<p><strong>ಹೈದರಾಬಾದ್:</strong> ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವವರ ಕನಿಷ್ಠ ವಯೋಮಿತಿಯನ್ನು ಈಗಿರುವ 25 ವರ್ಷದಿಂದ 21 ವರ್ಷಕ್ಕೆ ಇಳಿಸುವಂತೆ ದೇಶದ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ ರೆಡ್ಡಿ ಭಾನುವಾರ ತಿಳಿಸಿದರು.</p>.<p>ರಾಜೀವ್ ಗಾಂಧಿ ಸದ್ಭಾವನಾ ಯಾತ್ರೆಯಲ್ಲಿ ಮಾತನಾಡಿದ ಅವರು, ‘ದೇಶದ ರಾಜಕೀಯದಲ್ಲಿ ಯುವಕರು ಪ್ರಮುಖ ಪಾತ್ರವಹಿಸಬೇಕಿದೆ. ಹೀಗಾಗಿ ಕನಿಷ್ಠ ವಯಸ್ಸನ್ನು ಇಳಿಸಬೇಕಾದ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.</p>.<p>‘ರಾಜೀವ್ ಗಾಂಧಿ ಅವರು ಪ್ರಧಾನಿ ಆಗಿದ್ದಾಗ ಮತದಾರರ ಕನಿಷ್ಠ ವಯಸ್ಸನ್ನು 21ರಿಂದ 18ಕ್ಕೆ ಇಳಿಸಿದ್ದರು. ಇದು ದೇಶದ ಸಂಸದೀಯ ಪ್ರಜಾಪ್ರಭುತ್ವವನ್ನು ಬಲಪಡಿಸಲು ನೆರವಾಗಿದೆ’ ಎಂದು ರೆಡ್ಡಿ ಶ್ಲಾಘಿಸಿದರು.</p>.<p>‘21ನೇ ವಯಸ್ಸಿನ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿರುವಾಗ, 21ನೇ ವಯಸ್ಸಿನಲ್ಲಿ ಶಾಸಕರಾಗಲು ಏಕೆ ಅವಕಾಶವಿಲ್ಲ’ ಎಂದು ಅವರು ಪ್ರಶ್ನಿಸಿದರು. </p>.<p>ಮುಂದಿನ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸನ್ನು 25ರಿಂದ 21ಕ್ಕೆ ಇಳಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೋರಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗವುದು ಎಂದು ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವವರ ಕನಿಷ್ಠ ವಯೋಮಿತಿಯನ್ನು ಈಗಿರುವ 25 ವರ್ಷದಿಂದ 21 ವರ್ಷಕ್ಕೆ ಇಳಿಸುವಂತೆ ದೇಶದ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ ರೆಡ್ಡಿ ಭಾನುವಾರ ತಿಳಿಸಿದರು.</p>.<p>ರಾಜೀವ್ ಗಾಂಧಿ ಸದ್ಭಾವನಾ ಯಾತ್ರೆಯಲ್ಲಿ ಮಾತನಾಡಿದ ಅವರು, ‘ದೇಶದ ರಾಜಕೀಯದಲ್ಲಿ ಯುವಕರು ಪ್ರಮುಖ ಪಾತ್ರವಹಿಸಬೇಕಿದೆ. ಹೀಗಾಗಿ ಕನಿಷ್ಠ ವಯಸ್ಸನ್ನು ಇಳಿಸಬೇಕಾದ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.</p>.<p>‘ರಾಜೀವ್ ಗಾಂಧಿ ಅವರು ಪ್ರಧಾನಿ ಆಗಿದ್ದಾಗ ಮತದಾರರ ಕನಿಷ್ಠ ವಯಸ್ಸನ್ನು 21ರಿಂದ 18ಕ್ಕೆ ಇಳಿಸಿದ್ದರು. ಇದು ದೇಶದ ಸಂಸದೀಯ ಪ್ರಜಾಪ್ರಭುತ್ವವನ್ನು ಬಲಪಡಿಸಲು ನೆರವಾಗಿದೆ’ ಎಂದು ರೆಡ್ಡಿ ಶ್ಲಾಘಿಸಿದರು.</p>.<p>‘21ನೇ ವಯಸ್ಸಿನ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿರುವಾಗ, 21ನೇ ವಯಸ್ಸಿನಲ್ಲಿ ಶಾಸಕರಾಗಲು ಏಕೆ ಅವಕಾಶವಿಲ್ಲ’ ಎಂದು ಅವರು ಪ್ರಶ್ನಿಸಿದರು. </p>.<p>ಮುಂದಿನ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸನ್ನು 25ರಿಂದ 21ಕ್ಕೆ ಇಳಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೋರಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗವುದು ಎಂದು ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>