<p><strong>ಹೈದರಾಬಾದ್:</strong> ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಗಜ್ವೆಲ್ ಮತ್ತು ಕಾಮರೆಡ್ಡಿ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಗುರುವಾರ) ನಾಮಪತ್ರ ಸಲ್ಲಿಸಲಿದ್ದಾರೆ.</p>.<p>ನಾಮಪತ್ರ ಸಲ್ಲಿಸಿದ ಬಳಿಕ ಮಧ್ಯಾಹ್ನ ಕಾಮರೆಡ್ಡಿ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಕೆಸಿಆರ್ ಮಾತನಾಡಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p><p>ನವೆಂಬರ್ 4ರಂದು ಸಿದ್ದಿಪೇಟೆ ಜಿಲ್ಲೆಯ ಕೋನೈಪಲ್ಲಿಯಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೆಸಿಆರ್ ಭೇಟಿ ನೀಡಿ, ದೇವಸ್ಥಾನದ ಗರ್ಭಗುಡಿಯಲ್ಲಿ ನಾಮಪತ್ರ ಇಟ್ಟು, ವಿಶೇಷ ಪೂಜೆ ಸಲ್ಲಿಸಿದ್ದರು.</p><p>ಚುನಾವಣೆಗಾಗಿ ನವೆಂಬರ್ 13 ರಿಂದ 28 ರವರೆಗೆ 54 'ಪ್ರಜಾ ಆಶೀರ್ವಾದ' ರ್ಯಾಲಿಗಳನ್ನು ನಡೆಸಲು ನಿರ್ಧರಿಸಿದ್ದು, ನವೆಂಬರ್ 28ರಂದು ಗಜ್ವೆಲ್ನಲ್ಲಿ ಅಂತಿಮ ರ್ಯಾಲಿಯನ್ನು ಉದ್ದೇಶಿಸಿ ಕೆಸಿಆರ್ ಮಾತನಾಡಲಿದ್ದಾರೆ.</p>.Telangana Election: 237ನೇ ಬಾರಿಗೆ ನಾಮಪತ್ರ ಸಲ್ಲಿಸಿದ ‘ಎಲೆಕ್ಷನ್ ಕಿಂಗ್’.<p>ತೆಲಂಗಾಣ ವಿಧಾನಸಭಾ ಚುನಾವಣೆಯು ನವೆಂಬರ್ 30ರಂದು ನಡೆಯಲಿದೆ.</p>.Telangana Election 2023: ಕಾಂಗ್ರೆಸ್ಗೆ ಬೆಂಬಲ ಘೋಷಿಸಿದ ವೈ.ಎಸ್. ಶರ್ಮಿಳಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಗಜ್ವೆಲ್ ಮತ್ತು ಕಾಮರೆಡ್ಡಿ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಗುರುವಾರ) ನಾಮಪತ್ರ ಸಲ್ಲಿಸಲಿದ್ದಾರೆ.</p>.<p>ನಾಮಪತ್ರ ಸಲ್ಲಿಸಿದ ಬಳಿಕ ಮಧ್ಯಾಹ್ನ ಕಾಮರೆಡ್ಡಿ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಕೆಸಿಆರ್ ಮಾತನಾಡಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p><p>ನವೆಂಬರ್ 4ರಂದು ಸಿದ್ದಿಪೇಟೆ ಜಿಲ್ಲೆಯ ಕೋನೈಪಲ್ಲಿಯಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೆಸಿಆರ್ ಭೇಟಿ ನೀಡಿ, ದೇವಸ್ಥಾನದ ಗರ್ಭಗುಡಿಯಲ್ಲಿ ನಾಮಪತ್ರ ಇಟ್ಟು, ವಿಶೇಷ ಪೂಜೆ ಸಲ್ಲಿಸಿದ್ದರು.</p><p>ಚುನಾವಣೆಗಾಗಿ ನವೆಂಬರ್ 13 ರಿಂದ 28 ರವರೆಗೆ 54 'ಪ್ರಜಾ ಆಶೀರ್ವಾದ' ರ್ಯಾಲಿಗಳನ್ನು ನಡೆಸಲು ನಿರ್ಧರಿಸಿದ್ದು, ನವೆಂಬರ್ 28ರಂದು ಗಜ್ವೆಲ್ನಲ್ಲಿ ಅಂತಿಮ ರ್ಯಾಲಿಯನ್ನು ಉದ್ದೇಶಿಸಿ ಕೆಸಿಆರ್ ಮಾತನಾಡಲಿದ್ದಾರೆ.</p>.Telangana Election: 237ನೇ ಬಾರಿಗೆ ನಾಮಪತ್ರ ಸಲ್ಲಿಸಿದ ‘ಎಲೆಕ್ಷನ್ ಕಿಂಗ್’.<p>ತೆಲಂಗಾಣ ವಿಧಾನಸಭಾ ಚುನಾವಣೆಯು ನವೆಂಬರ್ 30ರಂದು ನಡೆಯಲಿದೆ.</p>.Telangana Election 2023: ಕಾಂಗ್ರೆಸ್ಗೆ ಬೆಂಬಲ ಘೋಷಿಸಿದ ವೈ.ಎಸ್. ಶರ್ಮಿಳಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>