<p><strong>ನಾಗರಕರ್ನೂಲ್(ತೆಲಂಗಾಣ)</strong>: ಶ್ರೀಶೈಲಂ ಎಡದಂಡೆ ಕಾಲುವೆಯಡಿ ಎಸ್ಎಲ್ಬಿಸಿ ಸಿಲುಕಿರುವ ಸಿಬ್ಬಂದಿಯ ರಕ್ಷಣೆಗಾಗಿ ಸತತ 11ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಹಾಳಾಗಿದ್ದ ಕನ್ವೇಯರ್ ಬೆಲ್ಟ್ ಅನ್ನು ದುರಸ್ತಿ ಮಾಡಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಲೋಹ ಕತ್ತರಿಸುವ ತಜ್ಞರನ್ನು ಒಳಗೊಂಡ ದಕ್ಷಿಣ ಮಧ್ಯ ರೈಲ್ವೆ ತಂಡವು ರಕ್ಷಣಾ ಕಾರ್ಯಾಚರಣೆಯಲ್ಲಿ ಸಾಥ್ ನೀಡಿದೆ. ಆದರೆ ಈವರೆಗೂ ಕಾರ್ಮಿಕರ ಬಗ್ಗೆ ಸುಳಿವು ಸಿಕ್ಕಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಅನುಮತಿ ಇಲ್ಲದೇ ಪ್ರತಿಭಟಿಸಿದರೆ ಶಾಲಾ ಕಾಲೇಜುಗಳ ಅನುದಾನ ಕಡಿತ, ಜೈಲು: ಟ್ರಂಪ್.ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಬೆಲ್ಜಿಯಂ ರಾಜಕುಮಾರಿ ಆಸ್ಟ್ರಿಡ್. <p>ಸುರಂಗದ ಒಳಗೆ ತಿರುವು ತೆಗೆದುಕೊಳ್ಳಲು ಸ್ಥಳಾವಕಾಶವಿಲ್ಲದೆ ಲಾರಿಗಳು ಒಳಗೆ ಹೋಗಿ ಕೆಸರು ಸಾಗಿಸಲು ಕಷ್ಟಕರವಾಗಿತ್ತು. ಸುರಂಗದ ಒಳಗಿದ್ದ ಟನಲ್ ಬೋರಿಂಗ್ ಮೆಷಿನ್ (ಟಿಬಿಎಂ)ಗೆ ಅಳವಡಿಸಲಾಗಿದ್ದ ಕನ್ವೇಯರ್ ಬೆಲ್ಟ್ ಹಾಳಾಗಿತ್ತು. ಆದರೆ ದುರಸ್ತಿ ಪಡಿಸಿ ಬೆಲ್ಟ್ ಮೂಲಕ ಮಣ್ಣು ಸಾಗಿಸುವ ಆಯ್ಕೆ ಪ್ರಾರಂಭಗೊಂಡಿದೆ.</p><p>ರಕ್ಷಣಾ ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ರಕ್ಷಣಾ ಕಾರ್ಯಾಚರಣೆಯಲ್ಲಿ ರೋಬೋಟ್ಗಳನ್ನು ನಿಯೋಜಿಸುವ ಆಯ್ಕೆ ಬಗ್ಗೆ ಸರ್ಕಾರ ಪರಿಶೀಲಿಸುತ್ತಿದೆ. ರಕ್ಷಣಾ ಸಿಬ್ಬಂದಿ ಪ್ರತಿದಿನ ಮೂರು ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಗಾಯಕ್ವಾಡ್ ತಿಳಿಸಿದ್ದರು. </p><p>ಫೆಬ್ರುವರಿ 22ರಂದು ಶ್ರೀಶೈಲಂ ಎಡದಂಡೆ ಕಾಲುವೆ ಯೋಜನೆಯ ಸುರಂಗದ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಸುಮಾರು 8 ಮಂದಿ ಕಾರ್ಮಿಕರು ಸಿಲುಕಿಕೊಂಡಿದ್ದು,ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.</p> .ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಬೆಲ್ಜಿಯಂ ರಾಜಕುಮಾರಿ ಆಸ್ಟ್ರಿಡ್.ಚಂದ್ರಗುತ್ತಿ: ಇಂಡೋ ಇಸ್ಲಾಮಿಕ್ ಶೈಲಿಯ ಮುಸುಕಿನಬಾವಿ ಪತ್ತೆ.ದೇಶದ ಧಾರ್ಮಿಕ ಭಾವನೆಗಳೊಂದಿಗೆ ಎಸ್ಪಿ ಆಟವಾಡುತ್ತಿದೆ: ಸಿಎಂ ಯೋಗಿ ಆದಿತ್ಯನಾಥ್.