<p><strong>ಹೈದರಾಬಾದ್:</strong> ತೆಲಂಗಾಣದ ಶಾಲೆಗಳಲ್ಲಿ ವಿತರಿಸಲಾಗಿರುವ ಪಠ್ಯಪುಸ್ತಕಗಳಲ್ಲಿ ಹಿಂದಿನ ವರ್ಷದ ಮುನ್ನಡಿಯನ್ನೇ ಬಳಸಲಾಗಿದ್ದು, ಕೆ.ಚಂದ್ರಶೇಖರ್ (ಕೆಸಿಆರ್) ಅವರನ್ನೇ 'ಮುಖ್ಯಮಂತ್ರಿ' ಎಂದು ಉಲ್ಲೇಖಿಸಲಾಗಿದೆ. ಇದರಿಂದ ಸದ್ಯ ಆಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಭಾರಿ ಮುಜುಗರ ಉಂಟಾಗಿದೆ.</p><p>ಬೇಸಿಗೆ ರಜೆಯ ನಂತರ ಜೂನ್ 12ರಂದು ಶಾಲೆಗಳು ಆರಂಭವಾಗಿವೆ. ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ಓದುತ್ತಿರುವ ಮಕ್ಕಳಿಗೆ ವಿತರಿಸಿರುವ ಪುಸ್ತಕಗಳಲ್ಲಿ ಹಳೇ ಮುನ್ನುಡಿಯನ್ನೇ ಬಳಲಾಗಿದೆ.</p><p>ಪಠ್ಯಪುಸ್ತಕಗಳನ್ನು ಹಿಂದಿರುಗಿಸಬೇಕು ಎಂದು ಅಧಿಕಾರಿಗಳು ಆರಂಭದಲ್ಲಿ ಶಾಲೆಗಳಿಗೆ ಸೂಚಿಸಿದ್ದರು. ಇದೀಗ, ಮುನ್ನುಡಿ ಪುಟದ ಪರಿಷ್ಕೃತ ಮಾಹಿತಿಯನ್ನು ಅಂಟಿಸುವಂತೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಕೆಲವು ತಿದ್ದುಪಡಿ ಬಾಕಿ ಇರುವುದರಿಂದಾಗಿ, ಹಳೇ ಮಾಹಿತಿ ಇರುವ ನಿರ್ದಿಷ್ಟ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿಲ್ಲ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.</p><p>'ಈ ಬಗ್ಗೆ ತನಿಖೆ ನಡೆಸಿ, ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು' ಎಂದು ತೆಲಂಗಾಣ ರಾಜ್ಯ ಯುನೈಟೆಡ್ ಟೀಚರ್ಸ್ ಫೆಡರೇಷನ್ ಸರ್ಕಾರವನ್ನು ಒತ್ತಾಯಿಸಿದೆ.</p><p>ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎಸ್ಸಿಇಆರ್ಟಿ) ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿಯೇ ಈ ಲೋಪ ಆಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಚಾವಾ ರವಿ ಆರೋಪಿಸಿದ್ದಾರೆ.</p><p>ಕಳೆದ ವರ್ಷ ಶಾಲಾ ಪಠ್ಯಪುಸ್ತಗಳ ಮುಖಪುಟದಲ್ಲಿ ಸೇರಿಸಲಾಗಿದ್ದ ಸಂವಿಧಾನದ ಮುನ್ನುಡಿಯಲ್ಲಿ 'ಸಮಾಜವಾದ' ಮತ್ತು 'ಜಾತ್ಯತೀತ' ಪದಗಳನ್ನು ಕೈಬಿಡಲಾಗಿತ್ತು ಎಂದೂ ಸ್ಮರಿಸಿದ್ದಾರೆ.</p><p>ಕೆಸಿಆರ್ ಹೆಸರಿರುವುದಕ್ಕೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲು ಉದ್ದೇಶಿಸಿದ್ದ ಪಠ್ಯಪುಸ್ತಕಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ ಎಂದು ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.</p><p>ಕಾಂಗ್ರೆಸ್ ನಾಯಕ ರೇವಂತ ರೆಡ್ಡಿ ಅವರು ಸದ್ಯ ತೆಲಂಗಾಣದ ಮುಖ್ಯಮಂತ್ರಿಯಾಗಿದ್ದಾರೆ.</p><p>119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ 2023ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 64 ಸ್ಥಾನಗಳನ್ನು ಗೆಲ್ಲುವ ಮೂಲಕ ಸರಳ ಬಹುಮತ ಸಾಧಿಸಿದೆ. ಕೆಸಿಆರ್ ನೇತೃತ್ವದ ಬಿಆರ್ಎಸ್ 39 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ.</p><p>2014ರ ಜೂನ್ 2ರಂದು ರಚನೆಯಾದ ತೆಲಂಗಾಣ ವಿಧಾನಸಭೆಯ ಮೊದಲ ಎರಡೂ ಅವಧಿಗೆ ಕೆಸಿಆರ್ ಮುಖ್ಯಮಂತ್ರಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ತೆಲಂಗಾಣದ ಶಾಲೆಗಳಲ್ಲಿ ವಿತರಿಸಲಾಗಿರುವ ಪಠ್ಯಪುಸ್ತಕಗಳಲ್ಲಿ ಹಿಂದಿನ ವರ್ಷದ ಮುನ್ನಡಿಯನ್ನೇ ಬಳಸಲಾಗಿದ್ದು, ಕೆ.