<p><strong>ಜಬಲಪುರ</strong>: ಮಧ್ಯಪ್ರದೇಶದ ಸಿಹೋರಾ ಪಟ್ಟಣದಲ್ಲಿ ಗುರುವಾರ ರಾತ್ರಿ ಎರಡು ಧಾರ್ಮಿಕ ಗುಂಪುಗಳ ನಡುವೆ ಹಿಂಸಾಚಾರ ನಡೆದಿದ್ದು, ಪೊಲೀಸರು 49 ಮಂದಿಯನ್ನು ಬಂಧಿಸಿದ್ದಾರೆ.</p>.<p>ಜಿಲ್ಲಾ ಕೇಂದ್ರದಿಂದ 40 ಕಿ.ಮೀ ದೂರದಲ್ಲಿರುವ ಸಿಹೋರಾದ ಆಜಾದ್ ಚೌಕದ ಬಳಿ ಮಸೀದಿ ಹಾಗೂ ದುರ್ಗಾ ದೇವಾಲಯ ಎದುರಿನ ಸ್ಥಳದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಹಿಂಸಾಚಾರ ನಡೆದಿದೆ.</p>.<p>‘ದೇವಾಲಯದಲ್ಲಿ ‘ಆರತಿ’ ನಡೆಯುತ್ತಿದ್ದ ಸಮಯದಲ್ಲಿ ಕೆಲವು ಕಿಡಿಗೇಡಿಗಳು ದೇಗುಲದ ಕಬ್ಬಿಣದ ಗೇಟನ್ನು ಮುರಿದು ಕಲ್ಲು ತೂರಾಟ ನಡೆಸಿದ್ದಾರೆ’ ಎಂದು ಹಿಂದೂಪರ ಸಂಘಟನೆಗಳು ಆರೋಪಿಸಿವೆ.</p>.<p>‘ರಂಜಾನ್ ವಿಶೇಷ ಪ್ರಾರ್ಥನೆ ಮತ್ತು ದೇವಾಲಯದ ಆರತಿ ಏಕಕಾಲದಲ್ಲಿ ನಡೆಯುತ್ತಿದ್ದಾಗ ಈ ಘರ್ಷಣೆ ಸಂಭವಿಸಿದೆ’ ಎಂದು ಸ್ಥಳೀಯ ಮುಸ್ಲಿಮರು ಹೇಳಿದ್ದಾರೆ. </p>.<p>‘ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ಗಳನ್ನು ಸಿಡಿಸಿದರು. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಪತ್ ಉಪಾಧ್ಯಾಯ ತಿಳಿಸಿದ್ದಾರೆ.</p>.<p>‘ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ’ ಎಂದು ಉಪಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಬಲಪುರ</strong>: ಮಧ್ಯಪ್ರದೇಶದ ಸಿಹೋರಾ ಪಟ್ಟಣದಲ್ಲಿ ಗುರುವಾರ ರಾತ್ರಿ ಎರಡು ಧಾರ್ಮಿಕ ಗುಂಪುಗಳ ನಡುವೆ ಹಿಂಸಾಚಾರ ನಡೆದಿದ್ದು, ಪೊಲೀಸರು 49 ಮಂದಿಯನ್ನು ಬಂಧಿಸಿದ್ದಾರೆ.</p>.<p>ಜಿಲ್ಲಾ ಕೇಂದ್ರದಿಂದ 40 ಕಿ.ಮೀ ದೂರದಲ್ಲಿರುವ ಸಿಹೋರಾದ ಆಜಾದ್ ಚೌಕದ ಬಳಿ ಮಸೀದಿ ಹಾಗೂ ದುರ್ಗಾ ದೇವಾಲಯ ಎದುರಿನ ಸ್ಥಳದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಹಿಂಸಾಚಾರ ನಡೆದಿದೆ.</p>.<p>‘ದೇವಾಲಯದಲ್ಲಿ ‘ಆರತಿ’ ನಡೆಯುತ್ತಿದ್ದ ಸಮಯದಲ್ಲಿ ಕೆಲವು ಕಿಡಿಗೇಡಿಗಳು ದೇಗುಲದ ಕಬ್ಬಿಣದ ಗೇಟನ್ನು ಮುರಿದು ಕಲ್ಲು ತೂರಾಟ ನಡೆಸಿದ್ದಾರೆ’ ಎಂದು ಹಿಂದೂಪರ ಸಂಘಟನೆಗಳು ಆರೋಪಿಸಿವೆ.</p>.<p>‘ರಂಜಾನ್ ವಿಶೇಷ ಪ್ರಾರ್ಥನೆ ಮತ್ತು ದೇವಾಲಯದ ಆರತಿ ಏಕಕಾಲದಲ್ಲಿ ನಡೆಯುತ್ತಿದ್ದಾಗ ಈ ಘರ್ಷಣೆ ಸಂಭವಿಸಿದೆ’ ಎಂದು ಸ್ಥಳೀಯ ಮುಸ್ಲಿಮರು ಹೇಳಿದ್ದಾರೆ. </p>.<p>‘ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ಗಳನ್ನು ಸಿಡಿಸಿದರು. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಪತ್ ಉಪಾಧ್ಯಾಯ ತಿಳಿಸಿದ್ದಾರೆ.</p>.<p>‘ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ’ ಎಂದು ಉಪಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>