<p><strong>ಹೈದರಾಬಾದ್:</strong> ಕರ್ನೂಲ್ ಬಳಿ ಕಾವೇರಿ ಟ್ರಾವೆಲ್ಸ್ನ ಖಾಸಗಿ ಬಸ್ ಬೆಂಕಿ ದುರಂತ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ತೆಲಂಗಾಣ ಸಾರಿಗೆ ಇಲಾಖೆ ಅಧಿಕಾರಿಗಳು ಸುರಕ್ಷತಾ ಮಾನದಂಡಗಳನ್ನು ಪಾಲಿಸದ ಖಾಸಗಿ ಬಸ್ಗಳ ವಿರುದ್ಧ ಭಾರಿ ಕಾರ್ಯಾಚರಣೆ ಆರಂಭಿಸಿದ್ದಾರೆ.</p><p>ನಿನ್ನೆ ಬೆಳಿಗ್ಗೆಯಿಂದ ಆರಂಭಿಸಲಾಗಿರುವ ಖಾಸಗಿ ಬಸ್ಗಳ ವಿರುದ್ಧದ ಕಾರ್ಯಾಚರಣೆಯಲ್ಲಿ ಸುರಕ್ಷತೆ ಮಾನದಂಡಗಳು ಹಾಗೂ ಬಸ್ ಫಿಟ್ನೆಸ್ ಕಾಪಾಡಿಕೊಳ್ಳದವರ ವಿರುದ್ಧ 14 ಪ್ರಕರಣಗಳನ್ನು ದಾಖಲಿಸಿ ₹46 ಸಾವಿರ ದಂಡ ಸಂಗ್ರಹಿಸಿದ್ದಾರೆ.</p><p>ಪ್ರತಿದಿನ ಹೈದರಾಬಾದ್ನಿಂದ ಅಂತರರಾಜ್ಯಗಳಿಗೆ ಸುಮಾರು 500 ಖಾಸಗಿ ಬಸ್ಗಳು ಸಂಚರಿಸುತ್ತವೆ.</p><p>ಖಾಸಗಿ ಬಸ್ಗಳಿಂದ ಆಗುತ್ತಿರುವ ಅನಾಹುತಗಳನ್ನು ತಡೆಗಟ್ಟಲು ಕರ್ನಾಟಕ ಹಾಗೂ ಆಂಧ್ರಪ್ರದೇಶ ಸರ್ಕಾರಗಳ ಸಾರಿಗೆ ಇಲಾಖೆಯ ಸಚಿವರನ್ನು ಹಾಗೂ ಅಧಿಕಾರಿಗಳನ್ನು ಭೇಟಿಯಾಗಿ ಚರ್ಚಿಸುತ್ತೇವೆ ಎಂದು ತೆಲಂಗಾಣ ಸಾರಿಗೆ ಸಚಿವ ಪೊನ್ನಂ ಪ್ರಭಾಕರ್ ಅವರು ತಿಳಿಸಿದ್ದಾರೆ.</p><p>ಸುರಕ್ಷತಾ ಮಾನದಂಡಗಳನ್ನು ಪೂರೈಸದ ಹಾಗೂ ಬಸ್ಗಳ ಫಿಟ್ನೆಸ್ ಕಾಯ್ದುಕೊಳ್ಳದವರಿಗೆ ಇನ್ಮುಂದೆ ಭಾರಿ ದಂಡ ವಿಧಿಸಲಾಗುತ್ತದೆ. ಅಲ್ಲದೇ ಸಂಸ್ಥೆಯ ಪರವಾನಗಿಯನ್ನೇ ರದ್ದುಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.</p><p>ಬೆಂಕಿ ಅಪಘಾತಕ್ಕೀಡಾದ ವಿ. ಕಾವೇರಿ ಟ್ರಾವೆಲ್ಸ್ನ ಎಸಿ ಸ್ಲೀಪರ್ ಬಸ್ ಹಲವು ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿರುವುದು ಆರಂಭಿಕ ತಪಾಸಣೆ ವೇಳೆ ಗೊತ್ತಾಗಿದೆ ಎಂದು ತಿಳಿಸಿದ್ದಾರೆ. </p><p>‘ದುರಂತಕ್ಕೆ ಕಾರಣವಾಗಿರು ಬಸ್ ಅನ್ನು