ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ 24 ಗಂಟೆಗಳ ಕಾಲ ಉಚಿತ ವಿದ್ಯುತ್ ನೀಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಎ ರೇವಂತ್ ರೆಡ್ಡಿ ಹೇಳಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ರೈತರಿಗೆ ಉಚಿತ ವಿದ್ಯುತ್ ಒದಗಿಸಲಾಗವುದು ಎಂದು ಭರವಸೆ ನೀಡಿದ್ದಾರೆ.
2004ರಲ್ಲಿ ವೈಎಸ್ ರಾಜಶೇಖರ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರಿಗೆ ಉಚಿತ ವಿದ್ಯುತ್ ನೀಡಿತ್ತು. ಆದರೆ ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಉಚಿತ ವಿದ್ಯುತ್ ಪೂರೈಕೆಯಾಗುವುದಿಲ್ಲ ಎಂಬ ಬಿಆರ್ಎಸ್ ಪಕ್ಷದ ಆರೋಪಕ್ಕೆ ರೇವಂತ್ ರೆಡ್ಡಿ ತಿರುಗೇಟು ಕೊಟ್ಟಿದ್ದಾರೆ.
ವಿದ್ಯಾರ್ಥಿಗಳ ಉನ್ನತ ಮಟ್ಟದ ಶಿಕ್ಷಣಕ್ಕೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದರು