<p><strong>ಹೈದರಾಬಾದ್:</strong> ತೆಲಂಗಾಣ ಮೂಲದ ಪ್ರಮುಖ ಮಾವೋವಾದಿ ಕಮಾಂಡರ್ ತಿಪ್ಪಿರಿ ತಿರುಪತಿ ಅಲಿಯಾಸ್ ದೇವಾಜಿ ಭಾನುವಾರ ಪೊಲೀಸರಿಗೆ ಶರಣಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p><p>ಆದಾಗ್ಯೂ ತೆಲಂಗಾಣ ಪೊಲೀಸರು ಅಧಿಕೃತವಾಗಿ ಇನ್ನು ದೃಢಪಡಿಸಿಲ್ಲ.</p><p>ದೇವಾಜಿ ಜೊತೆಗೆ ಮತ್ತೊಬ್ಬ ನಾಯಕ ಮಲ್ಲಾ ರಾಜಿ ರೆಡ್ಡಿ ಕೂಡ ತನ್ನ ಸಹಚರರ ಜೊತೆ ಶರಣಾಗಿದ್ದಾರೆ. ಎಷ್ಟು ಜನರು ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ.</p>.ಮಹಾರಾಷ್ಟ್ರ: ಇಬ್ಬರು ನಕ್ಸಲರ ಹತ್ಯೆ, ಭದ್ರತಾ ಸಿಬ್ಬಂದಿ ಹುತಾತ್ಮ.ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ 7ಕ್ಕೆ ಇಳಿಕೆ .<p>ಸ್ಥಳೀಯ ಮಾಧ್ಯಮಗಳ ಪ್ರಕಾರ ಇಬ್ಬರು ನಾಯಕರು ಸೇರಿ 27ಕ್ಕೂ ಹೆಚ್ಚು ಮಾವೋವಾದಿಗಳು ಶರಣಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.</p><p>ದೇವಾಜಿ ತೆಲಂಗಾಣದ ಜಗ್ತಿಯಾಲ ಜಿಲ್ಲೆಯವರು. ಆಂಧ್ರ ಮತ್ತು ತೆಲಂಗಾಣ ಭಾಗದಲ್ಲಿ ಸಕ್ರಿಯವಾಗಿದ್ದ ನಿಷೇಧಿತ ಸಿಪಿಐ(ಎಂ) ಸಂಘಟನೆಯ ಮುಖ್ಯಸ್ಥರಾಗಿದ್ದರು. ಕೇಂದ್ರ ಸಮಿತಿ ಹಾಗೂ ಪಾಲಿಟ್ಬ್ಯೂರ್ದ ಸದಸ್ಯರಾಗಿದ್ದರು.</p><p>ದೇಶವ್ಯಾಪ್ತಿಯಲ್ಲಿ ಸಕ್ರಿಯವಾಗಿದ್ದ ಪೀಪಲ್ಸ್ ಲಿಬರೇಷನ್ ಗೆರಿಲ್ಲಾ ಆರ್ಮಿ (ಪಿಎಲ್ಜಿಎ) ರಚನೆಗೆ ದೇವಾಜಿ ಕಾರಣರಾಗಿದ್ದರು. ಪೊಲೀಸರು ಇವರ ತಲೆಗೆ ₹1 ಕೋಟಿ ಬಹುಮಾನ ಘೋಷಿಸಿದ್ದರು.</p><p>ಇತ್ತೀಚಿನ ದಿನಗಳಲ್ಲಿ ನಕ್ಸಲ್ ಚಳವಳಿ ತ್ಯಜಿಸಿ ಹಲವರು ಶರಣಾಗುತ್ತಿದ್ದಾರೆ. ಅಲ್ಲದೆ ಸಂಘಟನೆಗೆ ಯುವಕರು ಸೇರುತ್ತಿಲ್ಲವಾದ್ದರಿಂದ ಸಂಘಟನೆಯ ಶಕ್ತಿ ಕುಸಿದಿದೆ. ಈ ಹಿನ್ನೆಲೆಯಲ್ಲಿ ನಾಯಕರು ಸೇರಿದಂತೆ ಕಾರ್ಯಕರ್ತರು ಶರಣಾಗುತ್ತಿದ್ದಾರೆ ಎಂದು ತೆಲಂಗಾಣ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ತೆಲಂಗಾಣ ಮೂಲದ ಪ್ರಮುಖ ಮಾವೋವಾದಿ ಕಮಾಂಡರ್ ತಿಪ್ಪಿರಿ ತಿರುಪತಿ ಅಲಿಯಾಸ್ ದೇವಾಜಿ ಭಾನುವಾರ ಪೊಲೀಸರಿಗೆ ಶರಣಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p><p>ಆದಾಗ್ಯೂ ತೆಲಂಗಾಣ ಪೊಲೀಸರು ಅಧಿಕೃತವಾಗಿ ಇನ್ನು ದೃಢಪಡಿಸಿಲ್ಲ.</p><p>ದೇವಾಜಿ ಜೊತೆಗೆ ಮತ್ತೊಬ್ಬ ನಾಯಕ ಮಲ್ಲಾ ರಾಜಿ ರೆಡ್ಡಿ ಕೂಡ ತನ್ನ ಸಹಚರರ ಜೊತೆ ಶರಣಾಗಿದ್ದಾರೆ. ಎಷ್ಟು ಜನರು ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ.</p>.ಮಹಾರಾಷ್ಟ್ರ: ಇಬ್ಬರು ನಕ್ಸಲರ ಹತ್ಯೆ, ಭದ್ರತಾ ಸಿಬ್ಬಂದಿ ಹುತಾತ್ಮ.ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ 7ಕ್ಕೆ ಇಳಿಕೆ .<p>ಸ್ಥಳೀಯ ಮಾಧ್ಯಮಗಳ ಪ್ರಕಾರ ಇಬ್ಬರು ನಾಯಕರು ಸೇರಿ 27ಕ್ಕೂ ಹೆಚ್ಚು ಮಾವೋವಾದಿಗಳು ಶರಣಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.</p><p>ದೇವಾಜಿ ತೆಲಂಗಾಣದ ಜಗ್ತಿಯಾಲ ಜಿಲ್ಲೆಯವರು. ಆಂಧ್ರ ಮತ್ತು ತೆಲಂಗಾಣ ಭಾಗದಲ್ಲಿ ಸಕ್ರಿಯವಾಗಿದ್ದ ನಿಷೇಧಿತ ಸಿಪಿಐ(ಎಂ) ಸಂಘಟನೆಯ ಮುಖ್ಯಸ್ಥರಾಗಿದ್ದರು. ಕೇಂದ್ರ ಸಮಿತಿ ಹಾಗೂ ಪಾಲಿಟ್ಬ್ಯೂರ್ದ ಸದಸ್ಯರಾಗಿದ್ದರು.</p><p>ದೇಶವ್ಯಾಪ್ತಿಯಲ್ಲಿ ಸಕ್ರಿಯವಾಗಿದ್ದ ಪೀಪಲ್ಸ್ ಲಿಬರೇಷನ್ ಗೆರಿಲ್ಲಾ ಆರ್ಮಿ (ಪಿಎಲ್ಜಿಎ) ರಚನೆಗೆ ದೇವಾಜಿ ಕಾರಣರಾಗಿದ್ದರು. ಪೊಲೀಸರು ಇವರ ತಲೆಗೆ ₹1 ಕೋಟಿ ಬಹುಮಾನ ಘೋಷಿಸಿದ್ದರು.</p><p>ಇತ್ತೀಚಿನ ದಿನಗಳಲ್ಲಿ ನಕ್ಸಲ್ ಚಳವಳಿ ತ್ಯಜಿಸಿ ಹಲವರು ಶರಣಾಗುತ್ತಿದ್ದಾರೆ. ಅಲ್ಲದೆ ಸಂಘಟನೆಗೆ ಯುವಕರು ಸೇರುತ್ತಿಲ್ಲವಾದ್ದರಿಂದ ಸಂಘಟನೆಯ ಶಕ್ತಿ ಕುಸಿದಿದೆ. ಈ ಹಿನ್ನೆಲೆಯಲ್ಲಿ ನಾಯಕರು ಸೇರಿದಂತೆ ಕಾರ್ಯಕರ್ತರು ಶರಣಾಗುತ್ತಿದ್ದಾರೆ ಎಂದು ತೆಲಂಗಾಣ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>