<p><strong>ಹೈದರಾಬಾದ್</strong>: ಎಂಜಿನಿಯರಿಂಗ್, ಕಾನೂನು ಮತ್ತಿತರ ಕೋರ್ಸ್ ಬೋಧಿಸುತ್ತಿದ್ದ ಕಾಲೇಜುಗಳು ಸೇರಿದಂತೆ ತೆಲಂಗಾಣದ 1,000ಕ್ಕೂ ಹೆಚ್ಚು ಖಾಸಗಿ ಕಾಲೇಜುಗಳ ತರಗತಿಗಳನ್ನು ಸೋಮವಾರದಿಂದ ಸ್ಥಗಿತಗೊಳಿಸಲಾಗಿದೆ. ಈ ನಿರ್ಧಾರವು ಕನಿಷ್ಠ 14 ಲಕ್ಷ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ.</p>.<p>ಫೆಡರೇಷನ್ ಆಫ್ ಅಸೋಸಿಯೇಷನ್ ಆಫ್ ತೆಲಂಗಾಣ ಹೈಯರ್ ಎಜುಕೇಷನ್ (ಎಫ್ಎಟಿಎಚ್ಐ) ಭಾನುವಾರ ಸಭೆ ನಡೆಸಿದ ಬಳಿಕ ಕಾಲೇಜುಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿದೆ. ಸರ್ಕಾರದ ಶುಲ್ಕ ಮರುಪಾವತಿ ಯೋಜನೆಯಡಿ ₹7,500 ಕೋಟಿ ಬಿಡುಗಡೆಗೆ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಎಫ್ಎಟಿಎಚ್ಐ ಈ ತೀರ್ಮಾನ ಕೈಗೊಂಡಿದೆ.</p>.<p>ಶಿಕ್ಷಣ ಸಂಸ್ಥೆಗಳು ಹಣಕಾಸು ಬಿಕ್ಕಟ್ಟು ಎದುರಿಸುತ್ತಿರುವುದರಿಂದಾಗಿ ಶಿಕ್ಷಕರು ಮತ್ತು ಸಿಬ್ಬಂದಿಗೆ ಹಲವು ತಿಂಗಳುಗಳಿಂದ ವೇತನ ನೀಡಿಲ್ಲ ಮತ್ತು ತರಗತಿಗಳು ಸುಗಮವಾಗಿ ನಡೆಯದೆ ವಿದ್ಯಾರ್ಥಿಗಳಿಗೂ ತೊಂದರೆಯಾಗಿದೆ ಎಂದು ಆಡಳಿತ ಮಂಡಳಿಗಳು ತಿಳಿಸಿವೆ.</p>.<p>‘ಭಾನುವಾರ ನಡೆದ ಸಭೆಯಲ್ಲಿ ಸೆಪ್ಟೆಂಬರ್ 15ರಂದು ಎಂಜಿನಿಯರಿಂಗ್ ದಿನವನ್ನು ‘ಕರಾಳ ದಿನ’ವಾಗಿ ಆಚರಿಸಲು ಮತ್ತು ಸರ್ಕಾರ ಬೇಡಿಕೆಯನ್ನು ಈಡೇರಿಸುವವರೆಗೆ ಅನಿರ್ದಿಷ್ಟಾವಧಿಗೆ ಕಾಲೇಜುಗಳನ್ನು ಮುಚ್ಚಲು ನಿರ್ಧರಿಸಲಾಯಿತು’ ಎಂದು ಎಫ್ಎಟಿಎಚ್ಐ ಅಧ್ಯಕ್ಷ ಎನ್.ರಮೇಶ್ ಬಾಬು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಎಂಜಿನಿಯರಿಂಗ್, ಕಾನೂನು ಮತ್ತಿತರ ಕೋರ್ಸ್ ಬೋಧಿಸುತ್ತಿದ್ದ ಕಾಲೇಜುಗಳು ಸೇರಿದಂತೆ ತೆಲಂಗಾಣದ 1,000ಕ್ಕೂ ಹೆಚ್ಚು ಖಾಸಗಿ ಕಾಲೇಜುಗಳ ತರಗತಿಗಳನ್ನು ಸೋಮವಾರದಿಂದ ಸ್ಥಗಿತಗೊಳಿಸಲಾಗಿದೆ. ಈ ನಿರ್ಧಾರವು ಕನಿಷ್ಠ 14 ಲಕ್ಷ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ.</p>.<p>ಫೆಡರೇಷನ್ ಆಫ್ ಅಸೋಸಿಯೇಷನ್ ಆಫ್ ತೆಲಂಗಾಣ ಹೈಯರ್ ಎಜುಕೇಷನ್ (ಎಫ್ಎಟಿಎಚ್ಐ) ಭಾನುವಾರ ಸಭೆ ನಡೆಸಿದ ಬಳಿಕ ಕಾಲೇಜುಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿದೆ. ಸರ್ಕಾರದ ಶುಲ್ಕ ಮರುಪಾವತಿ ಯೋಜನೆಯಡಿ ₹7,500 ಕೋಟಿ ಬಿಡುಗಡೆಗೆ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಎಫ್ಎಟಿಎಚ್ಐ ಈ ತೀರ್ಮಾನ ಕೈಗೊಂಡಿದೆ.</p>.<p>ಶಿಕ್ಷಣ ಸಂಸ್ಥೆಗಳು ಹಣಕಾಸು ಬಿಕ್ಕಟ್ಟು ಎದುರಿಸುತ್ತಿರುವುದರಿಂದಾಗಿ ಶಿಕ್ಷಕರು ಮತ್ತು ಸಿಬ್ಬಂದಿಗೆ ಹಲವು ತಿಂಗಳುಗಳಿಂದ ವೇತನ ನೀಡಿಲ್ಲ ಮತ್ತು ತರಗತಿಗಳು ಸುಗಮವಾಗಿ ನಡೆಯದೆ ವಿದ್ಯಾರ್ಥಿಗಳಿಗೂ ತೊಂದರೆಯಾಗಿದೆ ಎಂದು ಆಡಳಿತ ಮಂಡಳಿಗಳು ತಿಳಿಸಿವೆ.</p>.<p>‘ಭಾನುವಾರ ನಡೆದ ಸಭೆಯಲ್ಲಿ ಸೆಪ್ಟೆಂಬರ್ 15ರಂದು ಎಂಜಿನಿಯರಿಂಗ್ ದಿನವನ್ನು ‘ಕರಾಳ ದಿನ’ವಾಗಿ ಆಚರಿಸಲು ಮತ್ತು ಸರ್ಕಾರ ಬೇಡಿಕೆಯನ್ನು ಈಡೇರಿಸುವವರೆಗೆ ಅನಿರ್ದಿಷ್ಟಾವಧಿಗೆ ಕಾಲೇಜುಗಳನ್ನು ಮುಚ್ಚಲು ನಿರ್ಧರಿಸಲಾಯಿತು’ ಎಂದು ಎಫ್ಎಟಿಎಚ್ಐ ಅಧ್ಯಕ್ಷ ಎನ್.ರಮೇಶ್ ಬಾಬು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>