<p><strong>ಹೈದರಾಬಾದ್</strong>: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ತಿಂಗಳಲ್ಲಿ 15 ದಿನ ಫಾರ್ಮ್ಹೌಸ್ನಲ್ಲೇ ಕಾಲ ಕಳೆಯುತ್ತಾರೆ ಎಂದು ಕೇಂದ್ರ ಸಚಿವ ಜಿ.ಕೃಷ್ಣಾ ರೆಡ್ಡಿ ಆರೋಪಿಸಿದ್ದಾರೆ.</p>.<p>ಮಂಗಳವಾರ ಹೈದರಾಬಾದ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎಂಟು ವರ್ಷದಿಂದ ಕೆಸಿಆರ್ ಅವರು ಸರ್ವಾಧಿಕಾರದಿಂದ ರಾಜ್ಯ ನಡೆಸುತ್ತಿದ್ದಾರೆ. ತೆಲಂಗಾಣ ರಾಜ್ಯ ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದಿದೆ ಎಂದಿದ್ದಾರೆ.</p>.<p>ಇಂತಹ ಪರಿಸ್ಥಿತಿಯಲ್ಲಿ ಸಿಎಂ ತಿಂಗಳಲ್ಲಿ 15 ದಿನ ಫಾರ್ಮ್ಹೌಸನಲ್ಲೇ ಕಾಲಹರಣ ಮಾಡುತ್ತಾರೆ. ಜನರನ್ನು ಭೇಟಿಯಾಗುವುದಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.</p>.<p>ಕೆಸಿಆರ್ ಅವರ ಎಂಟು ವರ್ಷಗಳ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಅವರು ಆರೋಪಿಸಿದ್ದಾರೆ.</p>.<p>ಕೆಸಿಆರ್ ಅವರಂತಹ ಮುಖ್ಯಮಂತ್ರಿ ತೆಲಂಗಾಣದ ಜನಕ್ಕೆ ಬೇಕಾಗಿಲ್ಲ. ಬರುವ ಚುನಾವಣೆಯಲ್ಲಿ ಖಂಡಿತವಾಗಿಯೂ ಜನ ಇವರಿಗೆ ಬುದ್ಧಿ ಕಲಿಸುತ್ತಾರೆ. ತೆಲಂಗಾಣದಲ್ಲಿ ಶೀಘ್ರದಲ್ಲೇ ಬಿಜೆಪಿ ಆಡಳಿತ ಬರಲಿದೆ ಎಂದು ರೆಡ್ಡಿ ಹೇಳಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.</p>.<p><a href="https://www.prajavani.net/india-news/telangana-cm-kcr-once-again-skips-function-hosted-by-governor-tamilisai-soundararajan-963666.html" itemprop="url">ತೆಲಂಗಾಣ: ರಾಜ್ಯಪಾಲರ ಔತಣಕೂಟಕ್ಕೆ ಕೆಸಿಆರ್ ಗೈರು, ರಾಜಕೀಯ ವಲಯದಲ್ಲಿ ಚರ್ಚೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ತಿಂಗಳಲ್ಲಿ 15 ದಿನ ಫಾರ್ಮ್ಹೌಸ್ನಲ್ಲೇ ಕಾಲ ಕಳೆಯುತ್ತಾರೆ ಎಂದು ಕೇಂದ್ರ ಸಚಿವ ಜಿ.ಕೃಷ್ಣಾ ರೆಡ್ಡಿ ಆರೋಪಿಸಿದ್ದಾರೆ.</p>.<p>ಮಂಗಳವಾರ ಹೈದರಾಬಾದ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎಂಟು ವರ್ಷದಿಂದ ಕೆಸಿಆರ್ ಅವರು ಸರ್ವಾಧಿಕಾರದಿಂದ ರಾಜ್ಯ ನಡೆಸುತ್ತಿದ್ದಾರೆ. ತೆಲಂಗಾಣ ರಾಜ್ಯ ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದಿದೆ ಎಂದಿದ್ದಾರೆ.</p>.<p>ಇಂತಹ ಪರಿಸ್ಥಿತಿಯಲ್ಲಿ ಸಿಎಂ ತಿಂಗಳಲ್ಲಿ 15 ದಿನ ಫಾರ್ಮ್ಹೌಸನಲ್ಲೇ ಕಾಲಹರಣ ಮಾಡುತ್ತಾರೆ. ಜನರನ್ನು ಭೇಟಿಯಾಗುವುದಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.</p>.<p>ಕೆಸಿಆರ್ ಅವರ ಎಂಟು ವರ್ಷಗಳ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಅವರು ಆರೋಪಿಸಿದ್ದಾರೆ.</p>.<p>ಕೆಸಿಆರ್ ಅವರಂತಹ ಮುಖ್ಯಮಂತ್ರಿ ತೆಲಂಗಾಣದ ಜನಕ್ಕೆ ಬೇಕಾಗಿಲ್ಲ. ಬರುವ ಚುನಾವಣೆಯಲ್ಲಿ ಖಂಡಿತವಾಗಿಯೂ ಜನ ಇವರಿಗೆ ಬುದ್ಧಿ ಕಲಿಸುತ್ತಾರೆ. ತೆಲಂಗಾಣದಲ್ಲಿ ಶೀಘ್ರದಲ್ಲೇ ಬಿಜೆಪಿ ಆಡಳಿತ ಬರಲಿದೆ ಎಂದು ರೆಡ್ಡಿ ಹೇಳಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.</p>.<p><a href="https://www.prajavani.net/india-news/telangana-cm-kcr-once-again-skips-function-hosted-by-governor-tamilisai-soundararajan-963666.html" itemprop="url">ತೆಲಂಗಾಣ: ರಾಜ್ಯಪಾಲರ ಔತಣಕೂಟಕ್ಕೆ ಕೆಸಿಆರ್ ಗೈರು, ರಾಜಕೀಯ ವಲಯದಲ್ಲಿ ಚರ್ಚೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>