ನಕ್ಸಲರಿಂದ ವ್ಯಕ್ತಿಯ ಹತ್ಯೆ:ಬಸ್ತಾರ್ ಪ್ರಾಂತ್ಯದಲ್ಲಿ ಈ ವರ್ಷದಲ್ಲೇ 8ನೇ ಪ್ರಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗರಕರ್ನೂಲ್(ತೆಲಂಗಾಣ)</strong>: ಶ್ರೀಶೈಲಂ ಎಡದಂಡೆ ಕಾಲುವೆಯಡಿ ಎಸ್ಎಲ್ಬಿಸಿ ಸಿಲುಕಿರುವ ಸಿಬ್ಬಂದಿಯ ರಕ್ಷಣೆಗಾಗಿ ಸತತ 11ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಹಾಳಾಗಿದ್ದ ಕನ್ವೇಯರ್ ಬೆಲ್ಟ್ ಅನ್ನು ದುರಸ್ತಿ ಮಾಡಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಲೋಹ ಕತ್ತರಿಸುವ ತಜ್ಞರನ್ನು ಒಳಗೊಂಡ ದಕ್ಷಿಣ ಮಧ್ಯ ರೈಲ್ವೆ ತಂಡವು ರಕ್ಷಣಾ ಕಾರ್ಯಾಚರಣೆಯಲ್ಲಿ ಸಾಥ್ ನೀಡಿದೆ. ಆದರೆ ಈವರೆಗೂ ಕಾರ್ಮಿಕರ ಬಗ್ಗೆ ಸುಳಿವು ಸಿಕ್ಕಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಅನುಮತಿ ಇಲ್ಲದೇ ಪ್ರತಿಭಟಿಸಿದರೆ ಶಾಲಾ ಕಾಲೇಜುಗಳ ಅನುದಾನ ಕಡಿತ, ಜೈಲು: ಟ್ರಂಪ್.ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಬೆಲ್ಜಿಯಂ ರಾಜಕುಮಾರಿ ಆಸ್ಟ್ರಿಡ್. <p>ಸುರಂಗದ ಒಳಗೆ ತಿರುವು ತೆಗೆದುಕೊಳ್ಳಲು ಸ್ಥಳಾವಕಾಶವಿಲ್ಲದೆ ಲಾರಿಗಳು ಒಳಗೆ ಹೋಗಿ ಕೆಸರು ಸಾಗಿಸಲು ಕಷ್ಟಕರವಾಗಿತ್ತು. ಸುರಂಗದ ಒಳಗಿದ್ದ ಟನಲ್ ಬೋರಿಂಗ್ ಮೆಷಿನ್ (ಟಿಬಿಎಂ)ಗೆ ಅಳವಡಿಸಲಾಗಿದ್ದ ಕನ್ವೇಯರ್ ಬೆಲ್ಟ್ ಹಾಳಾಗಿತ್ತು. ಆದರೆ ದುರಸ್ತಿ ಪಡಿಸಿ ಬೆಲ್ಟ್ ಮೂಲಕ ಮಣ್ಣು ಸಾಗಿಸುವ ಆಯ್ಕೆ ಪ್ರಾರಂಭಗೊಂಡಿದೆ.</p><p>ರಕ್ಷಣಾ ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ರಕ್ಷಣಾ ಕಾರ್ಯಾಚರಣೆಯಲ್ಲಿ ರೋಬೋಟ್ಗಳನ್ನು ನಿಯೋಜಿಸುವ ಆಯ್ಕೆ ಬಗ್ಗೆ ಸರ್ಕಾರ ಪರಿಶೀಲಿಸುತ್ತಿದೆ. ರಕ್ಷಣಾ ಸಿಬ್ಬಂದಿ ಪ್ರತಿದಿನ ಮೂರು ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಗಾಯಕ್ವಾಡ್ ತಿಳಿಸಿದ್ದರು. </p><p>ಫೆಬ್ರುವರಿ 22ರಂದು ಶ್ರೀಶೈಲಂ ಎಡದಂಡೆ ಕಾಲುವೆ ಯೋಜನೆಯ ಸುರಂಗದ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಸುಮಾರು 8 ಮಂದಿ ಕಾರ್ಮಿಕರು ಸಿಲುಕಿಕೊಂಡಿದ್ದು,ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.</p> .ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಬೆಲ್ಜಿಯಂ ರಾಜಕುಮಾರಿ ಆಸ್ಟ್ರಿಡ್.ಚಂದ್ರಗುತ್ತಿ: ಇಂಡೋ ಇಸ್ಲಾಮಿಕ್ ಶೈಲಿಯ ಮುಸುಕಿನಬಾವಿ ಪತ್ತೆ.ದೇಶದ ಧಾರ್ಮಿಕ ಭಾವನೆಗಳೊಂದಿಗೆ ಎಸ್ಪಿ ಆಟವಾಡುತ್ತಿದೆ: ಸಿಎಂ ಯೋಗಿ ಆದಿತ್ಯನಾಥ್.ನಕ್ಸಲರಿಂದ ವ್ಯಕ್ತಿಯ ಹತ್ಯೆ:ಬಸ್ತಾರ್ ಪ್ರಾಂತ್ಯದಲ್ಲಿ ಈ ವರ್ಷದಲ್ಲೇ 8ನೇ ಪ್ರಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>