<p><strong>ನವದೆಹಲಿ:</strong> ಪೂರ್ವ ಲಡಾಖ್ನ ಪಾಂಗಾಂಗ್ ಸರೋವರ ಬಳಿಚೀನಾ ಸೇನೆ ಮತ್ತೊಮ್ಮೆ ಯಥಾಸ್ಥಿತಿ ಉಲ್ಲಂಘಿಸುವ ಪ್ರಯತ್ನ ಮಾಡಿದೆ. ಆದರೆ, ಚೀನಾದ ಕಡೆಯಿಂದ ಇಂತಹುದೊಂದು ದುಸ್ಸಾಹಸವನ್ನು ಅಂದಾಜಿಸಿದ್ದ ಭಾರತದ ಯೋಧರು, ಈ ಯತ್ನವನ್ನು ಹಿಮ್ಮೆಟ್ಟಿಸಿದ್ದಾರೆ ಎಂದು ಭಾರತದ ಸೇನೆಯ ವಕ್ತಾರ ಕರ್ನಲ್ ಅಮನ್ ಆನಂದ್ ತಿಳಿಸಿದ್ದಾರೆ. ಚೀನಾದ ವಿಫಲ ಯತ್ನದಿಂದಾಗಿ ಕೆಲ ತಿಂಗಳ ಬಳಿಕ ಭಾರತ–ಚೀನಾ ಗಡಿಯಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.</p>.<p>ನಾಲ್ಕು ತಿಂಗಳಿಂದಪಾಂಗಾಂಗ್ ಸರೋವರದ ಉತ್ತರದ ದಡದಲ್ಲಿ ಬೀಡುಬಿಟ್ಟಿದ್ದ ಚೀನಾ ಸೇನೆ ಮೊದಲ ಬಾರಿಗೆ ದಕ್ಷಿಣ ದಡದತ್ತ ಬಂದಿದ್ದು, ಸಮೀಪದ ಪರ್ವತವೊಂದನ್ನು ವಶಪಡಿಸಿಕೊಳ್ಳುವ ವಿಫಲ ಯತ್ನ ನಡೆಸಿದೆ ಎಂದು ಅಮನ್ ಆನಂದ್ ಹೇಳಿದ್ದಾರೆ.</p>.<p>ಗಡಿ ಪ್ರದೇಶದ ಪರ್ವತ ಶ್ರೇಣಿಯಲ್ಲಿ ಚೀನಾ ಯೋಧರ ಚಲನವಲನಗಳು ಗಮನಕ್ಕೆ ಬಂದ ತಕ್ಷಣ ಭಾರತೀಯ ಯೋಧರು ಕೂಡ ಆ ಪ್ರದೇಶದಲ್ಲಿ ಜಮಾವಣೆಗೊಂಡಿದ್ದಾರೆ. ಲೆಹ್ ಪರ್ವತ ಶ್ರೇಣಿಗಳ ಮೇಲೆ ಭಾರತದ ಯುದ್ಧ ವಿಮಾನಗಳು ಹಾರಾಟ ನಡೆಸುತ್ತಿವೆ.</p>.<p>ಚೀನಾ ಯೋಧರ ಅತಿಕ್ರಮಣ ತಡೆಯಲು ಗಡಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಎರಡೂ ಕಡೆಯ ಯೋಧರು ಸ್ಥಳದಲ್ಲಿ ಬೀಡುಬಿಟ್ಟಿದ್ದು,ಸದ್ಯಕ್ಕೆ ಪರಿಸ್ಥಿತಿ ಸಂಘರ್ಷದ ಮಟ್ಟವನ್ನು ತಲುಪಿಲ್ಲ ಎಂದು ಮೂಲಗಳು ತಿಳಿಸಿವೆ.</p>.<p>ಗಡಿಯಲ್ಲಿ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ತಿಳಿಗೊಳಿಸಲು ಚುಶುಲ್ ಎಂಬಲ್ಲಿ ಎರಡೂ ಕಡೆಯ ಬ್ರಿಗೇಡ್ ಕಮಾಂಡರ್ ಹಂತದ ಸಭೆ ಪ್ರಗತಿಯಲ್ಲಿದೆ.</p>.