<p><strong>ಸಂಗಾರೆಡ್ಡಿ (ತೆಲಂಗಾಣ):</strong> ಇಲ್ಲಿನ ಸಂಗಾರೆಡ್ಡಿ ಜಿಲ್ಲೆಯ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.</p>.<p>ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್ನಲ್ಲಿ ಸೋಮವಾರ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡಿತ್ತು. ಸ್ಫೋಟದಿಂದ ಕುಸಿದ ಕಟ್ಟಡದ ಅವಶೇಷಗಳಡಿ ಮಂಗಳವಾರ ಇನ್ನಷ್ಟು ಮೃತದೇಹಗಳು ಪತ್ತೆಯಾಗಿವೆ.</p>.<p>‘ಅವಶೇಷಗಳ ತೆರವು ಕಾರ್ಯಾಚರಣೆ ವೇಳೆ ಮತ್ತಷ್ಟು ಮೃತದೇಹಗಳು ದೊರೆತಿವೆ. ಒಟ್ಟು 33 ಶವಗಳನ್ನು ಹೊರತೆಗೆಯಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ’ ಎಂದು ಸಂಗಾರೆಡ್ಡಿ ಎಸ್ಪಿ ಪಾರಿತೋಷ್ ಪಂಕಜ್ ಮಂಗಳವಾರ ತಿಳಿಸಿದ್ದಾರೆ.</p>.<p>ದುರಂತದ ಸಮಯದಲ್ಲಿ ಅಂದಾಜು 143 ಮಂದಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರಲ್ಲಿ 57 ಮಂದಿ ಸುರಕ್ಷಿತರಾಗಿದ್ದಾರೆ. 34 ಗಾಯಾಳುಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಕೆಲವರು ನಾಪತ್ತೆಯಾಗಿದ್ದು, ಅವಶೇಷಗಳಡಿ ಶೋಧ ಕಾರ್ಯ ಮುಂದುವರಿದಿದೆ.</p>.<p><strong>ಮುಖ್ಯಮಂತ್ರಿ ಭೇಟಿ:</strong> ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಕೆಲ ಸಚಿವರ ಜತೆ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದರು. ಘಟನೆ ಬಗ್ಗೆ ಸಮಗ್ರ ವರದಿ ನೀಡುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.</p>.<p>ದೊಡ್ಡ ದುರಂತ ನಡೆದರೂ ಕಂಪನಿಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದ್ದಕ್ಕೆ ಮುಖ್ಯಮಂತ್ರಿ ಅವರು ಕಂಪನಿಯ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡರು.</p>.<p>‘ಇದುವರೆಗೆ 9 ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ. ಡಿಎನ್ಎ ಪರೀಕ್ಷೆ ಬಳಿಕ ಇತರ ಮೃತದೇಹಗಳ ಗುರುತು ಪತ್ತೆ ಮಾಡಲಾಗುವುದು’ ಎಂದು ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರಲ್ಲಿ ಹೆಚ್ಚಿನವರು ಒಡಿಶಾ, ಪಶ್ಚಿಮ ಬಂಗಾಳ ಮತ್ತು ಬಿಹಾರ ರಾಜ್ಯಗಳಿಗೆ ಸೇರಿದವರಾಗಿದ್ದಾರೆ.</p>.<p>ಕಾರ್ಖಾನೆಯ ರಿಯಾಕ್ಟರ್ನಲ್ಲಿ ಸೋಮವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದ ಬಳಿಕ ಬೆಂಕಿ ಹೊತ್ತಿಕೊಂಡಿತ್ತು. ಸ್ಫೋಟದ ತೀವ್ರತೆಗೆ ಮೂರು ಅಂತಸ್ತಿನ ಕಟ್ಟಡದ ಒಂದು ಭಾಗ ಕುಸಿದು ಬಿದ್ದಿತ್ತು. </p>.<p><strong>₹1 ಕೋಟಿ ಪರಿಹಾರ: ಸಿ.ಎಂ ಭರವಸೆ </strong></p><p>ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಲು ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ತಿಳಿಸಿದ್ದಾರೆ.</p><p> ‘ತಲಾ ₹1 ಕೋಟಿ ಪರಿಹಾರ ಸಿಗುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ಕಂಪನಿಯ ಆಡಳಿತ ಮಂಡಳಿ ಜತೆ ಮಾತುಕತೆ ನಡೆಸಲಿದೆ’ ಎಂದಿದ್ದಾರೆ. </p><p>ಗಂಭೀರವಾಗಿ ಗಾಯಗೊಂಡವರಿಗೆ ತಲಾ ₹10 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದವರಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಅವರು ಪ್ರಕಟಿಸಿದರು. ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ಮತ್ತು ಕಂಪನಿ ಭರಿಸಲಿವೆ ಎಂದರು.</p>.<p><strong>ಎಫ್ಐಆರ್ ದಾಖಲು; ತನಿಖೆ ಶುರು </strong></p><p>ಸಂತ್ರಸ್ತರೊಬ್ಬರ ಕುಟುಂಬದ ಸದಸ್ಯರು ನೀಡಿದ ದೂರಿನಂತೆ ಪೊಲೀಸರು ಕಾರ್ಖಾನೆಯ ಆಡಳಿತ ಮಂಡಳಿ ವಿರುದ್ಧ ಮಂಗಳವಾರ ಪ್ರಕರಣ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ. ‘ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 105 110 ಮತ್ತು 117ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಗಾರೆಡ್ಡಿ (ತೆಲಂಗಾಣ):</strong> ಇಲ್ಲಿನ ಸಂಗಾರೆಡ್ಡಿ ಜಿಲ್ಲೆಯ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.