ಚಂದ್ರಶೇಖರ್ (ಕೆಸಿಆರ್) ಅವರನ್ನೇ 'ಮುಖ್ಯಮಂತ್ರಿ' ಎಂದು ಉಲ್ಲೇಖಿಸಲಾಗಿದೆ. ಇದರಿಂದ ಸದ್ಯ ಆಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಭಾರಿ ಮುಜುಗರ ಉಂಟಾಗಿದೆ.</p><p>ಬೇಸಿಗೆ ರಜೆಯ ನಂತರ ಜೂನ್ 12ರಂದು ಶಾಲೆಗಳು ಆರಂಭವಾಗಿವೆ. ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ಓದುತ್ತಿರುವ ಮಕ್ಕಳಿಗೆ ವಿತರಿಸಿರುವ ಪುಸ್ತಕಗಳಲ್ಲಿ ಹಳೇ ಮುನ್ನುಡಿಯನ್ನೇ ಬಳಲಾಗಿದೆ.</p><p>ಪಠ್ಯಪುಸ್ತಕಗಳನ್ನು ಹಿಂದಿರುಗಿಸಬೇಕು ಎಂದು ಅಧಿಕಾರಿಗಳು ಆರಂಭದಲ್ಲಿ ಶಾಲೆಗಳಿಗೆ ಸೂಚಿಸಿದ್ದರು. ಇದೀಗ, ಮುನ್ನುಡಿ ಪುಟದ ಪರಿಷ್ಕೃತ ಮಾಹಿತಿಯನ್ನು ಅಂಟಿಸುವಂತೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಕೆಲವು ತಿದ್ದುಪಡಿ ಬಾಕಿ ಇರುವುದರಿಂದಾಗಿ, ಹಳೇ ಮಾಹಿತಿ ಇರುವ ನಿರ್ದಿಷ್ಟ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿಲ್ಲ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.</p><p>'ಈ ಬಗ್ಗೆ ತನಿಖೆ ನಡೆಸಿ, ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು' ಎಂದು ತೆಲಂಗಾಣ ರಾಜ್ಯ ಯುನೈಟೆಡ್ ಟೀಚರ್ಸ್ ಫೆಡರೇಷನ್ ಸರ್ಕಾರವನ್ನು ಒತ್ತಾಯಿಸಿದೆ.</p><p>ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎಸ್ಸಿಇಆರ್ಟಿ) ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿಯೇ ಈ ಲೋಪ ಆಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಚಾವಾ ರವಿ ಆರೋಪಿಸಿದ್ದಾರೆ.</p><p>ಕಳೆದ ವರ್ಷ ಶಾಲಾ ಪಠ್ಯಪುಸ್ತಗಳ ಮುಖಪುಟದಲ್ಲಿ ಸೇರಿಸಲಾಗಿದ್ದ ಸಂವಿಧಾನದ ಮುನ್ನುಡಿಯಲ್ಲಿ 'ಸಮಾಜವಾದ' ಮತ್ತು 'ಜಾತ್ಯತೀತ' ಪದಗಳನ್ನು ಕೈಬಿಡಲಾಗಿತ್ತು ಎಂದೂ ಸ್ಮರಿಸಿದ್ದಾರೆ.</p><p>ಕೆಸಿಆರ್ ಹೆಸರಿರುವುದಕ್ಕೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲು ಉದ್ದೇಶಿಸಿದ್ದ ಪಠ್ಯಪುಸ್ತಕಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ ಎಂದು ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.</p><p>ಕಾಂಗ್ರೆಸ್ ನಾಯಕ ರೇವಂತ ರೆಡ್ಡಿ ಅವರು ಸದ್ಯ ತೆಲಂಗಾಣದ ಮುಖ್ಯಮಂತ್ರಿಯಾಗಿದ್ದಾರೆ.</p><p>119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ 2023ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 64 ಸ್ಥಾನಗಳನ್ನು ಗೆಲ್ಲುವ ಮೂಲಕ ಸರಳ ಬಹುಮತ ಸಾಧಿಸಿದೆ. ಕೆಸಿಆರ್ ನೇತೃತ್ವದ ಬಿಆರ್ಎಸ್ 39 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ.</p><p>2014ರ ಜೂನ್ 2ರಂದು ರಚನೆಯಾದ ತೆಲಂಗಾಣ ವಿಧಾನಸಭೆಯ ಮೊದಲ ಎರಡೂ ಅವಧಿಗೆ ಕೆಸಿಆರ್ ಮುಖ್ಯಮಂತ್ರಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>