<p>ಭಾರತದ ಸಾರ್ವಭೌಮತೆ ಮತ್ತು ಗಡಿ ರಕ್ಷಣೆ ನಮ್ಮ ಆದ್ಯತೆಯಾಗಿದೆ. ಶಾಂತಿಯುತ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಲು ಭಾರತ ಬದ್ಧವಾಗಿದೆ ಎಂದು ಭಾರತೀಯ ಸೇನೆ ಪ್ರತಿಪಾದಿಸಿದೆ.</p>.<p class="Subhead">ಭಾರತ–ಚೀನಾ ವಾಕ್ಸಮರ: ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಯಥಾಸ್ಥಿತಿ ಉಲ್ಲಂಘನೆ ಆರೋಪವನ್ನು ಚೀನಾ ತಳ್ಳಿ ಹಾಕಿದೆ. ಗಡಿಯಲ್ಲಿ ಯಥಾಸ್ಥಿತಿಯನ್ನೂ ಚೀನಾ ಎಂದಿಗೂ ಉಲ್ಲಂಘಿಸಿಲ್ಲ. ಎಲ್ಎಸಿಗೆ ತಾನು ಬದ್ಧ<br />ವಾಗಿರುವುದಾಗಿ ಚೀನಾದ ಸೇನೆಯು ಸ್ಪಷ್ಟಪಡಿಸಿದೆ.</p>.<p>‘ಚೀನಾ ಸೇನೆ ವಾಸ್ತವ ನಿಯಂತ್ರಣ ರೇಖೆಗೆ ಸಂಪೂರ್ಣ ಬದ್ಧವಾಗಿದ್ದು, ಎಂದಿಗೂ ಗಡಿಯನ್ನು ದಾಟಿಲ್ಲ. ಈ ಬಗ್ಗೆ ಎರಡೂ ಕಡೆಯ ಸೇನಾಧಿಕಾರಿಗಳು ನಿಕಟ ಸಂಪರ್ಕದಲ್ಲಿದ್ದಾರೆ’ ಎಂದು ಚೀನಾ ರಕ್ಷಣಾ ಸಚಿವಾಲಯದ ವಕ್ತಾರ ಜಾಹೊ ಲಿಜಿಯಾನ್ ಪ್ರತಿಕ್ರಿಯಿಸಿದ್ದಾರೆ.</p>.<p class="Subhead">ಪುನರಾವರ್ತನೆ: ಗಾಲ್ವನ್ ಕಣಿವೆಯಲ್ಲಿ ಜೂನ್ 15ರಂದು ಭಾರತ–ಚೀನಾ ಯೋಧರ ನಡುವಿನ ಸಂಘರ್ಷದ ನಂತರ ನಡೆದ ಮೊದಲ ಪ್ರಮುಖ ಘಟನೆ ಇದಾಗಿದೆ. ಆ ಘಟನೆಯಲ್ಲಿ ಎರಡು ಕಡೆ ಅಪಾರ ಸಾವು, ನೋವುಗಳಾಗಿದ್ದವು. </p>.<p>ಈ ಬೆಳವಣಿಗೆಯ ನಂತರ ಕಳೆದ ಎರಡೂವರೆ ತಿಂಗಳಲ್ಲಿಉಭಯ ರಾಷ್ಟ್ರಗಳು ಗಡಿಯಲ್ಲಿ ಶಾಂತಿ ಸ್ಥಾಪನೆ ಸಂಬಂಧ ಐದು ಸುತ್ತಿನ ಸೇನಾ ಮತ್ತು ರಾಜತಾಂತ್ರಿಕ ಮಾತುಕತೆ ನಡೆಸಿವೆ. ಆದರೆ, ಸಮಸ್ಯೆಗೆ ಪರಿಹಾರ ಕಂಡು<br />ಕೊಳ್ಳುವ ದಿಸೆಯಲ್ಲಿ ಈ ಮಾತುಕತೆಗಳು ಮಹತ್ವದ ಪ್ರಗತಿ ಸಾಧಿಸಿಲ್ಲ.</p>.<p>ಗಡಿ ಪ್ರದೇಶದಲ್ಲಿ ಏಪ್ರಿಲ್ನಲ್ಲಿದ್ದ ಸ್ಥಿತಿಯನ್ನು ಕಾಯ್ದುಕೊಳ್ಳಲು ಲಡಾಖ್ನಿಂದ ಆದಷ್ಟೂ ಬೇಗ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ಭಾರತ ಪಟ್ಟು ಹಿಡಿದಿದೆ.</p>.<p>ಪಾಂಗಾಂಗ್ ಸರೋವರದ ದಕ್ಷಿಣ ದಡದಲ್ಲಿ ಏಕಪಕ್ಷೀಯವಾಗಿ ಯಥಾಸ್ಥಿತಿ ಬದಲಿಸುವ ಚೀನಾ ಸೇನೆಯ ಯತ್ನವನ್ನು ಭಾರತೀಯ ಯೋಧರು ವಿಫಲಗೊಳಿಸಿದ್ದಾರೆ ಎಂದು ಸೇನಾಧಿಕಾರಿ ಕರ್ನಲ್ ಅಮನ್ ಆನಂದ್ ಹೇಳಿದ್ದಾರೆ.</p>.<p><strong>ಗಡಿಯಲ್ಲಿ ಚೀನಾ ಸೇನೆಯ ಹೆಲಿಫೋರ್ಟ್</strong></p>.<p>ಭಾರತ, ಭೂತಾನ್ ಮತ್ತು ಚೀನಾ ಗಡಿ ಸಂಧಿಸುವ ಜಾಗದಲ್ಲಿ ಚೀನಾ ಸೇನೆಯು ಹೆಲಿಪೋರ್ಟ್ ನಿರ್ಮಿಸುತ್ತಿರುವ ಚಿತ್ರಗಳನ್ನು ಉಪಗ್ರಹ ಸೆರೆ ಹಿಡಿದಿದೆ.</p>.<p>ಚೀನಾದ ಎರಡು ಪ್ರಮುಖ ಕ್ಷಿಪಣಿ ಅಭಿವೃದ್ಧಿ ಕೇಂದ್ರಗಳಿಂದ ಹೆಲಿಪೋರ್ಟ್ ಸಮಾನ ದೂರದಲ್ಲಿದೆ. ಮೂರು ದೇಶಗಳ ತ್ರಿಸಂಧಿ ಜಾಗವಾದ ದೋಕಲಾ ಪ್ರದೇಶಕ್ಕೂ ಅತ್ಯಂತ ಸನಿಹದಲ್ಲಿದೆ ಎಂದು ಬೇಹುಗಾರಿಕಾ ವಿಶ್ಲೇಷಣಾ ಸಂಸ್ಥೆ ಡೆಟ್ರೆಸ್ಫಾ ಟ್ವೀಟ್ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪೂರ್ವ ಲಡಾಖ್ನ ಪಾಂಗಾಂಗ್ ಸರೋವರ ಬಳಿಚೀನಾ ಸೇನೆ ಮತ್ತೊಮ್ಮೆ ಯಥಾಸ್ಥಿತಿ ಉಲ್ಲಂಘಿಸುವ ಪ್ರಯತ್ನ ಮಾಡಿದೆ. ಆದರೆ, ಚೀನಾದ ಕಡೆಯಿಂದ ಇಂತಹುದೊಂದು ದುಸ್ಸಾಹಸವನ್ನು ಅಂದಾಜಿಸಿದ್ದ ಭಾರತದ ಯೋಧರು, ಈ ಯತ್ನವನ್ನು ಹಿಮ್ಮೆಟ್ಟಿಸಿದ್ದಾರೆ ಎಂದು ಭಾರತದ ಸೇನೆಯ ವಕ್ತಾರ ಕರ್ನಲ್ ಅಮನ್ ಆನಂದ್ ತಿಳಿಸಿದ್ದಾರೆ. ಚೀನಾದ ವಿಫಲ ಯತ್ನದಿಂದಾಗಿ ಕೆಲ ತಿಂಗಳ ಬಳಿಕ ಭಾರತ–ಚೀನಾ ಗಡಿಯಲ್ಲಿ ಮತ್ತೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.</p>.<p>ನಾಲ್ಕು ತಿಂಗಳಿಂದಪಾಂಗಾಂಗ್ ಸರೋವರದ ಉತ್ತರದ ದಡದಲ್ಲಿ ಬೀಡುಬಿಟ್ಟಿದ್ದ ಚೀನಾ ಸೇನೆ ಮೊದಲ ಬಾರಿಗೆ ದಕ್ಷಿಣ ದಡದತ್ತ ಬಂದಿದ್ದು, ಸಮೀಪದ ಪರ್ವತವೊಂದನ್ನು ವಶಪಡಿಸಿಕೊಳ್ಳುವ ವಿಫಲ ಯತ್ನ ನಡೆಸಿದೆ ಎಂದು ಅಮನ್ ಆನಂದ್ ಹೇಳಿದ್ದಾರೆ.</p>.