<p><strong>ನಾಗರಕರ್ನೂಲ್</strong>(ತೆಲಂಗಾಣ): ಶ್ರೀಶೈಲಂ ಎಡದಂಡೆ ಕಾಲುವೆ (ಎಸ್ಎಲ್ಬಿಸಿ) ಕುಸಿದು, ಅದರ ಒಳಭಾಗದಲ್ಲಿ ಸಿಲುಕಿರುವ 8 ಕಾರ್ಮಿಕರ ರಕ್ಷಣಾ ಕಾರ್ಯಕ್ಕೆ ರೋಬೊಗಳನ್ನು ನಿಯೋಜಿಸುವಂತೆ ತೆಲಂಗಾಣ ನೀರಾವರಿ ಸಚಿವ ಎನ್. ಉತ್ತಮ್ ಕುಮಾರ್ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. </p><p>ಜಿಲ್ಲೆಯ ದೋಮಲಪೆಂಟ ಗ್ರಾಮದ ಬಳಿ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗ ಫೆ.22ರಂದು ಕುಸಿಯಿತು. ಅಂದಿನಿಂದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. </p><p>ಯಂತ್ರದಿಂದ ಸುರಂಗವನ್ನು ಕೊರೆಯುವ ಕಾರ್ಯಾಚರಣೆಯಲ್ಲಿ ರಕ್ಷಣಾ ಸಿಬ್ಬಂದಿ ಅಪಾಯಕ್ಕೆ ಒಳಗಾಗುವ ಕಾರಣ ರೋಬೊಗಳ ನಿಯೋಜನೆಗೆ ಸರ್ಕಾರಕ್ಕೆ ಮುಂದಾಗಿದೆ. </p><p>ಸುರಂಗ ಇರುವ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ ನಡೆಸಿದ ಉತ್ತಮ್ ಕುಮಾರ್, ‘ರೋಬೊ ತಜ್ಞರ ನೆರವಿನೊಂದಿಗೆ (ಹೈದರಾಬಾದ್ ಮೂಲದ ಖಾಸಗಿ ಕಂಪನಿಯೊಂದರ) ರಕ್ಷಣಾ ಕಾರ್ಯಾಚರಣೆ ನಡೆಸಲು ಸರ್ಕಾರವು ₹4 ಕೋಟಿ ಖರ್ಚು ಮಾಡಲಿದೆ’ ಎಂದು ತಿಳಿಸಿದರು. </p>.ತೆಲಂಗಾಣ ಸುರಂಗ ಕುಸಿತ: 10,000 ಘನ ಮೀಟರ್ ಕೆಸರು ತೆಗೆಯುವ ಸವಾಲಿನ ಕಾರ್ಯ ಶುರು.ತೆಲಂಗಾಣ ಸುರಂಗ ಕುಸಿತ: ಮುಂದುವರಿದ ರಕ್ಷಣಾ ಕಾರ್ಯಾಚರಣೆ.ತೆಲಂಗಾಣ ಸುರಂಗ ಕುಸಿತ; ಕಾರ್ಮಿಕರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಹುಲ್.ಸುರಂಗ ಕುಸಿತ: ರಕ್ಷಣಾ ಕಾರ್ಯಾಚರಣೆ ಕಷ್ಟಕರ–ಸಚಿವ. <p>ಮಾರ್ಚ್ 2ರಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಪರಿಸ್ಥಿತಿ ಪರಿಶೀಲಿಸಿದ್ದರು. ‘ರಕ್ಷಣಾ ಸಿಬ್ಬಂದಿಗೆ ಯಾವುದೇ ಅಪಾಯವಾಗದಂತೆ ಅಗತ್ಯವಿದ್ದರೆ ಸುರಂಗದೊಳಗೆ ರೋಬೊಗಳನ್ನು ಬಳಸಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಲು‘ ಅಧಿಕಾರಿಗಳಿಗೆ ರೆಡ್ಡಿ ಸೂಚಿಸಿದ್ದರು.</p><p>ಫೆಬ್ರುವರಿ 22ರಂದು ಶ್ರೀಶೈಲಂ ಎಡದಂಡೆ ಕಾಲುವೆ ಯೋಜನೆಯ ಸುರಂಗದ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಸುಮಾರು 8 ಮಂದಿ ಕಾರ್ಮಿಕರು ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.</p>.ಸಿಲ್ಕ್ಯಾರಾ ಸುರಂಗ ಕುಸಿತ: ಮನೆ ತಲುಪಿದ ಜಾರ್ಖಂಡ್, ಒಡಿಶಾ, ಅಸ್ಸಾಂ ಕಾರ್ಮಿಕರು.