ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಆಯೋಗ ಪತ್ರ ಬರೆದಿದೆ. ₹18 ಲಕ್ಷ ನಗದು, ಒಂದು ಮೊಬೈಲ್ ಫೋನ್ ಮತ್ತು ಚೆಕ್ ಬುಕ್ಗಳನ್ನು ವಶಪಡಿಸಿಕೊಂಡ ಬಳಿಕ ಅಧಿಕಾರಿಗಳು, ಕಾನೂನು ಕ್ರಮಗಳನ್ನು ಕೈಗೊಳ್ಳುವ ಬದಲು ಪ್ರಕರಣವನ್ನು ದುರ್ಬಲಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಆಯೋಗಕ್ಕೆ ತಿಳಿದುಬಂದಿದೆ. ಅವರು ತನಿಖೆಯ ದಿಕ್ಕುತಪ್ಪಿಸಲು ಪ್ರಯತ್ನಿಸಿದ್ದರು ಎಂದೂ ಹೇಳಲಾಗಿದೆ ಎಂದು ಪತ್ರದಲ್ಲಿ ಹೇಳಿದೆ.