<p>ಗಡಿ ಪ್ರದೇಶದ ಪರ್ವತ ಶ್ರೇಣಿಯಲ್ಲಿ ಚೀನಾ ಯೋಧರ ಚಲನವಲನಗಳು ಗಮನಕ್ಕೆ ಬಂದ ತಕ್ಷಣ ಭಾರತೀಯ ಯೋಧರು ಕೂಡ ಆ ಪ್ರದೇಶದಲ್ಲಿ ಜಮಾವಣೆಗೊಂಡಿದ್ದಾರೆ. ಲೆಹ್ ಪರ್ವತ ಶ್ರೇಣಿಗಳ ಮೇಲೆ ಭಾರತದ ಯುದ್ಧ ವಿಮಾನಗಳು ಹಾರಾಟ ನಡೆಸುತ್ತಿವೆ.</p>.<p>ಚೀನಾ ಯೋಧರ ಅತಿಕ್ರಮಣ ತಡೆಯಲು ಗಡಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಎರಡೂ ಕಡೆಯ ಯೋಧರು ಸ್ಥಳದಲ್ಲಿ ಬೀಡುಬಿಟ್ಟಿದ್ದು,ಸದ್ಯಕ್ಕೆ ಪರಿಸ್ಥಿತಿ ಸಂಘರ್ಷದ ಮಟ್ಟವನ್ನು ತಲುಪಿಲ್ಲ ಎಂದು ಮೂಲಗಳು ತಿಳಿಸಿವೆ.</p>.<p>ಗಡಿಯಲ್ಲಿ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ತಿಳಿಗೊಳಿಸಲು ಚುಶುಲ್ ಎಂಬಲ್ಲಿ ಎರಡೂ ಕಡೆಯ ಬ್ರಿಗೇಡ್ ಕಮಾಂಡರ್ ಹಂತದ ಸಭೆ ಪ್ರಗತಿಯಲ್ಲಿದೆ.</p>.<p>ಭಾರತದ ಸಾರ್ವಭೌಮತೆ ಮತ್ತು ಗಡಿ ರಕ್ಷಣೆ ನಮ್ಮ ಆದ್ಯತೆಯಾಗಿದೆ. ಶಾಂತಿಯುತ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಲು ಭಾರತ ಬದ್ಧವಾಗಿದೆ ಎಂದು ಭಾರತೀಯ ಸೇನೆ ಪ್ರತಿಪಾದಿಸಿದೆ.</p>.<p class="Subhead">ಭಾರತ–ಚೀನಾ ವಾಕ್ಸಮರ: ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಯಥಾಸ್ಥಿತಿ ಉಲ್ಲಂಘನೆ ಆರೋಪವನ್ನು ಚೀನಾ ತಳ್ಳಿ ಹಾಕಿದೆ. ಗಡಿಯಲ್ಲಿ ಯಥಾಸ್ಥಿತಿಯನ್ನೂ ಚೀನಾ ಎಂದಿಗೂ ಉಲ್ಲಂಘಿಸಿಲ್ಲ. ಎಲ್ಎಸಿಗೆ ತಾನು ಬದ್ಧ<br />ವಾಗಿರುವುದಾಗಿ ಚೀನಾದ ಸೇನೆಯು ಸ್ಪಷ್ಟಪಡಿಸಿದೆ.</p>.<p>‘ಚೀನಾ ಸೇನೆ ವಾಸ್ತವ ನಿಯಂತ್ರಣ ರೇಖೆಗೆ ಸಂಪೂರ್ಣ ಬದ್ಧವಾಗಿದ್ದು, ಎಂದಿಗೂ ಗಡಿಯನ್ನು ದಾಟಿಲ್ಲ. ಈ ಬಗ್ಗೆ ಎರಡೂ ಕಡೆಯ ಸೇನಾಧಿಕಾರಿಗಳು ನಿಕಟ ಸಂಪರ್ಕದಲ್ಲಿದ್ದಾರೆ’ ಎಂದು ಚೀನಾ ರಕ್ಷಣಾ ಸಚಿವಾಲಯದ ವಕ್ತಾರ ಜಾಹೊ ಲಿಜಿಯಾನ್ ಪ್ರತಿಕ್ರಿಯಿಸಿದ್ದಾರೆ.</p>.