<p><strong>ಹೈದರಾಬಾದ್</strong>: ‘ಛತ್ತೀಸಗಢದಲ್ಲಿ ಮಾವೋವಾದಿ ನಕ್ಸಲರ ವಿರುದ್ಧ ಪೊಲೀಸ್ ಕಾರ್ಯಾಚರಣೆ ತೀವ್ರಗೊಂಡಿರುವ ಬೆನ್ನಲ್ಲೇ, ಸಂಘಟನೆಯ ಕೆಲವು ಮುಖಂಡರು ಶಸ್ತ್ರಾಸ್ತ್ರ ತ್ಯಜಿಸಲು ಒಲವು ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಮುಂದುವರಿಸಲು ಆಸಕ್ತಿ ಹೊಂದಿದ್ದಾರೆ’ ಎಂದು ತೆಲಂಗಾಣದ ಗುಪ್ತಚರ ಮೂಲಗಳು ತಿಳಿಸಿವೆ.</p>.<p>ತೆಲಂಗಾಣದ ಸಿಪಿಐ (ಮಾವೋವಾದಿ) ಮುಖಂಡ ಮಲ್ಲೊಜುಲಾ ವೇಣುಗೋಪಾಲ್ ಅವರು ತಾತ್ಕಾಲಿಕವಾಗಿ ಶಸ್ತ್ರಾಸ್ತ್ರ ತ್ಯಜಿಸುವ ನಿರ್ಧಾರವನ್ನು ಬೆಂಬಲಿಸಿದ್ದಾರೆ. ಈ ಸಂಬಂಧ ಕಳೆದು ತಿಂಗಳು ಅವರೇ ಬಿಡುಗಡೆಗೊಳಿಸಿದ ಪತ್ರವು ಸಂಘಟನೆಯಲ್ಲಿ ಆಂತರಿಕ ಸಂಘರ್ಷ ಸೃಷ್ಟಿಸಿದೆ.</p>.<p>ಈ ವಾದವನ್ನು ತಳ್ಳಿ ಹಾಕಿರುವ ಸಿಪಿಐ (ಮಾವೋವಾದಿ) ಕೇಂದ್ರೀಯ ಸಮಿತಿಯು, ಪತ್ರದಲ್ಲಿ ಅವರು ವ್ಯಕ್ತಪಡಿಸಿರುವ ಅಭಿಪ್ರಾಯವು ವೈಯಕ್ತಿಕವಾದದ್ದು ಎಂದು ತಿಳಿಸಿತ್ತು.</p>.<p class="title">ಸಿಪಿಐ (ಮಾವೋವಾದಿ)ಯ ಕೇಂದ್ರಿಯ ಸಮಿತಿಯ 15 ಮಂದಿ ಸದಸ್ಯರಲ್ಲಿ 10 ಮಂದಿ ತೆಲಂಗಾಣ ಮೂಲದವರು ಎಂದು ಇತ್ತೀಚಿಗೆ ಪೊಲೀಸರು ಬಿಡುಗಡೆಗೊಳಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ‘ಛತ್ತೀಸಗಢದಲ್ಲಿ ಮಾವೋವಾದಿ ನಕ್ಸಲರ ವಿರುದ್ಧ ಪೊಲೀಸ್ ಕಾರ್ಯಾಚರಣೆ ತೀವ್ರಗೊಂಡಿರುವ ಬೆನ್ನಲ್ಲೇ, ಸಂಘಟನೆಯ ಕೆಲವು ಮುಖಂಡರು ಶಸ್ತ್ರಾಸ್ತ್ರ ತ್ಯಜಿಸಲು ಒಲವು ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಮುಂದುವರಿಸಲು ಆಸಕ್ತಿ ಹೊಂದಿದ್ದಾರೆ’ ಎಂದು ತೆಲಂಗಾಣದ ಗುಪ್ತಚರ ಮೂಲಗಳು ತಿಳಿಸಿವೆ.</p>.<p>ತೆಲಂಗಾಣದ ಸಿಪಿಐ (ಮಾವೋವಾದಿ) ಮುಖಂಡ ಮಲ್ಲೊಜುಲಾ ವೇಣುಗೋಪಾಲ್ ಅವರು ತಾತ್ಕಾಲಿಕವಾಗಿ ಶಸ್ತ್ರಾಸ್ತ್ರ ತ್ಯಜಿಸುವ ನಿರ್ಧಾರವನ್ನು ಬೆಂಬಲಿಸಿದ್ದಾರೆ. ಈ ಸಂಬಂಧ ಕಳೆದು ತಿಂಗಳು ಅವರೇ ಬಿಡುಗಡೆಗೊಳಿಸಿದ ಪತ್ರವು ಸಂಘಟನೆಯಲ್ಲಿ ಆಂತರಿಕ ಸಂಘರ್ಷ ಸೃಷ್ಟಿಸಿದೆ.</p>.<p>ಈ ವಾದವನ್ನು ತಳ್ಳಿ ಹಾಕಿರುವ ಸಿಪಿಐ (ಮಾವೋವಾದಿ) ಕೇಂದ್ರೀಯ ಸಮಿತಿಯು, ಪತ್ರದಲ್ಲಿ ಅವರು ವ್ಯಕ್ತಪಡಿಸಿರುವ ಅಭಿಪ್ರಾಯವು ವೈಯಕ್ತಿಕವಾದದ್ದು ಎಂದು ತಿಳಿಸಿತ್ತು.</p>.<p class="title">ಸಿಪಿಐ (ಮಾವೋವಾದಿ)ಯ ಕೇಂದ್ರಿಯ ಸಮಿತಿಯ 15 ಮಂದಿ ಸದಸ್ಯರಲ್ಲಿ 10 ಮಂದಿ ತೆಲಂಗಾಣ ಮೂಲದವರು ಎಂದು ಇತ್ತೀಚಿಗೆ ಪೊಲೀಸರು ಬಿಡುಗಡೆಗೊಳಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>