ಉತ್ತರಕಾಶಿ ಸುರಂಗ ಕುಸಿತ: ಆಸ್ಪತ್ರೆಯಿಂದ ಮನೆಗೆ ತೆರಳಿದ ಕಾರ್ಮಿಕರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗರಕರ್ನೂಲ್</strong>(ತೆಲಂಗಾಣ): ಶ್ರೀಶೈಲಂ ಎಡದಂಡೆ ಕಾಲುವೆ (ಎಸ್ಎಲ್ಬಿಸಿ) ಕುಸಿದು, ಅದರ ಒಳಭಾಗದಲ್ಲಿ ಸಿಲುಕಿರುವ 8 ಕಾರ್ಮಿಕರ ರಕ್ಷಣಾ ಕಾರ್ಯಕ್ಕೆ ರೋಬೊಗಳನ್ನು ನಿಯೋಜಿಸುವಂತೆ ತೆಲಂಗಾಣ ನೀರಾವರಿ ಸಚಿವ ಎನ್. ಉತ್ತಮ್ ಕುಮಾರ್ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. </p><p>ಜಿಲ್ಲೆಯ ದೋಮಲಪೆಂಟ ಗ್ರಾಮದ ಬಳಿ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗ ಫೆ.22ರಂದು ಕುಸಿಯಿತು. ಅಂದಿನಿಂದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. </p><p>ಯಂತ್ರದಿಂದ ಸುರಂಗವನ್ನು ಕೊರೆಯುವ ಕಾರ್ಯಾಚರಣೆಯಲ್ಲಿ ರಕ್ಷಣಾ ಸಿಬ್ಬಂದಿ ಅಪಾಯಕ್ಕೆ ಒಳಗಾಗುವ ಕಾರಣ ರೋಬೊಗಳ ನಿಯೋಜನೆಗೆ ಸರ್ಕಾರಕ್ಕೆ ಮುಂದಾಗಿದೆ. </p><p>ಸುರಂಗ ಇರುವ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ ನಡೆಸಿದ ಉತ್ತಮ್ ಕುಮಾರ್, ‘ರೋಬೊ ತಜ್ಞರ ನೆರವಿನೊಂದಿಗೆ (ಹೈದರಾಬಾದ್ ಮೂಲದ ಖಾಸಗಿ ಕಂಪನಿಯೊಂದರ) ರಕ್ಷಣಾ ಕಾರ್ಯಾಚರಣೆ ನಡೆಸಲು ಸರ್ಕಾರವು ₹4 ಕೋಟಿ ಖರ್ಚು ಮಾಡಲಿದೆ’ ಎಂದು ತಿಳಿಸಿದರು. </p>.ತೆಲಂಗಾಣ ಸುರಂಗ ಕುಸಿತ: 10,000 ಘನ ಮೀಟರ್ ಕೆಸರು ತೆಗೆಯುವ ಸವಾಲಿನ ಕಾರ್ಯ ಶುರು.ತೆಲಂಗಾಣ ಸುರಂಗ ಕುಸಿತ: ಮುಂದುವರಿದ ರಕ್ಷಣಾ ಕಾರ್ಯಾಚರಣೆ.ತೆಲಂಗಾಣ ಸುರಂಗ ಕುಸಿತ; ಕಾರ್ಮಿಕರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಹುಲ್.ಸುರಂಗ ಕುಸಿತ: ರಕ್ಷಣಾ ಕಾರ್ಯಾಚರಣೆ ಕಷ್ಟಕರ–ಸಚಿವ. <p>ಮಾರ್ಚ್ 2ರಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಪರಿಸ್ಥಿತಿ ಪರಿಶೀಲಿಸಿದ್ದರು. ‘ರಕ್ಷಣಾ ಸಿಬ್ಬಂದಿಗೆ ಯಾವುದೇ ಅಪಾಯವಾಗದಂತೆ ಅಗತ್ಯವಿದ್ದರೆ ಸುರಂಗದೊಳಗೆ ರೋಬೊಗಳನ್ನು ಬಳಸಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಲು‘ ಅಧಿಕಾರಿಗಳಿಗೆ ರೆಡ್ಡಿ ಸೂಚಿಸಿದ್ದರು.</p><p>ಫೆಬ್ರುವರಿ 22ರಂದು ಶ್ರೀಶೈಲಂ ಎಡದಂಡೆ ಕಾಲುವೆ ಯೋಜನೆಯ ಸುರಂಗದ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಸುಮಾರು 8 ಮಂದಿ ಕಾರ್ಮಿಕರು ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.</p>.ಸಿಲ್ಕ್ಯಾರಾ ಸುರಂಗ ಕುಸಿತ: ಮನೆ ತಲುಪಿದ ಜಾರ್ಖಂಡ್, ಒಡಿಶಾ, ಅಸ್ಸಾಂ ಕಾರ್ಮಿಕರು.ಉತ್ತರಕಾಶಿ ಸುರಂಗ ಕುಸಿತ: ಆಸ್ಪತ್ರೆಯಿಂದ ಮನೆಗೆ ತೆರಳಿದ ಕಾರ್ಮಿಕರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>