<p><strong>ಸಂಗಾರೆಡ್ಡಿ (ತೆಲಂಗಾಣ):</strong> ಇಲ್ಲಿನ ಸಿಗಾಚಿ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ ಇನ್ನೂ ಒಂಬತ್ತು ನಾಪತ್ತೆಯಾಗಿದ್ದಾರೆ ಎಂದು ಸಂಗಾರೆಡ್ಡಿ ಜಿಲ್ಲೆಯ ಎಸ್ಪಿ ಪಾರಿತೋಷ್ ಪಂಕಜ್ ಗುರುವಾರ ಹೇಳಿದ್ದಾರೆ.</p><p>‘ದುರಂತದಲ್ಲಿ 38 ಮಂದಿ ಮೃತಪಟ್ಟಿದ್ದು, ಒಂಬತ್ತು ಮಂದಿ ನಾಪತ್ತೆಯಾಗಿದ್ದಾರೆ. ಮೂಳೆಗಳು ಒಳಗೊಂಡಂತೆ ಮಾನವ ದೇಹದ ಅಂಗಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ಕಳುಹಿಸಲಾಗಿದ್ದು, ಅಲ್ಲಿನ ವರದಿ ಲಭಿಸಿದ ಬಳಿಕ ಮೃತರ ನಿಖರ ಸಂಖ್ಯೆ ತಿಳಿಯಲಿದೆ’ ಎಂದು ತಿಳಿಸಿದ್ದಾರೆ.</p><p>‘ಅವಶೇಷಗಳ ತೆರವು ಕಾರ್ಯಾಚರಣೆ ಶೇಕಡ 90ರಷ್ಟು ಪೂರ್ಣಗೊಂಡಿದ್ದು, ಇನ್ನಷ್ಟು ಮೃತದೇಹಗಳು ದೊರೆಯುವ ಸಾಧ್ಯತೆ ಕಡಿಮೆ. ಆದರೆ ಮಾನವ ದೇಹದ ಅಂಗಗಳು ದೊರೆಯುವ ಸಾಧ್ಯತೆಯಿದ್ದು, ಅವುಗಳನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗುವುದು’ ಎಂದರು.</p><p>ದುರಂತದಲ್ಲಿ 40 ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ ಎಂದು ಕಂಪನಿಯ ಆಡಳಿತ ಮಂಡಳಿ ಹೇಳಿದ್ದು, ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡುವುದಾಗಿ ಬುಧವಾರ ಘೋಷಿಸಿತ್ತು.</p>.<p><strong>ಸಮಿತಿ ಸದಸ್ಯರ ಭೇಟಿ ಸಾಧ್ಯತೆ:</strong> </p><p>ದುರಂತದ ಕಾರಣ ಪತ್ತೆಹಚ್ಚಲು ರಾಜ್ಯ ಸರ್ಕಾರ ನೇಮಿಸಿದ ತಜ್ಞರ ಸಮಿತಿಯ ಸದಸ್ಯರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಸಿಎಸ್ಐಆರ್–ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿಯ ವಿಜ್ಞಾನಿ ಡಾ.ಬಿ.ವೆಂಕಟೇಶ್ವರ ರಾವ್ ನೇತೃತ್ವದ ಸಮಿತಿಯು ಸರ್ಕಾರಕ್ಕೆ ಒಂದು ತಿಂಗಳಲ್ಲಿ ವರದಿ ಸಲ್ಲಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಗಾರೆಡ್ಡಿ (ತೆಲಂಗಾಣ):</strong> ಇಲ್ಲಿನ ಸಿಗಾಚಿ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ ಇನ್ನೂ ಒಂಬತ್ತು ನಾಪತ್ತೆಯಾಗಿದ್ದಾರೆ ಎಂದು ಸಂಗಾರೆಡ್ಡಿ ಜಿಲ್ಲೆಯ ಎಸ್ಪಿ ಪಾರಿತೋಷ್ ಪಂಕಜ್ ಗುರುವಾರ ಹೇಳಿದ್ದಾರೆ.</p><p>‘ದುರಂತದಲ್ಲಿ 38 ಮಂದಿ ಮೃತಪಟ್ಟಿದ್ದು, ಒಂಬತ್ತು ಮಂದಿ ನಾಪತ್ತೆಯಾಗಿದ್ದಾರೆ. ಮೂಳೆಗಳು ಒಳಗೊಂಡಂತೆ ಮಾನವ ದೇಹದ ಅಂಗಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ಕಳುಹಿಸಲಾಗಿದ್ದು, ಅಲ್ಲಿನ ವರದಿ ಲಭಿಸಿದ ಬಳಿಕ ಮೃತರ ನಿಖರ ಸಂಖ್ಯೆ ತಿಳಿಯಲಿದೆ’ ಎಂದು ತಿಳಿಸಿದ್ದಾರೆ.</p><p>‘ಅವಶೇಷಗಳ ತೆರವು ಕಾರ್ಯಾಚರಣೆ ಶೇಕಡ 90ರಷ್ಟು ಪೂರ್ಣಗೊಂಡಿದ್ದು, ಇನ್ನಷ್ಟು ಮೃತದೇಹಗಳು ದೊರೆಯುವ ಸಾಧ್ಯತೆ ಕಡಿಮೆ. ಆದರೆ ಮಾನವ ದೇಹದ ಅಂಗಗಳು ದೊರೆಯುವ ಸಾಧ್ಯತೆಯಿದ್ದು, ಅವುಗಳನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗುವುದು’ ಎಂದರು.</p><p>ದುರಂತದಲ್ಲಿ 40 ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ ಎಂದು ಕಂಪನಿಯ ಆಡಳಿತ ಮಂಡಳಿ ಹೇಳಿದ್ದು, ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡುವುದಾಗಿ ಬುಧವಾರ ಘೋಷಿಸಿತ್ತು.</p>.<p><strong>ಸಮಿತಿ ಸದಸ್ಯರ ಭೇಟಿ ಸಾಧ್ಯತೆ:</strong> </p><p>ದುರಂತದ ಕಾರಣ ಪತ್ತೆಹಚ್ಚಲು ರಾಜ್ಯ ಸರ್ಕಾರ ನೇಮಿಸಿದ ತಜ್ಞರ ಸಮಿತಿಯ ಸದಸ್ಯರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಸಿಎಸ್ಐಆರ್–ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿಯ ವಿಜ್ಞಾನಿ ಡಾ.ಬಿ.ವೆಂಕಟೇಶ್ವರ ರಾವ್ ನೇತೃತ್ವದ ಸಮಿತಿಯು ಸರ್ಕಾರಕ್ಕೆ ಒಂದು ತಿಂಗಳಲ್ಲಿ ವರದಿ ಸಲ್ಲಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>