<p><strong>ಹೈದರಾಬಾದ್:</strong> 2013ರಲ್ಲಿ ನಡೆದಿದ್ದ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದ ಐವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ ಎತ್ತಿ ಹಿಡಿದಿದೆ.</p>.<p>ಎನ್ಐಎ (ವಿಚಾರಣಾ) ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ನಿಷೇಧಿತ ಉಗ್ರ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ನ(ಐಎಂ) ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿಗಳಾದ ಕೆ.ಲಕ್ಷ್ಮಣ್, ಪಿ.ಶ್ರೀ ಸುಧಾ ಅವರನ್ನು ಒಳಗೊಂಡ ಪೀಠ ಈ ಅರ್ಜಿಯನ್ನು ತಿರಸ್ಕರಿಸಿದೆ. </p>.<p>ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಅಪರಾಧಿಗಳ ಪರ ವಕೀಲರು ತಿಳಿಸಿದ್ದಾರೆ. </p>.<p>2013ರ ಫೆ.21ರಂದು ಹೈದರಾಬಾದ್ನ ದಿಲ್ಸುಖ್ನಗರದಲ್ಲಿ ಎರಡು ಬಾಂಬ್ ಸ್ಫೋಟಿಸಲಾಗಿತ್ತು. ಘಟನೆಯಲ್ಲಿ 18 ಮಂದಿ ಮೃತಪಟ್ಟು, 131 ಮಂದಿ ಗಾಯಗೊಂಡಿದ್ದರು. ಆರಂಭದಲ್ಲಿ ನಗರ ಪೊಲೀಸರ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಎನ್ಐಎ ವಹಿಸಿಕೊಂಡಿತ್ತು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಬಂಧಿಸಿದ್ದ ಎನ್ಐಎ, ಅಪರಾಧಿಗಳ ವಿರುದ್ಧ 4000 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿತ್ತು. </p> <p>2016ರ ಡಿಸೆಂಬರ್ 13ರಂದು ಎನ್ಐಎ ನ್ಯಾಯಾಲಯವು ಐಎಂ ಸಹ ಸಂಸ್ಥಾಪಕ ಮೊಹಮ್ಮದ್ ಸಿದ್ದಿಬಾಪಾ ಅಲಿಯಾಸ್ ಯಾಸಿನ್ ಭಟ್ಕಳ್, ಪಾಕಿಸ್ತಾನ ಪ್ರಜೆ ಜಿಯಾ-ಉರ್-ರಹಮಾನ್ ಅಲಿಯಾಸ್ ವಕಾಸ್, ಅಸಾದುಲ್ಲಾ ಅಖ್ತರ್, ತಹಸೀನ್ ಅಖ್ತರ್ ಅಲಿಯಾಸ್ ಮೋನು ಮತ್ತು ಅಜಾ ಸೇರಿದಂತೆ ಐವರನ್ನು ದೋಷಿಗಳೆಂದು ಘೋಷಿಸಿತ್ತು.</p>.<p> 2016ರ ಡಿ.13ರಂದು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು.</p> .ಹೈದರಾಬಾದ್ ಅವಳಿ ಬಾಂಬ್ ಸ್ಫೋಟ ಪ್ರಕರಣ: ಇಬ್ಬರಿಗೆ ಗಲ್ಲು, ಒಬ್ಬನಿಗೆ ಜೀವಾವಧಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> 2013ರಲ್ಲಿ ನಡೆದಿದ್ದ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದ ಐವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ ಎತ್ತಿ ಹಿಡಿದಿದೆ.</p>.<p>ಎನ್ಐಎ (ವಿಚಾರಣಾ) ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ನಿಷೇಧಿತ ಉಗ್ರ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ನ(ಐಎಂ) ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿಗಳಾದ ಕೆ.ಲಕ್ಷ್ಮಣ್, ಪಿ.ಶ್ರೀ ಸುಧಾ ಅವರನ್ನು ಒಳಗೊಂಡ ಪೀಠ ಈ ಅರ್ಜಿಯನ್ನು ತಿರಸ್ಕರಿಸಿದೆ. </p>.<p>ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಅಪರಾಧಿಗಳ ಪರ ವಕೀಲರು ತಿಳಿಸಿದ್ದಾರೆ. </p>.<p>2013ರ ಫೆ.21ರಂದು ಹೈದರಾಬಾದ್ನ ದಿಲ್ಸುಖ್ನಗರದಲ್ಲಿ ಎರಡು ಬಾಂಬ್ ಸ್ಫೋಟಿಸಲಾಗಿತ್ತು. ಘಟನೆಯಲ್ಲಿ 18 ಮಂದಿ ಮೃತಪಟ್ಟು, 131 ಮಂದಿ ಗಾಯಗೊಂಡಿದ್ದರು. ಆರಂಭದಲ್ಲಿ ನಗರ ಪೊಲೀಸರ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಎನ್ಐಎ ವಹಿಸಿಕೊಂಡಿತ್ತು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಬಂಧಿಸಿದ್ದ ಎನ್ಐಎ, ಅಪರಾಧಿಗಳ ವಿರುದ್ಧ 4000 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿತ್ತು. </p> <p>2016ರ ಡಿಸೆಂಬರ್ 13ರಂದು ಎನ್ಐಎ ನ್ಯಾಯಾಲಯವು ಐಎಂ ಸಹ ಸಂಸ್ಥಾಪಕ ಮೊಹಮ್ಮದ್ ಸಿದ್ದಿಬಾಪಾ ಅಲಿಯಾಸ್ ಯಾಸಿನ್ ಭಟ್ಕಳ್, ಪಾಕಿಸ್ತಾನ ಪ್ರಜೆ ಜಿಯಾ-ಉರ್-ರಹಮಾನ್ ಅಲಿಯಾಸ್ ವಕಾಸ್, ಅಸಾದುಲ್ಲಾ ಅಖ್ತರ್, ತಹಸೀನ್ ಅಖ್ತರ್ ಅಲಿಯಾಸ್ ಮೋನು ಮತ್ತು ಅಜಾ ಸೇರಿದಂತೆ ಐವರನ್ನು ದೋಷಿಗಳೆಂದು ಘೋಷಿಸಿತ್ತು.</p>.<p> 2016ರ ಡಿ.13ರಂದು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು.</p> .ಹೈದರಾಬಾದ್ ಅವಳಿ ಬಾಂಬ್ ಸ್ಫೋಟ ಪ್ರಕರಣ: ಇಬ್ಬರಿಗೆ ಗಲ್ಲು, ಒಬ್ಬನಿಗೆ ಜೀವಾವಧಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>