<p><strong>ಹೈದರಾಬಾದ್</strong>: ಫಾರ್ಮುಲಾ– ಇ ರೇಸ್ಗೆ ಸಂಬಂಧಿಸಿದ ಹಣಕಾಸು ಅವ್ಯವಹಾರ ಆರೋಪದಡಿ ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಅವರನ್ನು ಡಿ.30ರವರೆಗೆ ಬಂಧಿಸದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಮಧ್ಯಂತರ ಆದೇಶ ನೀಡಿದೆ.</p>.<p>‘ಪ್ರಕರಣದ ಕುರಿತಾದ ತನಿಖೆ ಮುಂದುವರಿಯಲಿ ಮತ್ತು ಕೆಟಿಆರ್ ಅವರು ತನಿಖೆಗೆ ಸಹಕಾರ ನೀಡಬೇಕು’ ಎಂದು ನ್ಯಾಯಮೂರ್ತಿ ಶ್ರವಣ್ ಕುಮಾರ್ ಅವರ ಪೀಠವು ಹೇಳಿದೆ.</p>.<p>ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ)ಕೆಟಿಆರ್ ವಿರುದ್ಧ ಗುರುವಾರ ಪ್ರಕರಣ ದಾಖಲಿಸಿಕೊಂಡಿತ್ತು. ಎಸಿಬಿ ದಾಖಲಿಸಿಕೊಂಡಿರುವ ಪ್ರಕರಣವನ್ನು ವಜಾಗೊಳಿಸಲು ನಿರ್ದೇಶನ ನೀಡಬೇಕೆಂದು ಕೋರಿ ಕೆಟಿಆರ್ ಅವರು ಶುಕ್ರವಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ತುರ್ತು ವಿಚಾರಣೆಗೆ ಮನವಿ ಮಾಡಿದ್ದರು. </p>.<p>ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಡಿ.30ಕ್ಕೆ ಮುಂದೂಡಿದೆ.</p>.<p>ಕೆಟಿಆರ್ ಅವರು ಪೌರಾಡಳಿತ ಸಚಿವರಾಗಿದ್ದಾಗ ಅನುಮತಿ ಪಡೆಯದೆ ಫಾರ್ಮುಲಾ–ಇ ರೇಸ್ ಆಯೋಜಕರಿಗೆ ₹55 ಕೋಟಿ ನೀಡಿದ್ದಾರೆ ಎಂದು ಎಸಿಬಿ ಆರೋಪಿಸಿದೆ.</p>.<p>ಫಾರ್ಮುಲಾ– ಇ ರೇಸ್ ವಿಚಾರವಾಗಿ ತೆಲಂಗಾಣ ವಿಧಾನಸಭೆಯಲ್ಲಿ ಶುಕ್ರವಾರ ಗದ್ದಲ ನಡೆಯಿತು.</p>.<p><strong>₹500 ಕೋಟಿ ಉಳಿತಾಯವಾಗಿದೆ: </strong>ಫಾರ್ಮುಲಾ– ಇ ರೇಸ್ ವಿಚಾರವಾಗಿ ಕೆ.ಟಿ.ರಾಮರಾವ್ ವಿರುದ್ಧ ವಾಗ್ದಾಳಿ ನಡೆಸಿದ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು, ‘ರೇಸ್ ನಡೆಸದೇ ಇರುವುದರಿಂದ ಸರ್ಕಾರಕ್ಕೆ ₹500 ಕೋಟಿ ಉಳಿತಾಯವಾಗಿದೆ’ ಎಂದು ಹೇಳಿದ್ದಾರೆ.</p>.<p>ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ‘₹55 ಕೋಟಿ ನೀಡಿರುವುದಾಗಿ ಕೆಟಿಆರ್ ಹೇಳಿದ್ದರು. ಆದರೆ ಅವರು ₹600 ಕೋಟಿಯ ಒಪ್ಪಂದ ಮಾಡಿಕೊಂಡಿದ್ದರು. ನಾನು ಅನುಮತಿ ನೀಡಿದ್ದರೆ ₹600 ಕೋಟಿ ವ್ಯರ್ಥವಾಗುತ್ತಿತ್ತು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಫಾರ್ಮುಲಾ– ಇ ರೇಸ್ಗೆ ಸಂಬಂಧಿಸಿದ ಹಣಕಾಸು ಅವ್ಯವಹಾರ ಆರೋಪದಡಿ ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಅವರನ್ನು ಡಿ.30ರವರೆಗೆ ಬಂಧಿಸದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಮಧ್ಯಂತರ ಆದೇಶ ನೀಡಿದೆ.</p>.<p>‘ಪ್ರಕರಣದ ಕುರಿತಾದ ತನಿಖೆ ಮುಂದುವರಿಯಲಿ ಮತ್ತು ಕೆಟಿಆರ್ ಅವರು ತನಿಖೆಗೆ ಸಹಕಾರ ನೀಡಬೇಕು’ ಎಂದು ನ್ಯಾಯಮೂರ್ತಿ ಶ್ರವಣ್ ಕುಮಾರ್ ಅವರ ಪೀಠವು ಹೇಳಿದೆ.</p>.<p>ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ)ಕೆಟಿಆರ್ ವಿರುದ್ಧ ಗುರುವಾರ ಪ್ರಕರಣ ದಾಖಲಿಸಿಕೊಂಡಿತ್ತು. ಎಸಿಬಿ ದಾಖಲಿಸಿಕೊಂಡಿರುವ ಪ್ರಕರಣವನ್ನು ವಜಾಗೊಳಿಸಲು ನಿರ್ದೇಶನ ನೀಡಬೇಕೆಂದು ಕೋರಿ ಕೆಟಿಆರ್ ಅವರು ಶುಕ್ರವಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ತುರ್ತು ವಿಚಾರಣೆಗೆ ಮನವಿ ಮಾಡಿದ್ದರು. </p>.<p>ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಡಿ.30ಕ್ಕೆ ಮುಂದೂಡಿದೆ.</p>.<p>ಕೆಟಿಆರ್ ಅವರು ಪೌರಾಡಳಿತ ಸಚಿವರಾಗಿದ್ದಾಗ ಅನುಮತಿ ಪಡೆಯದೆ ಫಾರ್ಮುಲಾ–ಇ ರೇಸ್ ಆಯೋಜಕರಿಗೆ ₹55 ಕೋಟಿ ನೀಡಿದ್ದಾರೆ ಎಂದು ಎಸಿಬಿ ಆರೋಪಿಸಿದೆ.</p>.<p>ಫಾರ್ಮುಲಾ– ಇ ರೇಸ್ ವಿಚಾರವಾಗಿ ತೆಲಂಗಾಣ ವಿಧಾನಸಭೆಯಲ್ಲಿ ಶುಕ್ರವಾರ ಗದ್ದಲ ನಡೆಯಿತು.</p>.<p><strong>₹500 ಕೋಟಿ ಉಳಿತಾಯವಾಗಿದೆ: </strong>ಫಾರ್ಮುಲಾ– ಇ ರೇಸ್ ವಿಚಾರವಾಗಿ ಕೆ.ಟಿ.ರಾಮರಾವ್ ವಿರುದ್ಧ ವಾಗ್ದಾಳಿ ನಡೆಸಿದ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು, ‘ರೇಸ್ ನಡೆಸದೇ ಇರುವುದರಿಂದ ಸರ್ಕಾರಕ್ಕೆ ₹500 ಕೋಟಿ ಉಳಿತಾಯವಾಗಿದೆ’ ಎಂದು ಹೇಳಿದ್ದಾರೆ.</p>.<p>ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ‘₹55 ಕೋಟಿ ನೀಡಿರುವುದಾಗಿ ಕೆಟಿಆರ್ ಹೇಳಿದ್ದರು. ಆದರೆ ಅವರು ₹600 ಕೋಟಿಯ ಒಪ್ಪಂದ ಮಾಡಿಕೊಂಡಿದ್ದರು. ನಾನು ಅನುಮತಿ ನೀಡಿದ್ದರೆ ₹600 ಕೋಟಿ ವ್ಯರ್ಥವಾಗುತ್ತಿತ್ತು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>