<p><strong>ಹೈದರಾಬಾದ್:</strong> ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್ನಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬದವರಿಗೆ ₹ 1 ಕೋಟಿ ಪರಿಹಾರ ನೀಡುವ ಬಗ್ಗೆ ಕಂಪನಿಯ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸುವುದಾಗಿ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಭರವಸೆ ನೀಡಿದ್ದಾರೆ.</p><p>ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.</p><p>ಘಟನಾ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿರುವ ಸಿಎಂ, ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ ₹ 10 ಲಕ್ಷ, ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದವರಿಗೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.</p><p>'ಮೃತರ ಕುಟುಂಬಗಳಿಗೆ ತಲಾ ₹ 1 ಕೋಟಿ ಪರಿಹಾರ ವಿತರಿಸಲು ಆದೇಶಿಸಿದ್ದೇನೆ. ಅದನ್ನು ಖಾತ್ರಿಪಡಿಸಿಕೊಳ್ಳಲು, ರಾಜ್ಯ ಸರ್ಕಾರವು ಕಂಪನಿಯ ಆಡಳಿತ ಮಂಡಳಿಯೊಂದಿಗೆ ಮಾತನಾಡಲಿದೆ' ಎಂದು ಹೇಳಿದ್ದಾರೆ.</p><p>ಅದಲ್ಲದೆ, ರಾಜ್ಯ ಸರ್ಕಾರವು ಮೃತರ ಕುಟುಂಬಗಳಗೆ ತಲಾ ₹ 1 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ₹ 50 ಸಾವಿರ ತಕ್ಷಣದ ಅಗತ್ಯಗಳಿಗಾಗಿ ಕೂಡಲೇ ಬಿಡುಗಡೆ ಮಾಡಲಿದೆ ಎಂದಿದ್ದಾರೆ.</p>.ತೆಲಂಗಾಣ | ಔಷಧ ಕಾರ್ಖಾನೆಯಲ್ಲಿ ಸ್ಫೋಟ: ಮೃತರ ಸಂಖ್ಯೆ 36ಕ್ಕೆ ಏರಿಕೆ.<p>ಮೃತರಲ್ಲಿ ಹೆಚ್ಚಿನವರು ಒಡಿಶಾ, ಬಿಹಾರ, ಆಂಧ್ರಪ್ರದೇಶ, ಮಧ್ಯಪ್ರದೇಶ ಹಾಗೂ ತೆಲಂಗಾಣದವರು ಎಂದು ಮಾಹಿತಿ ನೀಡಿರುವ ಅಧಿಕಾರಿಗಳು, ದುರಂತದ ಸಮಯದಲ್ಲಿ ಅಂದಾಜು 143 ಮಂದಿ ಕಾರ್ಖಾನೆಯಲ್ಲಿದ್ದರು ಎಂದು ತಿಳಿಸಿದ್ದಾರೆ.</p><p>ಗಾಯಾಳುಗಳನ್ನು ದಾಖಲಿಸಲಾಗಿರುವ ಆಸ್ಪತ್ರೆಗೂ ಭೇಟಿ ನೀಡಿರುವ ಸಿಎಂ, ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರ ಮತ್ತು ಸಿಗಾಚಿ ಕಂಪನಿಯೇ ಭರಿಸಲಿದೆ ಎಂದಿದ್ದಾರೆ. ಹಾಗೆಯೇ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿಯೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್ನಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬದವರಿಗೆ ₹ 1 ಕೋಟಿ ಪರಿಹಾರ ನೀಡುವ ಬಗ್ಗೆ ಕಂಪನಿಯ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸುವುದಾಗಿ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಭರವಸೆ ನೀಡಿದ್ದಾರೆ.</p><p>ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.</p><p>ಘಟನಾ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿರುವ ಸಿಎಂ, ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ ₹ 10 ಲಕ್ಷ, ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದವರಿಗೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.</p><p>'ಮೃತರ ಕುಟುಂಬಗಳಿಗೆ ತಲಾ ₹ 1 ಕೋಟಿ ಪರಿಹಾರ ವಿತರಿಸಲು ಆದೇಶಿಸಿದ್ದೇನೆ. ಅದನ್ನು ಖಾತ್ರಿಪಡಿಸಿಕೊಳ್ಳಲು, ರಾಜ್ಯ ಸರ್ಕಾರವು ಕಂಪನಿಯ ಆಡಳಿತ ಮಂಡಳಿಯೊಂದಿಗೆ ಮಾತನಾಡಲಿದೆ' ಎಂದು ಹೇಳಿದ್ದಾರೆ.</p><p>ಅದಲ್ಲದೆ, ರಾಜ್ಯ ಸರ್ಕಾರವು ಮೃತರ ಕುಟುಂಬಗಳಗೆ ತಲಾ ₹ 1 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ₹ 50 ಸಾವಿರ ತಕ್ಷಣದ ಅಗತ್ಯಗಳಿಗಾಗಿ ಕೂಡಲೇ ಬಿಡುಗಡೆ ಮಾಡಲಿದೆ ಎಂದಿದ್ದಾರೆ.</p>.ತೆಲಂಗಾಣ | ಔಷಧ ಕಾರ್ಖಾನೆಯಲ್ಲಿ ಸ್ಫೋಟ: ಮೃತರ ಸಂಖ್ಯೆ 36ಕ್ಕೆ ಏರಿಕೆ.<p>ಮೃತರಲ್ಲಿ ಹೆಚ್ಚಿನವರು ಒಡಿಶಾ, ಬಿಹಾರ, ಆಂಧ್ರಪ್ರದೇಶ, ಮಧ್ಯಪ್ರದೇಶ ಹಾಗೂ ತೆಲಂಗಾಣದವರು ಎಂದು ಮಾಹಿತಿ ನೀಡಿರುವ ಅಧಿಕಾರಿಗಳು, ದುರಂತದ ಸಮಯದಲ್ಲಿ ಅಂದಾಜು 143 ಮಂದಿ ಕಾರ್ಖಾನೆಯಲ್ಲಿದ್ದರು ಎಂದು ತಿಳಿಸಿದ್ದಾರೆ.</p><p>ಗಾಯಾಳುಗಳನ್ನು ದಾಖಲಿಸಲಾಗಿರುವ ಆಸ್ಪತ್ರೆಗೂ ಭೇಟಿ ನೀಡಿರುವ ಸಿಎಂ, ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರ ಮತ್ತು ಸಿಗಾಚಿ ಕಂಪನಿಯೇ ಭರಿಸಲಿದೆ ಎಂದಿದ್ದಾರೆ. ಹಾಗೆಯೇ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿಯೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>