ಸ್ಲೀಪರ್ ಕೋಚ್ ಆಗಿ ಪರಿವರ್ತಿಸಲಾಗಿತ್ತು. ಅದರೆ ಪರಿವರ್ತನೆಗಾಗಿ ಅನುಮೋದನೆ ಪಡೆದಿಲ್ಲ’ ಎಂದು ಅವರು ಹೇಳಿದ್ದಾರೆ. </p><p>ವಾಹನ ನಿರ್ಮಾಣ, ಅಗ್ನಿ ಸುರಕ್ಷತೆ, ತುರ್ತು ನಿರ್ಗಮನ ಮತ್ತು ಒಳಗಾಂಣ ವಸ್ತುಗಳ ಬಳಕೆ ಸೇರಿದಂತೆ ಒಟ್ಟಾರೆ ರಚನೆಯಲ್ಲಿ ಹಲವು ಮಹತ್ವದ ಸುರಕ್ಷತಾ ಮಾರ್ಗಸೂಚಿಗಳ ಪಾಲನೆ ಆಗಿಲ್ಲ ಎಂದು ಹೇಳಿದ್ದಾರೆ</p><p>ಕಳೆದ ಶುಕ್ರವಾರ ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಂಸ್ಥೆಯ ಸ್ಲೀಪರ್ ಎಸಿ ಬಸ್ ಬೆಂಕಿ ಹೊತ್ತಿಕೊಂಡು 20 ಪ್ರಯಾಣಿಕರ ಸಜೀವ ದಹನಕ್ಕೆ ಕಾರಣವಾಗಿತ್ತು.</p>.ಕರ್ನೂಲ್ ಬಸ್ ದುರಂತ: ಪ್ರಯಾಣಿಕರ ದ್ವಾರದಿಂದ ಹಾರಿ ಪಾರಾಗಿದ್ದ ಚಾಲಕ.ಕರ್ನೂಲ್ ಬಸ್ ಅವಘಢ: ಉದ್ಯೋಗ ಅರಸಿ ಬಂದಿದ್ದವರು ಬೆಂದು ಹೋದರು... .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಕರ್ನೂಲ್ ಬಳಿ ಕಾವೇರಿ ಟ್ರಾವೆಲ್ಸ್ನ ಖಾಸಗಿ ಬಸ್ ಬೆಂಕಿ ದುರಂತ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ತೆಲಂಗಾಣ ಸಾರಿಗೆ ಇಲಾಖೆ ಅಧಿಕಾರಿಗಳು ಸುರಕ್ಷತಾ ಮಾನದಂಡಗಳನ್ನು ಪಾಲಿಸದ ಖಾಸಗಿ ಬಸ್ಗಳ ವಿರುದ್ಧ ಭಾರಿ ಕಾರ್ಯಾಚರಣೆ ಆರಂಭಿಸಿದ್ದಾರೆ.</p><p>ನಿನ್ನೆ ಬೆಳಿಗ್ಗೆಯಿಂದ ಆರಂಭಿಸಲಾಗಿರುವ ಖಾಸಗಿ ಬಸ್ಗಳ ವಿರುದ್ಧದ ಕಾರ್ಯಾಚರಣೆಯಲ್ಲಿ ಸುರಕ್ಷತೆ ಮಾನದಂಡಗಳು ಹಾಗೂ ಬಸ್ ಫಿಟ್ನೆಸ್ ಕಾಪಾಡಿಕೊಳ್ಳದವರ ವಿರುದ್ಧ 14 ಪ್ರಕರಣಗಳನ್ನು ದಾಖಲಿಸಿ ₹46 ಸಾವಿರ ದಂಡ ಸಂಗ್ರಹಿಸಿದ್ದಾರೆ.</p><p>ಪ್ರತಿದಿನ ಹೈದರಾಬಾದ್ನಿಂದ ಅಂತರರಾಜ್ಯಗಳಿಗೆ ಸುಮಾರು 500 ಖಾಸಗಿ ಬಸ್ಗಳು ಸಂಚರಿಸುತ್ತವೆ.