<p><strong>ತಿರುವನಂತಪುರ</strong>: ದೇವಸ್ಥಾನ ಪ್ರವೇಶಿಸುವ ಮುನ್ನ ಪುರುಷ ಭಕ್ತರು ತಮ್ಮ ಮೇಲಂಗಿಯನ್ನು ತೆಗೆಯಬೇಕು ಎಂಬ ನಿಯಮವನ್ನು ಕೈಬಿಡಲು ಕೇರಳದ ದೇಗುಲ ಆಡಳಿತ ಮಂಡಳಿಯೊಂದು ಯೋಜನೆ ರೂಪಿಸಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬುಧವಾರ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪಿಣರಾಯಿ ಅವರು, ‘ದೇವಾಲಯ ಆಡಳಿತ ಮಂಡಳಿಯ ಪ್ರತಿನಿಧಿಯೊಬ್ಬರನ್ನೂ ಇಂದು ಭೇಟಿಯಾದೆ. ಈ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದರು. ಇದು ಒಳ್ಳೆಯ ನಿರ್ಧಾರ, ಒಳ್ಳೆಯ ಸಲಹೆ’ ಎಂದು ಹೇಳಿದರು.</p>.<p>ಆದರೆ, ಯಾವ ದೇಗುಲ ಆಡಳಿತ ಮಂಡಳಿಯ ಯೋಜನೆ ಇದು ಎಂದು ಅವರು ಸ್ಪಷ್ಟಪಡಿಸಿಲ್ಲ.</p>.<p>ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಅವರು ಸ್ಥಾಪಿಸಿರುವ ಶಿವಗಿರಿ ಮಠದ ಸ್ವಾಮಿ ಸಚ್ಚಿದಾನಂದ ಅವರ ಹೇಳಿಕೆ ಬೆನ್ನಲ್ಲೇ ಮಂಡಳಿಯು ಈ ನಿರ್ಧಾರಕ್ಕೆ ಮುಂದಾಗಿದೆ.</p>.<p>ಸ್ವಾಮೀಜಿ ಅವರು ‘ಈ ಪದ್ಧತಿಯು ಸಾಮಾಜಿಕ ಪಿಡುಗು. ಇದನ್ನು ಕೊನೆಗೊಳಿಸಬೇಕು’ ಎಂದು ಮಂಗಳವಾರ ಕರೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ದೇವಸ್ಥಾನ ಪ್ರವೇಶಿಸುವ ಮುನ್ನ ಪುರುಷ ಭಕ್ತರು ತಮ್ಮ ಮೇಲಂಗಿಯನ್ನು ತೆಗೆಯಬೇಕು ಎಂಬ ನಿಯಮವನ್ನು ಕೈಬಿಡಲು ಕೇರಳದ ದೇಗುಲ ಆಡಳಿತ ಮಂಡಳಿಯೊಂದು ಯೋಜನೆ ರೂಪಿಸಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬುಧವಾರ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪಿಣರಾಯಿ ಅವರು, ‘ದೇವಾಲಯ ಆಡಳಿತ ಮಂಡಳಿಯ ಪ್ರತಿನಿಧಿಯೊಬ್ಬರನ್ನೂ ಇಂದು ಭೇಟಿಯಾದೆ. ಈ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದರು. ಇದು ಒಳ್ಳೆಯ ನಿರ್ಧಾರ, ಒಳ್ಳೆಯ ಸಲಹೆ’ ಎಂದು ಹೇಳಿದರು.</p>.<p>ಆದರೆ, ಯಾವ ದೇಗುಲ ಆಡಳಿತ ಮಂಡಳಿಯ ಯೋಜನೆ ಇದು ಎಂದು ಅವರು ಸ್ಪಷ್ಟಪಡಿಸಿಲ್ಲ.</p>.<p>ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಅವರು ಸ್ಥಾಪಿಸಿರುವ ಶಿವಗಿರಿ ಮಠದ ಸ್ವಾಮಿ ಸಚ್ಚಿದಾನಂದ ಅವರ ಹೇಳಿಕೆ ಬೆನ್ನಲ್ಲೇ ಮಂಡಳಿಯು ಈ ನಿರ್ಧಾರಕ್ಕೆ ಮುಂದಾಗಿದೆ.</p>.<p>ಸ್ವಾಮೀಜಿ ಅವರು ‘ಈ ಪದ್ಧತಿಯು ಸಾಮಾಜಿಕ ಪಿಡುಗು. ಇದನ್ನು ಕೊನೆಗೊಳಿಸಬೇಕು’ ಎಂದು ಮಂಗಳವಾರ ಕರೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>