<p><strong>ಹೈದರಾಬಾದ್:</strong> ಕೇವಲ ₹22 ಸಾಲ ಹಿಂದಿರುಗಿಸಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಮೇಡಕ್ನಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.</p>.<p>ದಿನಗೂಲಿ ಕೆಲಸಕ್ಕಾಗಿ ಮೊಹಮ್ಮದ್ ಸಿರಾಜ್ ಮತ್ತು ಮಹೇಶ್ ಉತ್ತರ ಪ್ರದೇಶದಿಂದ ಮೇಡಕ್ಗೆ ವಲಸೆ ಬಂದಿದ್ದರು. ಇಬ್ಬರು ರವಿ ಕುಮಾರ್ ಎಂಬ ವ್ಯಕ್ತಿಯೊಂದಿಗೆ ಒಂದೇ ಮನೆಯಲ್ಲಿ ವಾಸವಿದ್ದರು. ಸಿರಾಜ್, ಮಹೇಶ್ ಮದ್ಯ ವ್ಯಸನಿಗಳಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮಕರ ಸಂಕ್ರಾತಿಯಂದು ಮರದ ಕೆಳಗೆ ಕುಳಿತು ಮದ್ಯ ಸೇವಿಸುವಾಗ ಮಹೇಶ್ ತನ್ನ ₹22 ಹಣವನ್ನು ಹಿಂದಿರುಗಿಸುವಂತೆ ಸಿರಾಜ್ಗೆ ಒತ್ತಾಯ ಮಾಡಿದ್ದಾನೆ. ಬಳಿಕ, ಅದು ವಿವಾದಕ್ಕೆ ಕಾರಣವಾಗಿದೆ. ಕುಡಿದ ಮತ್ತಿನಲ್ಲಿದ್ದ ಮಹೇಶ್, ಸಿರಾಜ್ನ ತಲೆಯನ್ನು ಮರಕ್ಕೆ ಬಡಿದು, ಹತ್ತರವಿದ್ದ ಕಲ್ಲಿನಿಂದ ಮಹೇಶ್ ತಲೆಗೆ ಹೊಡೆದು ಹತ್ಯೆ ಮಾಡಿ ಅಲ್ಲಿಂದ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಕೇವಲ ₹22 ಸಾಲ ಹಿಂದಿರುಗಿಸಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಮೇಡಕ್ನಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.</p>.<p>ದಿನಗೂಲಿ ಕೆಲಸಕ್ಕಾಗಿ ಮೊಹಮ್ಮದ್ ಸಿರಾಜ್ ಮತ್ತು ಮಹೇಶ್ ಉತ್ತರ ಪ್ರದೇಶದಿಂದ ಮೇಡಕ್ಗೆ ವಲಸೆ ಬಂದಿದ್ದರು. ಇಬ್ಬರು ರವಿ ಕುಮಾರ್ ಎಂಬ ವ್ಯಕ್ತಿಯೊಂದಿಗೆ ಒಂದೇ ಮನೆಯಲ್ಲಿ ವಾಸವಿದ್ದರು. ಸಿರಾಜ್, ಮಹೇಶ್ ಮದ್ಯ ವ್ಯಸನಿಗಳಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮಕರ ಸಂಕ್ರಾತಿಯಂದು ಮರದ ಕೆಳಗೆ ಕುಳಿತು ಮದ್ಯ ಸೇವಿಸುವಾಗ ಮಹೇಶ್ ತನ್ನ ₹22 ಹಣವನ್ನು ಹಿಂದಿರುಗಿಸುವಂತೆ ಸಿರಾಜ್ಗೆ ಒತ್ತಾಯ ಮಾಡಿದ್ದಾನೆ. ಬಳಿಕ, ಅದು ವಿವಾದಕ್ಕೆ ಕಾರಣವಾಗಿದೆ. ಕುಡಿದ ಮತ್ತಿನಲ್ಲಿದ್ದ ಮಹೇಶ್, ಸಿರಾಜ್ನ ತಲೆಯನ್ನು ಮರಕ್ಕೆ ಬಡಿದು, ಹತ್ತರವಿದ್ದ ಕಲ್ಲಿನಿಂದ ಮಹೇಶ್ ತಲೆಗೆ ಹೊಡೆದು ಹತ್ಯೆ ಮಾಡಿ ಅಲ್ಲಿಂದ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>