<p><strong>ಹೈದರಾಬಾದ್</strong>: ತೆಲಂಗಾಣ ರಾಜ್ಯದ ಸಂಸ್ಥಾಪನಾ ದಿನ ಸಮಾರಂಭ ಭಾನುವಾರ ಸಂಭ್ರಮದಿಂದ ನಡೆಯಿತು. ಅನಾರೋಗ್ಯದ ಕಾರಣ ನೀಡಿ ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಶುಭ ಹಾರೈಸಿ ಕಳುಹಿಸಿದ್ದ ವಿಡಿಯೊ ಸಂದೇಶವನ್ನು ಪ್ರದರ್ಶಿಸಲಾಯಿತು.</p>.<p>ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಿದ್ದ ಸರ್ಕಾರದ ಕ್ರಮಕ್ಕೆ ವಿರೋಧ ಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಆದರೆ, ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಮರ್ಥಿಸಿಕೊಂಡಿದ್ದರು.</p>.<p>ತಮ್ಮ ಭಾಷಣದಲ್ಲೂ ಇದನ್ನು ಉಲ್ಲೇಖಿಸಿದ ಮುಖ್ಯಮಂತ್ರಿ, ‘ಚರಿತ್ರೆಯಲ್ಲಿ ತೆಲಂಗಾಣ ಇರುವಷ್ಟು ಕಾಲ ಈ ಸಮಾಜ ಸೋನಿಯಾಗಾಂಧಿ ಅವರಿಗೆ ತಾಯಿ ಸ್ಥಾನದ ಗೌರವ ನೀಡಲಿದೆ’ ಎಂದರು. ‘ಭಾರತೀಯ ಸಮಾಜವು ಯಾವ ಆಧಾರದಲ್ಲಿ ಗಾಂಧೀಜಿ ಅವರನ್ನು ರಾಷ್ಟ್ರಪಿತ ಎಂದು ಗುರುತಿಸುತ್ತದೆ’ ಎಂದು ಪ್ರಶ್ನಿಸುವ ಮೂಲಕ ಅವರು ತಮ್ಮ ಈ ಮಾತನ್ನು ಸಮರ್ಥಿಸಿಕೊಂಡರು.</p>.<p>ಸೋನಿಯಾ ಗಾಂಧಿ ತಮ್ಮ ಸಂದೇಶದಲ್ಲಿ, ಪ್ರತ್ಯೇಕ ರಾಜ್ಯ ಸ್ಥಾಪನೆಗೆ ಕರೀಂನಗರದಲ್ಲಿ 2004ರಲ್ಲಿ ನೀಡಿದ್ದ ಭರವಸೆಯನ್ನು ಉಲ್ಲೇಖಿಸಿ, ‘ರಾಜ್ಯದ ಕಾಂಗ್ರೆಸ್ ಸರ್ಕಾರವು, ಪಕ್ಷದ ಎಲ್ಲ ಆರು ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ಜನರ ಆಶೋತ್ತರಗಳಿಗೆ ಸ್ಪಂದಿಸಲಿದೆ’ ಎಂದು ತಿಳಿಸಿದರು. </p>.<p>ಇದೇ ವೇಳೆ ರೇವಂತರೆಡ್ಡಿ ಅವರು, ಕವಿ ಅಂದೇಶ್ರಿ ಅವರು ರಚಿಸಿ, ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಸಂಯೋಜಿಸಿರುವ ‘ಜಯ ಜಯ ಹೇ ತೆಲಂಗಾಣ..’ ನಾಡಗೀತೆಯನ್ನು ಬಿಡುಗಡೆಗೊಳಿಸಿದರು. ಗನ್ಪಾರ್ಕ್ನಲ್ಲಿದ್ದ ಹುತಾತ್ಮರ ಸ್ಮಾರಕಕ್ಕೂ ಬಳಿಕ ನಮನ ಸಲ್ಲಿಸಿದರು.</p>.<p>ಪ್ರತಿಪಕ್ಷ ಬಿಆರ್ಎಸ್ ಪ್ರತ್ಯೇಕವಾಗಿ ಸ್ಥಾಪನಾ ದಿನ ಆಚರಿಸಿತು. ಅಧಿಕೃತ ಕಾರ್ಯಕ್ರಮಕ್ಕೆ ನೀಡಿದ್ದ ಆಹ್ವಾನವನ್ನು ಬಿಆರ್ಎಸ್ ಮುಖ್ಯಸ್ಥ ಕೆ.