<p><strong>ಹೈದರಾಬಾದ್:</strong> ‘ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ, ಕಾಂಗ್ರೆಸ್ ಸಂಸದ ಎ.ರೇವಂತ ರೆಡ್ಡಿ ಸೇರಿದಂತೆ ಪಕ್ಷದ ಹಲವು ನಾಯಕರನ್ನು ವಿವಿಧ ಸ್ಥಳಗಳಲ್ಲಿ ಸೋಮವಾರ ಗೃಹ ಬಂಧನದಲ್ಲಿ ಇರಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಕಳೆದ ವಾರ ತೆಲಂಗಾಣ ಸರ್ಕಾರ ನಡೆಸಿದ ಕೋಕಪೇಟೆ ಜಮೀನುಗಳ ಇ-ಹರಾಜಿನಲ್ಲಿ ₹ 1,000 ಕೋಟಿಯ ಅಕ್ರಮಗಳು ನಡೆದಿವೆ’ ಎಂದು ಮಲ್ಕಾಜ್ಗಿರಿಯ ಲೋಕಸಭಾ ಸದಸ್ಯ ಕಾಂಗ್ರೆಸ್ ನ ರೇವಂತ್ ರೆಡ್ಡಿ ಆರೋಪಿಸಿದ್ದರು.</p>.<p>ಈ ಅಕ್ರಮವನ್ನು ವಿರೋಧಿಸಿ ತೆಲಂಗಾಣದ ಕಾಂಗ್ರೆಸ್ ಘಟಕವು ಕೋಕಪೇಟೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಲು ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ರೇವಂತ ರೆಡ್ಡಿ, ಶಾಸಕ ಸಂಗ ರೆಡ್ಡಿ, ತೆಲಂಗಾಣ ಕಾಂಗ್ರೆಸ್ ಘಟಕದ ಕಾರ್ಯಾಧ್ಯಕ್ಷ ಟಿ. ಜಯಪ್ರಕಾಶ್ ರೆಡ್ಡಿ, ಮಲ್ಲು ಭಟ್ಟಿ, ಮೊಹಮ್ಮದ್ ಆಲಿ ಶಬ್ಬೀರ್ ಸೇರಿದಂತೆ ಹಲವು ಹಿರಿಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.</p>.<p>‘ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಅಧಿವೇಶನ ನಡೆಯುತ್ತಿರುವ ಈ ಸಮಯದಲ್ಲಿ ನನ್ನನ್ನು ಸಂಸತ್ತಿಗೆ ಹೋಗದಂತೆ ತಡೆಯಲಾಗುತ್ತಿದೆ. ನನ್ನ ಸಾಂವಿಧಾನಿಕ ಸವಲತ್ತನ್ನು ಹತ್ತಿಕ್ಕಲಾಗುತ್ತಿದೆ’ ಎಂದು ರೇವಂತ ರೆಡ್ಡಿ ಅವರು ಲೋಕಸಭಾ ಸ್ಪೀಕರ್ಗೆ ಪತ್ರವನ್ನು ಬರೆದಿದ್ಧಾರೆ.</p>.<p>‘ಸಂಸತ್ತಿನ ಅಧಿವೇಶನದಲ್ಲಿ ಪಾಲ್ಗೊಳದಂತೆ ನನ್ನನ್ನು ತಡೆಯಲಾಗುತ್ತಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮತ್ತು ಮುಖ್ಯ ಕಾರ್ಯದರ್ಶಿ, ಡಿಜಿಪಿ ಅವರ ಆದೇಶದಂತೆ ರಾಜ್ಯ ಪೊಲೀಸರು ಈ ಕ್ರಮಕೈಗೊಂಡಿದ್ಧಾರೆ’ ಎಂದು ಪತ್ರದಲ್ಲಿ ಹೇಳಲಾಗಿದೆ.</p>.<p>‘ಸಂಸತ್ತಿನಲ್ಲಿ ಕೋಕಪೇಟೆ ಜಮೀನು ಅಕ್ರಮದ ಬಗ್ಗೆ ಪ್ರಶ್ನಿಸುತ್ತೇನೆ ಎಂಬ ಹೆದರಿಕೆಯಿಂದ ಮುಖ್ಯಮಂತ್ರಿ ಮತ್ತು ಡಿಜಿಪಿ ಅವರು ನಾನು ಅಧಿವೇಶನದಲ್ಲಿ ಭಾಗವಹಿಸದಂತೆ ತಡೆದಿದ್ದಾರೆ. ಏನೇ ಆಗಲಿ, ಸಂಸದನಾಗಿ ನಾನು ಈ ವಿಷಯವನ್ನು ಬೆಳಕಿಗೆ ತರುತ್ತೇನೆ’ ಎಂದು ರೇವಂತ ರೆಡ್ಡಿ ಟ್ವೀಟ್ ಮಾಡಿದ್ದಾರೆ.</p>.<p>ಆದರೆ ಆಡಳಿತಾರೂಢ ಟಿಆರ್ಎಸ್ ಈ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದು, ಜಮೀನು ಹರಾಜಿನ ಪ್ರಕ್ರಿಯೆಗಳು ಪಾರದರ್ಶಕವಾಗಿತ್ತು ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ‘ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ, ಕಾಂಗ್ರೆಸ್ ಸಂಸದ ಎ.