋಟಿ, ರೈತ ಬಂಧು ಯೋಜನೆಗೆ ₹14,800 ಕೋಟಿ ಹಾಗೂ ಎರಡು ಬೆಳೆಯ ಅವಧಿಗೆ ರೈತರಿಗೆ ಪ್ರೋತ್ಸಾಹ ಧನ ನೀಡಲು ₹10 ಸಾವಿರ ಕೋಟಿ ಅನುದಾನವನ್ನು ಬಜೆಟ್ನಲ್ಲಿ ಘೋಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>