<p class="Subhead">ಪುನರಾವರ್ತನೆ: ಗಾಲ್ವನ್ ಕಣಿವೆಯಲ್ಲಿ ಜೂನ್ 15ರಂದು ಭಾರತ–ಚೀನಾ ಯೋಧರ ನಡುವಿನ ಸಂಘರ್ಷದ ನಂತರ ನಡೆದ ಮೊದಲ ಪ್ರಮುಖ ಘಟನೆ ಇದಾಗಿದೆ. ಆ ಘಟನೆಯಲ್ಲಿ ಎರಡು ಕಡೆ ಅಪಾರ ಸಾವು, ನೋವುಗಳಾಗಿದ್ದವು. </p>.<p>ಈ ಬೆಳವಣಿಗೆಯ ನಂತರ ಕಳೆದ ಎರಡೂವರೆ ತಿಂಗಳಲ್ಲಿಉಭಯ ರಾಷ್ಟ್ರಗಳು ಗಡಿಯಲ್ಲಿ ಶಾಂತಿ ಸ್ಥಾಪನೆ ಸಂಬಂಧ ಐದು ಸುತ್ತಿನ ಸೇನಾ ಮತ್ತು ರಾಜತಾಂತ್ರಿಕ ಮಾತುಕತೆ ನಡೆಸಿವೆ. ಆದರೆ, ಸಮಸ್ಯೆಗೆ ಪರಿಹಾರ ಕಂಡು<br />ಕೊಳ್ಳುವ ದಿಸೆಯಲ್ಲಿ ಈ ಮಾತುಕತೆಗಳು ಮಹತ್ವದ ಪ್ರಗತಿ ಸಾಧಿಸಿಲ್ಲ.</p>.<p>ಗಡಿ ಪ್ರದೇಶದಲ್ಲಿ ಏಪ್ರಿಲ್ನಲ್ಲಿದ್ದ ಸ್ಥಿತಿಯನ್ನು ಕಾಯ್ದುಕೊಳ್ಳಲು ಲಡಾಖ್ನಿಂದ ಆದಷ್ಟೂ ಬೇಗ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ಭಾರತ ಪಟ್ಟು ಹಿಡಿದಿದೆ.</p>.<p>ಪಾಂಗಾಂಗ್ ಸರೋವರದ ದಕ್ಷಿಣ ದಡದಲ್ಲಿ ಏಕಪಕ್ಷೀಯವಾಗಿ ಯಥಾಸ್ಥಿತಿ ಬದಲಿಸುವ ಚೀನಾ ಸೇನೆಯ ಯತ್ನವನ್ನು ಭಾರತೀಯ ಯೋಧರು ವಿಫಲಗೊಳಿಸಿದ್ದಾರೆ ಎಂದು ಸೇನಾಧಿಕಾರಿ ಕರ್ನಲ್ ಅಮನ್ ಆನಂದ್ ಹೇಳಿದ್ದಾರೆ.</p>.<p><strong>ಗಡಿಯಲ್ಲಿ ಚೀನಾ ಸೇನೆಯ ಹೆಲಿಫೋರ್ಟ್</strong></p>.<p>ಭಾರತ, ಭೂತಾನ್ ಮತ್ತು ಚೀನಾ ಗಡಿ ಸಂಧಿಸುವ ಜಾಗದಲ್ಲಿ ಚೀನಾ ಸೇನೆಯು ಹೆಲಿಪೋರ್ಟ್ ನಿರ್ಮಿಸುತ್ತಿರುವ ಚಿತ್ರಗಳನ್ನು ಉಪಗ್ರಹ ಸೆರೆ ಹಿಡಿದಿದೆ.</p>.<p>ಚೀನಾದ ಎರಡು ಪ್ರಮುಖ ಕ್ಷಿಪಣಿ ಅಭಿವೃದ್ಧಿ ಕೇಂದ್ರಗಳಿಂದ ಹೆಲಿಪೋರ್ಟ್ ಸಮಾನ ದೂರದಲ್ಲಿದೆ. ಮೂರು ದೇಶಗಳ ತ್ರಿಸಂಧಿ ಜಾಗವಾದ ದೋಕಲಾ ಪ್ರದೇಶಕ್ಕೂ ಅತ್ಯಂತ ಸನಿಹದಲ್ಲಿದೆ ಎಂದು ಬೇಹುಗಾರಿಕಾ ವಿಶ್ಲೇಷಣಾ ಸಂಸ್ಥೆ ಡೆಟ್ರೆಸ್ಫಾ ಟ್ವೀಟ್ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>