ರೇವಂತ ರೆಡ್ಡಿ ಸೇರಿದಂತೆ ಪಕ್ಷದ ಹಲವು ನಾಯಕರನ್ನು ವಿವಿಧ ಸ್ಥಳಗಳಲ್ಲಿ ಸೋಮವಾರ ಗೃಹ ಬಂಧನದಲ್ಲಿ ಇರಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಕಳೆದ ವಾರ ತೆಲಂಗಾಣ ಸರ್ಕಾರ ನಡೆಸಿದ ಕೋಕಪೇಟೆ ಜಮೀನುಗಳ ಇ-ಹರಾಜಿನಲ್ಲಿ ₹ 1,000 ಕೋಟಿಯ ಅಕ್ರಮಗಳು ನಡೆದಿವೆ’ ಎಂದು ಮಲ್ಕಾಜ್ಗಿರಿಯ ಲೋಕಸಭಾ ಸದಸ್ಯ ಕಾಂಗ್ರೆಸ್ ನ ರೇವಂತ್ ರೆಡ್ಡಿ ಆರೋಪಿಸಿದ್ದರು.</p>.<p>ಈ ಅಕ್ರಮವನ್ನು ವಿರೋಧಿಸಿ ತೆಲಂಗಾಣದ ಕಾಂಗ್ರೆಸ್ ಘಟಕವು ಕೋಕಪೇಟೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಲು ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ರೇವಂತ ರೆಡ್ಡಿ, ಶಾಸಕ ಸಂಗ ರೆಡ್ಡಿ, ತೆಲಂಗಾಣ ಕಾಂಗ್ರೆಸ್ ಘಟಕದ ಕಾರ್ಯಾಧ್ಯಕ್ಷ ಟಿ. ಜಯಪ್ರಕಾಶ್ ರೆಡ್ಡಿ, ಮಲ್ಲು ಭಟ್ಟಿ, ಮೊಹಮ್ಮದ್ ಆಲಿ ಶಬ್ಬೀರ್ ಸೇರಿದಂತೆ ಹಲವು ಹಿರಿಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.</p>.<p>‘ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಅಧಿವೇಶನ ನಡೆಯುತ್ತಿರುವ ಈ ಸಮಯದಲ್ಲಿ ನನ್ನನ್ನು ಸಂಸತ್ತಿಗೆ ಹೋಗದಂತೆ ತಡೆಯಲಾಗುತ್ತಿದೆ. ನನ್ನ ಸಾಂವಿಧಾನಿಕ ಸವಲತ್ತನ್ನು ಹತ್ತಿಕ್ಕಲಾಗುತ್ತಿದೆ’ ಎಂದು ರೇವಂತ ರೆಡ್ಡಿ ಅವರು ಲೋಕಸಭಾ ಸ್ಪೀಕರ್ಗೆ ಪತ್ರವನ್ನು ಬರೆದಿದ್ಧಾರೆ.</p>.<p>‘ಸಂಸತ್ತಿನ ಅಧಿವೇಶನದಲ್ಲಿ ಪಾಲ್ಗೊಳದಂತೆ ನನ್ನನ್ನು ತಡೆಯಲಾಗುತ್ತಿದೆ. ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮತ್ತು ಮುಖ್ಯ ಕಾರ್ಯದರ್ಶಿ, ಡಿಜಿಪಿ ಅವರ ಆದೇಶದಂತೆ ರಾಜ್ಯ ಪೊಲೀಸರು ಈ ಕ್ರಮಕೈಗೊಂಡಿದ್ಧಾರೆ’ ಎಂದು ಪತ್ರದಲ್ಲಿ ಹೇಳಲಾಗಿದೆ.</p>.<p>‘ಸಂಸತ್ತಿನಲ್ಲಿ ಕೋಕಪೇಟೆ ಜಮೀನು ಅಕ್ರಮದ ಬಗ್ಗೆ ಪ್ರಶ್ನಿಸುತ್ತೇನೆ ಎಂಬ ಹೆದರಿಕೆಯಿಂದ ಮುಖ್ಯಮಂತ್ರಿ ಮತ್ತು ಡಿಜಿಪಿ ಅವರು ನಾನು ಅಧಿವೇಶನದಲ್ಲಿ ಭಾಗವಹಿಸದಂತೆ ತಡೆದಿದ್ದಾರೆ. ಏನೇ ಆಗಲಿ, ಸಂಸದನಾಗಿ ನಾನು ಈ ವಿಷಯವನ್ನು ಬೆಳಕಿಗೆ ತರುತ್ತೇನೆ’ ಎಂದು ರೇವಂತ ರೆಡ್ಡಿ ಟ್ವೀಟ್ ಮಾಡಿದ್ದಾರೆ.</p>.<p>ಆದರೆ ಆಡಳಿತಾರೂಢ ಟಿಆರ್ಎಸ್ ಈ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದು, ಜಮೀನು ಹರಾಜಿನ ಪ್ರಕ್ರಿಯೆಗಳು ಪಾರದರ್ಶಕವಾಗಿತ್ತು ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>