ರಾಜಕೀಯ ವಾತಾವರಣವು ಭಿನ್ನವಾಗಿದೆ, ‘ಇಂಡಿಯಾ’ ಮೈತ್ರಿಕೂಟದಲ್ಲಿನ ಒಗ್ಗಟ್ಟಿನ ಕಾರಣದಿಂದಾಗಿ ಎನ್ಡಿಎ ಮೈತ್ರಿಕೂಟದಲ್ಲಿ ತಳಮಳ ಉಂಟಾಗಿದೆ ಎಂದು ಖರ್ಗೆ ಹೇಳಿದ್ದಾರೆ. ‘ಕಳೆದ ಕೆಲವು ತಿಂಗಳುಗಳಲ್ಲಿ ನಾವು ಶ್ರಮವಹಿಸಿ ಕೆಲಸ ಮಾಡಿದ್ದೇವೆ. ಪರಿಸ್ಥಿತಿ ಪೂರಕವಾಗಿ ಇಲ್ಲದಿದ್ದಾಗಲೂ ವಿಧಾನಸಭಾ ಚುನಾವಣೆಗಳಲ್ಲಿ ನಾವು ಬಿಜೆಪಿ ಪಡೆದಿದ್ದಕ್ಕಿಂತ ಹೆಚ್ಚು ಮತಗಳನ್ನು ಪಡೆದಿದ್ದೇವೆ. ಆದರೆ ನಿರೀಕ್ಷೆಯಷ್ಟು ಸ್ಥಾನಗಳು ನಮಗೆ ಬಂದಿಲ್ಲ...’ ಎಂದು ಹೇಳಿದ್ದಾರೆ.