<p><strong>ಹೈದರಾಬಾದ್:</strong> ಭಾರಿ ಮಳೆಯಿಂದಾಗಿ ತೆಲಂಗಾಣದ ವಿವಿಧ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರದಟ್ಟಣೆ ಎದುರಾಗಿದೆ. </p>.<p>ಶುಕ್ರವಾರ ಬೆಳಿಗ್ಗೆ 8.30 ರಿಂದ 11 ಗಂಟೆಯವರೆಗೆ ನಾರಯಣಪೇಟೆ ಜಿಲ್ಲೆಯ ನರ್ವಾದಲ್ಲಿ 44.3 ಮಿ.ಮೀ.ಯಷ್ಟು ಮಳೆಯಾಗಿದೆ ಮತ್ತು ವಿಕಾರಾಬಾದ್ ಜಿಲ್ಲೆಯ ಮುಜಾಹಿದ್ಪುರದಲ್ಲಿ 40 ಮಿ.ಮೀ ಮಳೆಯಾಗಿದೆ ಎಂದು ‘ತೆಲಂಗಾಣ ಡೆವಲಪ್ಮೆಂಟ್ ಪ್ಲಾನಿಂಗ್ ಸೊಸೈಟಿ’ ತಿಳಿಸಿದೆ.</p>.<p>ಹೈದರಾಬಾದ್ನ ದಬೀರ್ಪುರದಲ್ಲಿ 28.5 ಮಿ.ಮೀ ಮಳೆಯಾಗಿದೆ. ಹಲವು ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದ ಉದ್ಯೋಗಿಗಳು ಕಚೇರಿಗೆ ತೆರಳಲು ಕಷ್ಟಪಡುವಂತಾಗಿದೆ.</p>.<p class="title">ಮಳೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ನಿರ್ದೇಶನ ನೀಡಿದ್ದಾರೆ. ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ‘ವರ್ಕ್ ಫ್ರಮ್ ಹೋಂ’ ಆಯ್ಕೆ ನೀಡುವಂತೆ ಐಟಿ ಸಂಸ್ಥೆಗಳಿಗೆ ಸೈಬರಾಬಾದ್ ಪೊಲೀಸರು ಸಲಹೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಭಾರಿ ಮಳೆಯಿಂದಾಗಿ ತೆಲಂಗಾಣದ ವಿವಿಧ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರದಟ್ಟಣೆ ಎದುರಾಗಿದೆ. </p>.<p>ಶುಕ್ರವಾರ ಬೆಳಿಗ್ಗೆ 8.30 ರಿಂದ 11 ಗಂಟೆಯವರೆಗೆ ನಾರಯಣಪೇಟೆ ಜಿಲ್ಲೆಯ ನರ್ವಾದಲ್ಲಿ 44.3 ಮಿ.ಮೀ.ಯಷ್ಟು ಮಳೆಯಾಗಿದೆ ಮತ್ತು ವಿಕಾರಾಬಾದ್ ಜಿಲ್ಲೆಯ ಮುಜಾಹಿದ್ಪುರದಲ್ಲಿ 40 ಮಿ.ಮೀ ಮಳೆಯಾಗಿದೆ ಎಂದು ‘ತೆಲಂಗಾಣ ಡೆವಲಪ್ಮೆಂಟ್ ಪ್ಲಾನಿಂಗ್ ಸೊಸೈಟಿ’ ತಿಳಿಸಿದೆ.</p>.<p>ಹೈದರಾಬಾದ್ನ ದಬೀರ್ಪುರದಲ್ಲಿ 28.5 ಮಿ.ಮೀ ಮಳೆಯಾಗಿದೆ. ಹಲವು ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದ ಉದ್ಯೋಗಿಗಳು ಕಚೇರಿಗೆ ತೆರಳಲು ಕಷ್ಟಪಡುವಂತಾಗಿದೆ.</p>.<p class="title">ಮಳೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ನಿರ್ದೇಶನ ನೀಡಿದ್ದಾರೆ. ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ‘ವರ್ಕ್ ಫ್ರಮ್ ಹೋಂ’ ಆಯ್ಕೆ ನೀಡುವಂತೆ ಐಟಿ ಸಂಸ್ಥೆಗಳಿಗೆ ಸೈಬರಾಬಾದ್ ಪೊಲೀಸರು ಸಲಹೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>