ಚಂದ್ರಶೇಖರರಾವ್ ನಿರಾಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ತೆಲಂಗಾಣ ರಾಜ್ಯದ ಸಂಸ್ಥಾಪನಾ ದಿನ ಸಮಾರಂಭ ಭಾನುವಾರ ಸಂಭ್ರಮದಿಂದ ನಡೆಯಿತು. ಅನಾರೋಗ್ಯದ ಕಾರಣ ನೀಡಿ ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಶುಭ ಹಾರೈಸಿ ಕಳುಹಿಸಿದ್ದ ವಿಡಿಯೊ ಸಂದೇಶವನ್ನು ಪ್ರದರ್ಶಿಸಲಾಯಿತು.</p>.<p>ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಿದ್ದ ಸರ್ಕಾರದ ಕ್ರಮಕ್ಕೆ ವಿರೋಧ ಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಆದರೆ, ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಮರ್ಥಿಸಿಕೊಂಡಿದ್ದರು.</p>.<p>ತಮ್ಮ ಭಾಷಣದಲ್ಲೂ ಇದನ್ನು ಉಲ್ಲೇಖಿಸಿದ ಮುಖ್ಯಮಂತ್ರಿ, ‘ಚರಿತ್ರೆಯಲ್ಲಿ ತೆಲಂಗಾಣ ಇರುವಷ್ಟು ಕಾಲ ಈ ಸಮಾಜ ಸೋನಿಯಾಗಾಂಧಿ ಅವರಿಗೆ ತಾಯಿ ಸ್ಥಾನದ ಗೌರವ ನೀಡಲಿದೆ’ ಎಂದರು. ‘ಭಾರತೀಯ ಸಮಾಜವು ಯಾವ ಆಧಾರದಲ್ಲಿ ಗಾಂಧೀಜಿ ಅವರನ್ನು ರಾಷ್ಟ್ರಪಿತ ಎಂದು ಗುರುತಿಸುತ್ತದೆ’ ಎಂದು ಪ್ರಶ್ನಿಸುವ ಮೂಲಕ ಅವರು ತಮ್ಮ ಈ ಮಾತನ್ನು ಸಮರ್ಥಿಸಿಕೊಂಡರು.</p>.<p>ಸೋನಿಯಾ ಗಾಂಧಿ ತಮ್ಮ ಸಂದೇಶದಲ್ಲಿ, ಪ್ರತ್ಯೇಕ ರಾಜ್ಯ ಸ್ಥಾಪನೆಗೆ ಕರೀಂನಗರದಲ್ಲಿ 2004ರಲ್ಲಿ ನೀಡಿದ್ದ ಭರವಸೆಯನ್ನು ಉಲ್ಲೇಖಿಸಿ, ‘ರಾಜ್ಯದ ಕಾಂಗ್ರೆಸ್ ಸರ್ಕಾರವು, ಪಕ್ಷದ ಎಲ್ಲ ಆರು ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ಜನರ ಆಶೋತ್ತರಗಳಿಗೆ ಸ್ಪಂದಿಸಲಿದೆ’ ಎಂದು ತಿಳಿಸಿದರು. </p>.<p>ಇದೇ ವೇಳೆ ರೇವಂತರೆಡ್ಡಿ ಅವರು, ಕವಿ ಅಂದೇಶ್ರಿ ಅವರು ರಚಿಸಿ, ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಸಂಯೋಜಿಸಿರುವ ‘ಜಯ ಜಯ ಹೇ ತೆಲಂಗಾಣ..’ ನಾಡಗೀತೆಯನ್ನು ಬಿಡುಗಡೆಗೊಳಿಸಿದರು. ಗನ್ಪಾರ್ಕ್ನಲ್ಲಿದ್ದ ಹುತಾತ್ಮರ ಸ್ಮಾರಕಕ್ಕೂ ಬಳಿಕ ನಮನ ಸಲ್ಲಿಸಿದರು.</p>.<p>ಪ್ರತಿಪಕ್ಷ ಬಿಆರ್ಎಸ್ ಪ್ರತ್ಯೇಕವಾಗಿ ಸ್ಥಾಪನಾ ದಿನ ಆಚರಿಸಿತು. ಅಧಿಕೃತ ಕಾರ್ಯಕ್ರಮಕ್ಕೆ ನೀಡಿದ್ದ ಆಹ್ವಾನವನ್ನು ಬಿಆರ್ಎಸ್ ಮುಖ್ಯಸ್ಥ ಕೆ.ಚಂದ್ರಶೇಖರರಾವ್ ನಿರಾಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>