ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ಇಂದು (ಶನಿವಾರ) ರಾಷ್ಟ್ರ ರಾಜಧಾನಿ ದೆಹಲಿಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ತೆರಳಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.
ನಾಳೆ ಬೆಳಿಗ್ಗೆ ಸಿಎಂ ರೇವಂತ್ ರೆಡ್ಡಿ ಮಣಿಪುರಕ್ಕೆ ತೆರಳಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ನಂತರ ದೆಹಲಿಗೆ ಹಿಂದಿರುಗಿ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾಗವಹಿಸಲು ದಾವೋಸ್ಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜ.14ರಿಂದ ಮಣಿಪುರದ ಇಂಫಾಲ್ನಿಂದ ಮುಂಬೈವರೆಗೆ ‘ಭಾರತ್ ಜೋಡೊ ನ್ಯಾಯ ಯಾತ್ರೆ’ಯನ್ನು ಕೈಗೊಳ್ಳಲಿದ್ದಾರೆ. ಈ ಯಾತ್ರೆಯು ಅರುಣಾಚಲ ಪ್ರದೇಶ ಸೇರಿದಂತೆ 15 ರಾಜ್ಯಗಳಲ್ಲಿ ಸಂಚರಿಸಲಿದೆ.