</p>.<p>ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್ನಲ್ಲಿ ಸೋಮವಾರ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡಿತ್ತು. ಸ್ಫೋಟದಿಂದ ಕುಸಿದ ಕಟ್ಟಡದ ಅವಶೇಷಗಳಡಿ ಮಂಗಳವಾರ ಇನ್ನಷ್ಟು ಮೃತದೇಹಗಳು ಪತ್ತೆಯಾಗಿವೆ.</p>.<p>‘ಅವಶೇಷಗಳ ತೆರವು ಕಾರ್ಯಾಚರಣೆ ವೇಳೆ ಮತ್ತಷ್ಟು ಮೃತದೇಹಗಳು ದೊರೆತಿವೆ. ಒಟ್ಟು 33 ಶವಗಳನ್ನು ಹೊರತೆಗೆಯಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ’ ಎಂದು ಸಂಗಾರೆಡ್ಡಿ ಎಸ್ಪಿ ಪಾರಿತೋಷ್ ಪಂಕಜ್ ಮಂಗಳವಾರ ತಿಳಿಸಿದ್ದಾರೆ.</p>.<p>ದುರಂತದ ಸಮಯದಲ್ಲಿ ಅಂದಾಜು 143 ಮಂದಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರಲ್ಲಿ 57 ಮಂದಿ ಸುರಕ್ಷಿತರಾಗಿದ್ದಾರೆ. 34 ಗಾಯಾಳುಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಕೆಲವರು ನಾಪತ್ತೆಯಾಗಿದ್ದು, ಅವಶೇಷಗಳಡಿ ಶೋಧ ಕಾರ್ಯ ಮುಂದುವರಿದಿದೆ.</p>.<p><strong>ಮುಖ್ಯಮಂತ್ರಿ ಭೇಟಿ:</strong> ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಕೆಲ ಸಚಿವರ ಜತೆ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದರು. ಘಟನೆ ಬಗ್ಗೆ ಸಮಗ್ರ ವರದಿ ನೀಡುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.</p>.<p>ದೊಡ್ಡ ದುರಂತ ನಡೆದರೂ ಕಂಪನಿಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದ್ದಕ್ಕೆ ಮುಖ್ಯಮಂತ್ರಿ ಅವರು ಕಂಪನಿಯ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡರು.</p>.<p>‘ಇದುವರೆಗೆ 9 ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ. ಡಿಎನ್ಎ ಪರೀಕ್ಷೆ ಬಳಿಕ ಇತರ ಮೃತದೇಹಗಳ ಗುರುತು ಪತ್ತೆ ಮಾಡಲಾಗುವುದು’ ಎಂದು ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರಲ್ಲಿ ಹೆಚ್ಚಿನವರು ಒಡಿಶಾ, ಪಶ್ಚಿಮ ಬಂಗಾಳ ಮತ್ತು ಬಿಹಾರ ರಾಜ್ಯಗಳಿಗೆ ಸೇರಿದವರಾಗಿದ್ದಾರೆ.</p>.<p>ಕಾರ್ಖಾನೆಯ ರಿಯಾಕ್ಟರ್ನಲ್ಲಿ ಸೋಮವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದ ಬಳಿಕ ಬೆಂಕಿ ಹೊತ್ತಿಕೊಂಡಿತ್ತು. ಸ್ಫೋಟದ ತೀವ್ರತೆಗೆ ಮೂರು ಅಂತಸ್ತಿನ ಕಟ್ಟಡದ ಒಂದು ಭಾಗ ಕುಸಿದು ಬಿದ್ದಿತ್ತು. </p>.<p><strong>₹1 ಕೋಟಿ ಪರಿಹಾರ: ಸಿ.ಎಂ ಭರವಸೆ </strong></p><p>ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಲು ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ತಿಳಿಸಿದ್ದಾರೆ.</p><p> ‘ತಲಾ ₹1 ಕೋಟಿ ಪರಿಹಾರ ಸಿಗುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ಕಂಪನಿಯ ಆಡಳಿತ ಮಂಡಳಿ ಜತೆ ಮಾತುಕತೆ ನಡೆಸಲಿದೆ’ ಎಂದಿದ್ದಾರೆ. </p><p>ಗಂಭೀರವಾಗಿ ಗಾಯಗೊಂಡವರಿಗೆ ತಲಾ ₹10 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದವರಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಅವರು ಪ್ರಕಟಿಸಿದರು. ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ಮತ್ತು ಕಂಪನಿ ಭರಿಸಲಿವೆ ಎಂದರು.</p>.<p><strong>ಎಫ್ಐಆರ್ ದಾಖಲು; ತನಿಖೆ ಶುರು </strong></p><p>ಸಂತ್ರಸ್ತರೊಬ್ಬರ ಕುಟುಂಬದ ಸದಸ್ಯರು ನೀಡಿದ ದೂರಿನಂತೆ ಪೊಲೀಸರು ಕಾರ್ಖಾನೆಯ ಆಡಳಿತ ಮಂಡಳಿ ವಿರುದ್ಧ ಮಂಗಳವಾರ ಪ್ರಕರಣ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ. ‘ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 105 110 ಮತ್ತು 117ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>