</p><p>ಖಾಸಗಿ ಬಸ್ಗಳಿಂದ ಆಗುತ್ತಿರುವ ಅನಾಹುತಗಳನ್ನು ತಡೆಗಟ್ಟಲು ಕರ್ನಾಟಕ ಹಾಗೂ ಆಂಧ್ರಪ್ರದೇಶ ಸರ್ಕಾರಗಳ ಸಾರಿಗೆ ಇಲಾಖೆಯ ಸಚಿವರನ್ನು ಹಾಗೂ ಅಧಿಕಾರಿಗಳನ್ನು ಭೇಟಿಯಾಗಿ ಚರ್ಚಿಸುತ್ತೇವೆ ಎಂದು ತೆಲಂಗಾಣ ಸಾರಿಗೆ ಸಚಿವ ಪೊನ್ನಂ ಪ್ರಭಾಕರ್ ಅವರು ತಿಳಿಸಿದ್ದಾರೆ.</p><p>ಸುರಕ್ಷತಾ ಮಾನದಂಡಗಳನ್ನು ಪೂರೈಸದ ಹಾಗೂ ಬಸ್ಗಳ ಫಿಟ್ನೆಸ್ ಕಾಯ್ದುಕೊಳ್ಳದವರಿಗೆ ಇನ್ಮುಂದೆ ಭಾರಿ ದಂಡ ವಿಧಿಸಲಾಗುತ್ತದೆ. ಅಲ್ಲದೇ ಸಂಸ್ಥೆಯ ಪರವಾನಗಿಯನ್ನೇ ರದ್ದುಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.</p><p>ಬೆಂಕಿ ಅಪಘಾತಕ್ಕೀಡಾದ ವಿ. ಕಾವೇರಿ ಟ್ರಾವೆಲ್ಸ್ನ ಎಸಿ ಸ್ಲೀಪರ್ ಬಸ್ ಹಲವು ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿರುವುದು ಆರಂಭಿಕ ತಪಾಸಣೆ ವೇಳೆ ಗೊತ್ತಾಗಿದೆ ಎಂದು ತಿಳಿಸಿದ್ದಾರೆ. </p><p>‘ದುರಂತಕ್ಕೆ ಕಾರಣವಾಗಿರು ಬಸ್ ಅನ್ನು ಸ್ಲೀಪರ್ ಕೋಚ್ ಆಗಿ ಪರಿವರ್ತಿಸಲಾಗಿತ್ತು. ಅದರೆ ಪರಿವರ್ತನೆಗಾಗಿ ಅನುಮೋದನೆ ಪಡೆದಿಲ್ಲ’ ಎಂದು ಅವರು ಹೇಳಿದ್ದಾರೆ. </p><p>ವಾಹನ ನಿರ್ಮಾಣ, ಅಗ್ನಿ ಸುರಕ್ಷತೆ, ತುರ್ತು ನಿರ್ಗಮನ ಮತ್ತು ಒಳಗಾಂಣ ವಸ್ತುಗಳ ಬಳಕೆ ಸೇರಿದಂತೆ ಒಟ್ಟಾರೆ ರಚನೆಯಲ್ಲಿ ಹಲವು ಮಹತ್ವದ ಸುರಕ್ಷತಾ ಮಾರ್ಗಸೂಚಿಗಳ ಪಾಲನೆ ಆಗಿಲ್ಲ ಎಂದು ಹೇಳಿದ್ದಾರೆ</p><p>ಕಳೆದ ಶುಕ್ರವಾರ ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಂಸ್ಥೆಯ ಸ್ಲೀಪರ್ ಎಸಿ ಬಸ್ ಬೆಂಕಿ ಹೊತ್ತಿಕೊಂಡು 20 ಪ್ರಯಾಣಿಕರ ಸಜೀವ ದಹನಕ್ಕೆ ಕಾರಣವಾಗಿತ್ತು.</p>.ಕರ್ನೂಲ್ ಬಸ್ ದುರಂತ: ಪ್ರಯಾಣಿಕರ ದ್ವಾರದಿಂದ ಹಾರಿ ಪಾರಾಗಿದ್ದ ಚಾಲಕ.ಕರ್ನೂಲ್ ಬಸ್ ಅವಘಢ: ಉದ್ಯೋಗ ಅರಸಿ ಬಂದಿದ್ದವರು ಬೆಂದು ಹೋದರು... .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>